Homeಕರ್ನಾಟಕಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ...

- Advertisement -
- Advertisement -

ಶಿರಾ ಉಪಚುನಾವಣೆಯು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಬಂದು ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲ ಮುಖಂಡರು ಕ್ಷೇತ್ರದಲ್ಲೇ ಬೀಡುಬಿಟ್ಟು ಜನರ ನಾಡಿಮಿಡಿತ ಅರಿಯುವ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಬೇರೆ ಜಿಲ್ಲೆಗಳ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಹೋಬಳಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿ ಅವರೇ ಖರ್ಚುವೆಚ್ಚ ನೋಡಿಕೊಳ್ಳುವಂತೆ ಜವಾಬ್ದಾರಿ ವಹಿಸಲಾಗಿದೆ.

ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಮಂಡ್ಯ ಮತ್ತು ಹಾಸನ ಜಿಲ್ಲೆಗಳಿಂದ ಕಾರ್ಯಕರ್ತರು ಬಂದಿದ್ದಾರೆ. ಹಾಸನ ಜಿಲ್ಲೆಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಹುಲಿಕುಂಟೆ ಹೋಬಳಿ ಜವಾಬ್ದಾರಿ ನೀಡಿದ್ದು ಆ ಹೋಬಳಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಹುಲಿಕುಂಟೆ ಹೋಬಳಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಹುಟ್ಟೂರು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯಲು ಯುವ ಶಾಸಕ ಪ್ರೀತಂಗೌಡ ಅವರಿಗೆ ಈ ಹೋಬಳಿಯ ಜವಾಬ್ದಾರಿ ನೀಡಲಾಗಿದೆ.

ಇದರ ನಡುವೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ಹಿರಿಯರು ಮತ್ತು ವಿಶೇಷಚೇತನರಿಗೆ ಹಣ ಹಂಚಿಕೆ ಮಾಡಿರುವ ಸಂಬಂಧ ಆಡಿಯೋಗಳು ಸದ್ದುಮಾಡುತ್ತಿವೆ. ದ್ವಾರಾಳು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಪ್ರತಿ ಮತಕ್ಕೆ 2 ರಿಂದ 3 ಸಾವಿರ ರೂಪಾಯಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿರಿಯರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ತರಾಟೆಗೆ ತೆಗೆದುಕೊಂಡಿರುವ ಬಗೆಗಿನ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 8 ನಿಮಿಷದಷ್ಟು ಇರುವ ಆಡಿಯೋದಲ್ಲಿ ದ್ವಾರಾಳು ಗ್ರಾಮದ ಹಿರಿಯರಾದ ನರಸಿಂಹಯ್ಯ ಎಂಬ ಹೆಸರಿನವರು “ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ. ನಾನು ಹಿಂದಿನಿಂದಲೂ ಹಣ ಪಡೆದು ಓಟು ಹಾಕಿಲ್ಲ. ಲಂಚ ಪಡೆದು ಓಟು ಹಾಕಬೇಕೇ? ಹಣ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಚನ್ನಾಗಿ ಬೈದೆ. 500 ರೂ ನ ಆರು ನೋಟುಗಳನ್ನು ಎಣಿಸಿದರು. ನಾನು ಬೈದ ಮೇಲೆ ಹಣವನ್ನು ಜೋಬಿಗೆ ಇಟ್ಟುಕೊಂಡು ಹೋದರು. ಊರಲ್ಲಿ ಹಲವರಿಗೆ ಹಣ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಗುಂಪಿನಲ್ಲಿ ಮಂಡ್ಯದಿಂದ ಬಂದವರು ಇದ್ದರು. ಇವರು ಯಾರು ಅಂತ ಕೇಳಿದೆ. ಆತ ನಾನು ಮಂಡ್ಯ ದಿಂದ ಬಂದಿದ್ದೇನೆ. ಬಿಜೆಪಿಯ ರಾಜೇಶ್ ಗೌಡರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ. ಗ್ರಾಮದ ಕೆಲವರ ಜೊತೆ ಮಂಡ್ಯದಿಂದ ಬಂದವರು ಇದ್ದರು. ಅವರಿಂದ ತಿಳಿದುಕೊಂಡ ಮೇಲೆ ಅವರು ಮಂಡ್ಯದವರು ಎಂದು ಗೊತ್ತಾಯಿತು” ಎನ್ನುತ್ತಾರೆ ಹಿರಿಯರಾದ ನರಸಿಂಹಯ್ಯ.

ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಇಡೀ ಕುಟುಂಬವೇ ಪ್ರಚಾರದಲ್ಲಿ ನಿರತವಾಗಿ ಇರುವುದು ಇಲ್ಲಿನ ವಿಶೇಷ. ಪತ್ನಿ, ಪುತ್ರ ಸಂತೋಷ್ ಜಯಚಂದ್ರ, ಸೊಸೆಯಾದಿಯಾಗಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮತದಾರರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇದು ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿಯ ತೀವ್ರತೆಯನ್ನು ತೋರಿಸುತ್ತದೆ.

ಪರಸ್ಪರ ಕೆಸರೆರೆಚಾಟವೂ ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ದೂರಿಕೊಳ್ಳುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿರುವುದನ್ನು ಪ್ರಚಾರದಲ್ಲಿ ಮತದಾರರಿಗೆ ನೆನಪಿಸುತ್ತಿದೆ. ಜೆಡಿಎಸ್ ತನ್ನ ಆಡಳಿತದ ಅವಧಿಯ ಸಾಧನೆಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೇಳುತ್ತಿದೆ. ಮತದಾರರು ಎಲ್ಲವನ್ನೂ ಗಮನಿಸುತ್ತ ಕೇಳಿಸಿಕೊಳ್ಳುತ್ತಿದ್ದಾರೆ. ಜಣಜಣಜಣ ಕಾಂಚಣದಲ್ಲಿ ಮೂರು ಪಕ್ಷಗಳ ಲಾಂಚನದಲ್ಲಿ ಎಲ್ಲಾ ಮಾಯ ಎನ್ನುವಂತಹ ಪರಿಸ್ಥಿತಿ ಇದೆ.

  • ಸಿದ್ದಯ್ಯ ಕೆ.ಈ

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...