Homeಕರ್ನಾಟಕಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ...

- Advertisement -
- Advertisement -

ಶಿರಾ ಉಪಚುನಾವಣೆಯು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಬಂದು ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲ ಮುಖಂಡರು ಕ್ಷೇತ್ರದಲ್ಲೇ ಬೀಡುಬಿಟ್ಟು ಜನರ ನಾಡಿಮಿಡಿತ ಅರಿಯುವ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಬೇರೆ ಜಿಲ್ಲೆಗಳ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಹೋಬಳಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿ ಅವರೇ ಖರ್ಚುವೆಚ್ಚ ನೋಡಿಕೊಳ್ಳುವಂತೆ ಜವಾಬ್ದಾರಿ ವಹಿಸಲಾಗಿದೆ.

ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಮಂಡ್ಯ ಮತ್ತು ಹಾಸನ ಜಿಲ್ಲೆಗಳಿಂದ ಕಾರ್ಯಕರ್ತರು ಬಂದಿದ್ದಾರೆ. ಹಾಸನ ಜಿಲ್ಲೆಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಹುಲಿಕುಂಟೆ ಹೋಬಳಿ ಜವಾಬ್ದಾರಿ ನೀಡಿದ್ದು ಆ ಹೋಬಳಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಹುಲಿಕುಂಟೆ ಹೋಬಳಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಹುಟ್ಟೂರು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯಲು ಯುವ ಶಾಸಕ ಪ್ರೀತಂಗೌಡ ಅವರಿಗೆ ಈ ಹೋಬಳಿಯ ಜವಾಬ್ದಾರಿ ನೀಡಲಾಗಿದೆ.

ಇದರ ನಡುವೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ಹಿರಿಯರು ಮತ್ತು ವಿಶೇಷಚೇತನರಿಗೆ ಹಣ ಹಂಚಿಕೆ ಮಾಡಿರುವ ಸಂಬಂಧ ಆಡಿಯೋಗಳು ಸದ್ದುಮಾಡುತ್ತಿವೆ. ದ್ವಾರಾಳು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಪ್ರತಿ ಮತಕ್ಕೆ 2 ರಿಂದ 3 ಸಾವಿರ ರೂಪಾಯಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿರಿಯರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ತರಾಟೆಗೆ ತೆಗೆದುಕೊಂಡಿರುವ ಬಗೆಗಿನ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 8 ನಿಮಿಷದಷ್ಟು ಇರುವ ಆಡಿಯೋದಲ್ಲಿ ದ್ವಾರಾಳು ಗ್ರಾಮದ ಹಿರಿಯರಾದ ನರಸಿಂಹಯ್ಯ ಎಂಬ ಹೆಸರಿನವರು “ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ. ನಾನು ಹಿಂದಿನಿಂದಲೂ ಹಣ ಪಡೆದು ಓಟು ಹಾಕಿಲ್ಲ. ಲಂಚ ಪಡೆದು ಓಟು ಹಾಕಬೇಕೇ? ಹಣ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಚನ್ನಾಗಿ ಬೈದೆ. 500 ರೂ ನ ಆರು ನೋಟುಗಳನ್ನು ಎಣಿಸಿದರು. ನಾನು ಬೈದ ಮೇಲೆ ಹಣವನ್ನು ಜೋಬಿಗೆ ಇಟ್ಟುಕೊಂಡು ಹೋದರು. ಊರಲ್ಲಿ ಹಲವರಿಗೆ ಹಣ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಗುಂಪಿನಲ್ಲಿ ಮಂಡ್ಯದಿಂದ ಬಂದವರು ಇದ್ದರು. ಇವರು ಯಾರು ಅಂತ ಕೇಳಿದೆ. ಆತ ನಾನು ಮಂಡ್ಯ ದಿಂದ ಬಂದಿದ್ದೇನೆ. ಬಿಜೆಪಿಯ ರಾಜೇಶ್ ಗೌಡರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ. ಗ್ರಾಮದ ಕೆಲವರ ಜೊತೆ ಮಂಡ್ಯದಿಂದ ಬಂದವರು ಇದ್ದರು. ಅವರಿಂದ ತಿಳಿದುಕೊಂಡ ಮೇಲೆ ಅವರು ಮಂಡ್ಯದವರು ಎಂದು ಗೊತ್ತಾಯಿತು” ಎನ್ನುತ್ತಾರೆ ಹಿರಿಯರಾದ ನರಸಿಂಹಯ್ಯ.

ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಇಡೀ ಕುಟುಂಬವೇ ಪ್ರಚಾರದಲ್ಲಿ ನಿರತವಾಗಿ ಇರುವುದು ಇಲ್ಲಿನ ವಿಶೇಷ. ಪತ್ನಿ, ಪುತ್ರ ಸಂತೋಷ್ ಜಯಚಂದ್ರ, ಸೊಸೆಯಾದಿಯಾಗಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮತದಾರರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇದು ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿಯ ತೀವ್ರತೆಯನ್ನು ತೋರಿಸುತ್ತದೆ.

ಪರಸ್ಪರ ಕೆಸರೆರೆಚಾಟವೂ ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ದೂರಿಕೊಳ್ಳುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿರುವುದನ್ನು ಪ್ರಚಾರದಲ್ಲಿ ಮತದಾರರಿಗೆ ನೆನಪಿಸುತ್ತಿದೆ. ಜೆಡಿಎಸ್ ತನ್ನ ಆಡಳಿತದ ಅವಧಿಯ ಸಾಧನೆಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೇಳುತ್ತಿದೆ. ಮತದಾರರು ಎಲ್ಲವನ್ನೂ ಗಮನಿಸುತ್ತ ಕೇಳಿಸಿಕೊಳ್ಳುತ್ತಿದ್ದಾರೆ. ಜಣಜಣಜಣ ಕಾಂಚಣದಲ್ಲಿ ಮೂರು ಪಕ್ಷಗಳ ಲಾಂಚನದಲ್ಲಿ ಎಲ್ಲಾ ಮಾಯ ಎನ್ನುವಂತಹ ಪರಿಸ್ಥಿತಿ ಇದೆ.

  • ಸಿದ್ದಯ್ಯ ಕೆ.ಈ

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...