Homeಅಂತರಾಷ್ಟ್ರೀಯಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ..

- Advertisement -
- Advertisement -

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೇಲೆ ಡೆಮಾಕ್ರೆಟಿಕ್ ಪಾರ್ಟಿಯ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್  ವಾಗ್ದಾಳಿ ನಡೆಸಿದ್ದಾರೆ. ಕಳೆದ ಅಧ್ಯಕ್ಷೀಯ ಚರ್ಚೆಯಲ್ಲಿ ಉಭಯ ನಾಯಕರ ಎರಡನೇ ಸುತ್ತಿನ ಸಂವಾದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು “ಹೊಲಸು” ಎಂದು ಕರೆದಿದ್ದುದ್ದಕ್ಕೆ ಪ್ರಜಾಪ್ರಭುತ್ವವಾದಿ ಜೋ ಬಿಡನ್ ಟೀಕಿಸಿದ್ದಾರೆ.

ಅಧ್ಯಕ್ಷೀಯ ಸಂವಾದದ ಮಧ್ಯೆ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್, “ಭಾರತದ ಕಡೆ ನೋಡಿ, ಅದು ತುಂಬಾ ಹೊಲಸಾಗಿದೆ” ಎಂದು ಹೇಳಿದ್ದರು. ಈ ಮೂಲಕ ಟ್ರಂಪ್ ಭಾರತೀಯರ ಆಕ್ರೋಶಕ್ಕೆ ಗುರಿಯಾಗಿದ್ದರು. ಈಗ ಪ್ರತಿಸ್ಫರ್ಧಿ ಜೋ ಬಿಡೆನ್ ಕೂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

ಈ ಕುರಿತು ಟ್ವೀಟ್ ಮಾಡಿರುವ ಜೋ ಬಿಡೆನ್ “ಅಧ್ಯಕ್ಷ ಟ್ರಂಪ್ ಭಾರತವನ್ನು ‘ಹೊಲಸು’ ಎಂದಿದ್ದಾರೆ. ಇದು ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ ಮತ್ತು ಈ ರೀತಿಯಾಗಿ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಕಮಲ ಹ್ಯಾರಿಸ್ ಮತ್ತು ನಾನು ನಮ್ಮ ಸಹಭಾಗಿತ್ವವನ್ನು ಗೌರವಿಸುತ್ತೇವೆ ಮತ್ತು ವಿದೇಶಾಂಗ ನೀತಿಯ ಗೌರವವನ್ನು ಮತ್ತೆ ಮುನ್ನೆಲೆಗೆ ತರುತ್ತೇವೆ” ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರಿಂದ, “ಚೀನಾ, ರಷ್ಯಾ, ಭಾರತವನ್ನು ನೋಡಿ. ಆ ದೇಶಗಳು ಎಷ್ಟು ಹೊಲಸಾಗಿವೆ. ಭಾರತದಲ್ಲಂತೂ ವಾಯು ಮಾಲಿನ್ಯ ಮಿತಿಮೀರಿದೆ. ವಾತಾವರಣದಲ್ಲಿನ ಬದಲಾವಣೆ ಅಧಿಕವಾಗುತ್ತಿದೆ. ಅದೊಂದು ಹೊಲಸಿನಿಂದ ತುಂಬಿರುವ ದೇಶ. ಇದೇ ಕಾರಣಕ್ಕೆ ನಾನು ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಿದ್ದೆ ಎಂದು ಟ್ರಂಪ್ ಹೇಳಿದ್ದರು.

ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಲಾಗಿತ್ತು. ಆದರೆ ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಜೋ ಬಿಡೆನ್ ಭಾರತೀಯ ಅಮೆರಿಕನ್ ಸಮುದಾಯದೊಂದಿಗಿನ ತಮ್ಮ ಸಂಪರ್ಕವನ್ನು ತಮ್ಮ ಬ್ಲಾಗ್‌ನಲ್ಲಿ ವಿವರಿಸಿದ್ದಾರೆ. ಜೊತೆಗೆ ಈಗಿನ ವಿನಾಶಕಾರಿ ಮತ್ತು ಕರಾಳ ಚುನಾವಣೆಯ ನೆರಳಿನಲ್ಲಿ, ನಾವು ದೀಪಗಳ ಹಬ್ಬ ಮತ್ತು ಹೊಸ ಆರಂಭಕ್ಕಾಗಿ ಒಟ್ಟುಗೂಡಿದ್ದೇವೆ “ಎಂದು ಹೇಳಿದ್ದಾರೆ.

“ನಾಲ್ಕು ವರ್ಷಗಳ ಹಿಂದೆ ನವೆಂಬರ್‌ನಲ್ಲಿ, ಉಪಾಧ್ಯಕ್ಷರ ನಿವಾಸದಲ್ಲಿ ನಾನು ಆಯೋಜಿಸಿದ್ದ ಕೊನೆಯ ಕಾರ್ಯಕ್ರಮವೆಂದರೆ ದೀಪಾವಳಿ ಸ್ವಾಗತ. ಇಲ್ಲಿನ ಐರಿಶ್ ಕ್ಯಾಥೊಲಿಕ್ ಉಪಾಧ್ಯಕ್ಷರು ಹಿಂದೂಗಳು, ಬೌದ್ಧರು, ಸಿಖ್ಖರು ಮತ್ತು ಜೈನರು ಸಾಂಪ್ರದಾಯಿಕವಾಗಿ ಆಚರಿಸುವ ರಜಾದಿನಕ್ಕಾಗಿ ನನ್ನ ಮನೆಯನ್ನು ಮುಕ್ತವಾಗಿಸುತ್ತಿದ್ದರು. ಆ ರಾತ್ರಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಭಾರತೀಯ ಅಮೆರಿಕನ್ನರು ತಮ್ಮ ​​ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

ಅಮೆರಿಕ-ಇಂಡಿಯಾ ಸಂಬಂಧಗಳಿಗೆ “ಒಬಾಮಾ-ಬಿಡೆನ್ ಆಡಳಿತದ ಕೆಲವು ವರ್ಷಗಳು ಅತ್ಯುತ್ತಮವಾದವು” ಎಂದು ಹಂಚಿಕೊಂಡಿದ್ದಾರೆ. “ಬಿಡೆನ್-ಹ್ಯಾರಿಸ್ ಆಡಳಿತವು ಆ ಮಹತ್ತರವಾದ ಪ್ರಗತಿಯನ್ನು ನಿರ್ಮಿಸುತ್ತದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಗೆದ್ದರೆ ಭಾರತೀಯ-ಅಮೆರಿಕನ್ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.  ಅಮೆರಿಕದಲ್ಲಿ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...