Homeಕರ್ನಾಟಕಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, "ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ" ಎಂದು ಹಾರೈಸಿದ್ದಾರೆ.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್ ಬಾವಾ ಮೂಲಭೂತವಾದಿಯೊಬ್ಬರ ಬೆದರಿಕೆಗೆ ಜಗ್ಗದೆ ಮತ್ತೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಈ ಬಾರಿಯೂ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಮೊಯ್ದೀನ್ ಬಾವಾ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ, ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲಕ್ಕೆ ತೆರಳಿದ ಬಾವಾ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು.

ಹಿಂದೂ ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ, ದೇವಸ್ಥಾನದಲ್ಲಿ ಕೊಪ್ಪರಿಗೆ ಸಲ್ಲಿಸಿದ್ದಕ್ಕೆ ಹಲವು ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಹಿಂದೂ ಮೂಲಭೂತವಾದಿಯೊಬ್ಬ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ
ದೇವಸ್ಥಾನದಲ್ಲಿ ಕೊಪ್ಪರಿಗೆ ಅರ್ಪಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ

ಬೆದರಿಕೆ ಹಾಕಿದಾತ, ತಾನು ಮುಂಬೈ ಮೂಲದವ ಅನಿಲ್ ಎಂದು ಪರಿಚಯಿಸಿಕೊಂಡಿದ್ದ. ತುಳುವಿನಲ್ಲೇ ಮಾತು ಆರಂಭಿಸಿ, ದೇವಸ್ಥಾನಕ್ಕೆ ಏಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದ. ದೇವಸ್ಥಾನ ಆಡಳಿತ ಮಂಡಳಿ ಆಹ್ವಾನಿಸಿದಕ್ಕೆ ಹೋಗಿದ್ದೀನೆಂದು ತಿಳಿಸಿದ್ದಕ್ಕೆ, ಅವರು ಮರ್ಯಾದೆ ಕೊಟ್ಟು ಕರೆದ ಮಾತ್ರಕ್ಕೆ ನೀವು ಯಾಕೆ ಹೋಗಿದ್ದು, ಬರುವುದಿಲ್ಲ ಎನ್ನಬೇಕಿತ್ತು ಎಂದು ಧಮಕಿ ಹಾಕಿದ್ದ

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಹಿಂದೂ ದೇವಸ್ಥಾನದಲ್ಲಿ ಹೋಗಿ ಕೊಪ್ಪರಿಗೆ ಇಡುವುದು ಸರಿಯಲ್ಲ ಎಂದು ಹೇಳಿದ ಆತ ಏರು ದನಿಯಲ್ಲಿ ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ ಗೊತ್ತಾಯಿತಲ್ಲ… ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಎಂದು ಬೆದರಿಕೆ ಒಡ್ಡಿದ್ದಾನೆ. ಮೊಯ್ದಿನ್ ಬಾವಾ ಇದು ಮೋದಿಯ ದೇಶವಾಗಿರಬಹುದು. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ. ಇದು ನಮ್ಮ ದೇಶ ಫೋನ್ ಇಡಿ ಎಂದು ಕರೆ ಕಟ್ ಮಾಡಿದ್ದರು.

ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಮತ್ತೆ ಅಚ್ಚರಿಯ ನಡೆ ತೋರಿಸಿ, ಮಾಜಿ ಶಾಸಕ ಮೊಯ್ದೀನ್ ಬಾವಾರಿಗೆ ಮತ್ತೆ ದೇವಸ್ಥಾನಕ್ಕ ಆಹ್ವಾನ ನೀಡಿತ್ತು. ಪರ ವಿರೋಧ ಚರ್ಚೆಗಳ ನಡುವೆಯೇ ಈ ಹಿನ್ನೆಲೆ ನಿನ್ನೆ (ಅ.25)ರಂದು ಮೊಯ್ದೀನ್ ಬಾವಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮೊಯ್ದೀನ್ ಬಾವಾ ಅವರಿಗೆ ಮತ್ತೆ ಆಹ್ವಾನ ನೀಡಲಾಯಿತು.

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, “ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ” ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಉಳವಿಯಲ್ಲಿ ಚನ್ನಬಸವಣ್ಣನ ದಿಟ್ಟ ಹೋರಾಟ : ಶರಣ ಚಳುವಳಿಯ ಮಹತ್ವದ ಮೈಲಿಗಲ್ಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...