Homeಮುಖಪುಟಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ಈಗಲೂ ಚೀನಾ ದೇಶವು ತನ್ನ ವಿಸ್ತರಣೆಯನ್ನು ಮುಂದುವರೆಸುತ್ತಿದೆ. ಹಲವು ದೇಶಗಳು ಅದರ ಪರ ಇವೆ. ಇಂತಹ ಸಂದರ್ಭದಲ್ಲಿ ಭಾರತವು ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಚೀನಾವನ್ನು ಮೀರಿಸಬೇಕಾಗಿದೆ.

- Advertisement -
- Advertisement -

ಸಾಂಕ್ರಾಮಿಕ ಸಮಯದಲ್ಲಿ ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ. ಅದು ಈಗಲೂ ವಿಸ್ತರಣೆಯಲ್ಲಿ ತೊಡಗಿದೆ. ಚೀನಾದ ವಿಸ್ತರಣೆಗೆ ಭಾರತದ ಪ್ರತಿಕ್ರಿಯೆಯು ಅದನ್ನು ತಬ್ಬಿಬ್ಬುಗೊಳಿಸಿದೆ. ಚೀನಾದಾ ವಿಸ್ತರಣಾವಾದಿ ನೀತಿಯನ್ನು ಇಡೀ ಪ್ರಪಂಚವೇ ನೋಡಿದೆ. ಈಗ ಅದು ತೈವಾನ್ ಮತ್ತು ವಿಯೆಟ್ನಾಂ ಮೇಲೆ ದಾಳಿ ಮಾಡುತ್ತಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ಈಗಲೂ ಚೀನಾ ದೇಶವು ತನ್ನ ವಿಸ್ತರಣೆಯನ್ನು ಮುಂದುವರೆಸುತ್ತಿದೆ. ಹಲವು ದೇಶಗಳು ಅದರ ಪರ ಇವೆ. ಇಂತಹ ಸಂದರ್ಭದಲ್ಲಿ ಭಾರತವು ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಚೀನಾವನ್ನು ಮೀರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ವಿಜಯದಶಮಿ ಪ್ರಯುಕ್ತ ದಸರಾ ಭಾಷಣದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ವಿಧಿ 370ನ್ನು ರದ್ದುಗೊಳಿಸಲಾಯಿತು. ನಂತರ ರಾಮಮಂದಿರದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬಂದಿತ್ತು. ಸಿಎಎ ಕಾನೂನು ಜಾರಿಗೊಳಿಸಲಾಗಿತ್ತು. ಹಲವು ಅಭಿವೃದ್ದಿಗಳನ್ನು ಸಾಧಿಸಿದ್ದೇವು. ಆದರೆ ಕೊರೊನಾ ಸಾಂಕ್ರಾಮಿಕ ಅವೆಲ್ಲವನ್ನು ಅಳಿಸಿಹಾಕಿಬಿಟ್ಟಿತು ಎಂದರು.

ನಾವು ಎಲ್ಲರೊಂದಿಗೆ ಸ್ನೇಹದಿಂದ ಇದ್ದೇವೆ. ಇದು ನಮ್ಮ ಸ್ವಭಾವ. ಈ ನಮ್ಮ ನಡೆಯನ್ನು ದೌರ್ಬಲ್ಯ ಎಂದು ಭಾವಿಸಿ ಚೀನಾ ನಮ್ಮ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿ ನಾವು ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಚೀನಾವನ್ನು ಮೀರಿಸಿ ಬೆಳೆಯಬೇಕಾಗಿದೆ. ನೆರೆ ಹೊರೆಯ ದೇಶಗಳೊಂದಿಗೆ ಸ್ನೇಹ ಸಂಪಾದಿಸಬೇಕಾಗಿದೆ ಎಂದು ಹೇಳಿದ್ದಾರೆ.

ಸಿಎಎ ಯಾವುದೇ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ವಿರೋಧಿಸುವುದಿಲ್ಲ. ಆದರೆ ಕೆಲವರು ಇದು ಮುಸ್ಲಿಂ ಸಮುದಾಯದ ವಿರುದ್ಧವಿದೆ ಎಂಬ ಸುಳ್ಳು ಕಲ್ಪನೆಯನ್ನು ಪ್ರಚಾರ ಮಾಡುವ ಮೂಲಕ ನಮ್ಮ ಮುಸ್ಲಿಂ ಸಹೋದರರನ್ನು ದಾರಿ ತಪ್ಪಿಸಿದರು. ಸಿಎಎ ಬಳಸಿ, ಅವಕಾಶವಾದಿಗಳು ಪ್ರತಿಭಟನೆಯ ಹೆಸರಿನಲ್ಲಿ ಸಂಘಟಿತ ಹಿಂಸಾಚಾರವನ್ನು ಬಿಚ್ಚಿಟ್ಟರು. ಸಿಎಎ ವಿರೋಧಿ ಪ್ರತಿಭಟನೆಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ಇನ್ನೂ ಮುಂದುವರೆದಿದೆ ಎಂದಿದ್ದಾರೆ.

ಭಾಗವತ್ ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ. “ಬಹಳ ಆಳವಾಗಿ ಮೋಹನ್ ಭಾಗವತ್ ಸತ್ಯವನ್ನು ಅರ್ಥ ಮಾಡಿಕೊಂಡಿದ್ದಾರೆ. ಆದರೆ ಅವರಿಗೆ ಅದನ್ನು ಎದುರಿಸಲು ಭಯವಾಗುತ್ತಿದೆ. ಸತ್ಯವೆಂದರೆ ಚೀನಾ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆ ಮತ್ತು ಮೋದಿ ಹಾಗೂ ಆರ್‌ಎಸ್‌ಎಸ್‌ ಅದಕ್ಕೆ ಅವಕಾಶ ನೀಡಿವೆ” ಎಂದು ಟ್ವೀಟ್‌ ಮಾಡಿದ್ದಾರೆ.

ಚೀನಾ ಭಾರತದ ಒಂದಿಂಚು ಭೂಮಿಯನ್ನು ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಮೋಹನ್ ಭಾಗವತ್ ಚೀನಾ ನಮ್ಮ ಭೂಮಿ ವಶಪಡಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಚೀನಾ ಯಾವುದೇ ಭಾರತೀಯ ಭೂಪ್ರದೇಶ ವಶಪಡಿಸಿಕೊಂಡಿಲ್ಲ, ಗಡಿಯೊಳಗೆ ಕಾಲಿಟ್ಟಿಲ್ಲ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...