Homeಕರ್ನಾಟಕಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ...

- Advertisement -
- Advertisement -

ಶಿರಾ ಉಪಚುನಾವಣೆಯು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಬಂದು ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲ ಮುಖಂಡರು ಕ್ಷೇತ್ರದಲ್ಲೇ ಬೀಡುಬಿಟ್ಟು ಜನರ ನಾಡಿಮಿಡಿತ ಅರಿಯುವ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಬೇರೆ ಜಿಲ್ಲೆಗಳ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಹೋಬಳಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿ ಅವರೇ ಖರ್ಚುವೆಚ್ಚ ನೋಡಿಕೊಳ್ಳುವಂತೆ ಜವಾಬ್ದಾರಿ ವಹಿಸಲಾಗಿದೆ.

ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಮಂಡ್ಯ ಮತ್ತು ಹಾಸನ ಜಿಲ್ಲೆಗಳಿಂದ ಕಾರ್ಯಕರ್ತರು ಬಂದಿದ್ದಾರೆ. ಹಾಸನ ಜಿಲ್ಲೆಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಹುಲಿಕುಂಟೆ ಹೋಬಳಿ ಜವಾಬ್ದಾರಿ ನೀಡಿದ್ದು ಆ ಹೋಬಳಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಹುಲಿಕುಂಟೆ ಹೋಬಳಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಹುಟ್ಟೂರು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯಲು ಯುವ ಶಾಸಕ ಪ್ರೀತಂಗೌಡ ಅವರಿಗೆ ಈ ಹೋಬಳಿಯ ಜವಾಬ್ದಾರಿ ನೀಡಲಾಗಿದೆ.

ಇದರ ನಡುವೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ಹಿರಿಯರು ಮತ್ತು ವಿಶೇಷಚೇತನರಿಗೆ ಹಣ ಹಂಚಿಕೆ ಮಾಡಿರುವ ಸಂಬಂಧ ಆಡಿಯೋಗಳು ಸದ್ದುಮಾಡುತ್ತಿವೆ. ದ್ವಾರಾಳು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಪ್ರತಿ ಮತಕ್ಕೆ 2 ರಿಂದ 3 ಸಾವಿರ ರೂಪಾಯಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿರಿಯರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ತರಾಟೆಗೆ ತೆಗೆದುಕೊಂಡಿರುವ ಬಗೆಗಿನ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 8 ನಿಮಿಷದಷ್ಟು ಇರುವ ಆಡಿಯೋದಲ್ಲಿ ದ್ವಾರಾಳು ಗ್ರಾಮದ ಹಿರಿಯರಾದ ನರಸಿಂಹಯ್ಯ ಎಂಬ ಹೆಸರಿನವರು “ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ. ನಾನು ಹಿಂದಿನಿಂದಲೂ ಹಣ ಪಡೆದು ಓಟು ಹಾಕಿಲ್ಲ. ಲಂಚ ಪಡೆದು ಓಟು ಹಾಕಬೇಕೇ? ಹಣ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಚನ್ನಾಗಿ ಬೈದೆ. 500 ರೂ ನ ಆರು ನೋಟುಗಳನ್ನು ಎಣಿಸಿದರು. ನಾನು ಬೈದ ಮೇಲೆ ಹಣವನ್ನು ಜೋಬಿಗೆ ಇಟ್ಟುಕೊಂಡು ಹೋದರು. ಊರಲ್ಲಿ ಹಲವರಿಗೆ ಹಣ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಗುಂಪಿನಲ್ಲಿ ಮಂಡ್ಯದಿಂದ ಬಂದವರು ಇದ್ದರು. ಇವರು ಯಾರು ಅಂತ ಕೇಳಿದೆ. ಆತ ನಾನು ಮಂಡ್ಯ ದಿಂದ ಬಂದಿದ್ದೇನೆ. ಬಿಜೆಪಿಯ ರಾಜೇಶ್ ಗೌಡರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ. ಗ್ರಾಮದ ಕೆಲವರ ಜೊತೆ ಮಂಡ್ಯದಿಂದ ಬಂದವರು ಇದ್ದರು. ಅವರಿಂದ ತಿಳಿದುಕೊಂಡ ಮೇಲೆ ಅವರು ಮಂಡ್ಯದವರು ಎಂದು ಗೊತ್ತಾಯಿತು” ಎನ್ನುತ್ತಾರೆ ಹಿರಿಯರಾದ ನರಸಿಂಹಯ್ಯ.

ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಇಡೀ ಕುಟುಂಬವೇ ಪ್ರಚಾರದಲ್ಲಿ ನಿರತವಾಗಿ ಇರುವುದು ಇಲ್ಲಿನ ವಿಶೇಷ. ಪತ್ನಿ, ಪುತ್ರ ಸಂತೋಷ್ ಜಯಚಂದ್ರ, ಸೊಸೆಯಾದಿಯಾಗಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮತದಾರರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇದು ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿಯ ತೀವ್ರತೆಯನ್ನು ತೋರಿಸುತ್ತದೆ.

ಪರಸ್ಪರ ಕೆಸರೆರೆಚಾಟವೂ ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ದೂರಿಕೊಳ್ಳುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿರುವುದನ್ನು ಪ್ರಚಾರದಲ್ಲಿ ಮತದಾರರಿಗೆ ನೆನಪಿಸುತ್ತಿದೆ. ಜೆಡಿಎಸ್ ತನ್ನ ಆಡಳಿತದ ಅವಧಿಯ ಸಾಧನೆಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೇಳುತ್ತಿದೆ. ಮತದಾರರು ಎಲ್ಲವನ್ನೂ ಗಮನಿಸುತ್ತ ಕೇಳಿಸಿಕೊಳ್ಳುತ್ತಿದ್ದಾರೆ. ಜಣಜಣಜಣ ಕಾಂಚಣದಲ್ಲಿ ಮೂರು ಪಕ್ಷಗಳ ಲಾಂಚನದಲ್ಲಿ ಎಲ್ಲಾ ಮಾಯ ಎನ್ನುವಂತಹ ಪರಿಸ್ಥಿತಿ ಇದೆ.

  • ಸಿದ್ದಯ್ಯ ಕೆ.ಈ

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...