Homeಅಂತರಾಷ್ಟ್ರೀಯಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

- Advertisement -
- Advertisement -

ಸ್ಪೇನ್‌ನಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆ ಭಾನುವಾರ ಎರಡನೇ ಬಾರಿ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ಘೋಷಿಸಿದೆ. ಜೊತೆಗೆ ದೇಶಾದ್ಯಂತ ರಾತ್ರಿ ಕರ್ಫ್ಯೂಗೆ ಆದೇಶಿಸಲಾಗಿದೆ ಎಂದು ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಹೇಳಿದ್ದಾರೆ.

ಕ್ಯಾನರಿ ದ್ವೀಪಗಳನ್ನು ಹೊರತುಪಡಿಸಿ, ರಾತ್ರಿ 11 ಗಂಟೆಗೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲು ತಮ್ಮ ಸರ್ಕಾರ ತುರ್ತು ಪರಿಸ್ಥಿತಿಯನ್ನು ಬಳಸುತ್ತಿದೆ ಎಂದು ಪ್ರಧಾನಿ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಸ್ಪೇನ್‌ನ 19 ಪ್ರಾದೇಶಿಕ ನಾಯಕರು ತಮ್ಮ ವ್ಯಾಪ್ತಿಯಲ್ಲಿ ಕಠಿಣವಾದ ಕರ್ಫ್ಯೂ ವಿಧಿಸಲು, ಪ್ರಾದೇಶಿಕ ಗಡಿಗಳನ್ನು ಮುಚ್ಚುವುದು ಮತ್ತು ಆರು ಜನರಿಗಿಂತ ಹೆಚ್ಚಿನ ಜನ ಸೇರದಂತೆ ನಿರ್ಬಂಧಿಸುವ ಅಧಿಕಾರವನ್ನು ಹೊಂದಿರುತ್ತಾರೆ ಎಂದು ಪ್ರಧಾನಿ ಹೇಳಿದರು.

“ಸದ್ಯದ ವಾಸ್ತವವೆಂದರೆ ಯುರೋಪ್ ಮತ್ತು ಸ್ಪೇನ್ ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಎಲೆಯಲ್ಲಿ ಮುಳುಗಿವೆ” ಎಂದು ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಆತಂಕ ವ್ಯಕ್ತಪಡಿಸಿದ್ದಾರೆ. ತುರ್ತು ಪರಿಸ್ಥಿತಿಯನ್ನು ಮುಂದಿನ ಆರು ತಿಂಗಳವರೆಗೆ ಅಂದರೆ ಮೇ ತಿಂಗಳವರೆಗೆ ವಿಸ್ತರಿಸುವ ಬಗ್ಗೆಯೂ ಚರ್ಚಿಸಿದ್ದಾರೆ. ಸ್ಪೇನ್‌ನ ಬಹುಪಾಲು ಪ್ರಾದೇಶಿಕ ನಾಯಕರು ಹೊಸ ತುರ್ತು ಪರಿಸ್ಥಿತಿಗೆ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ರಾಷ್ಟ್ರೀಯ ತುರ್ತು ಪರಿಸ್ಥಿತಿಯು ಸರ್ಕಾರಕ್ಕೆ ಅಸಾಧಾರಣ ಅಧಿಕಾರವನ್ನು ನೀಡುತ್ತದೆ. ಇದರಲ್ಲಿ ಸ್ಪೇನ್‌ನ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಸ್ವಾತಂತ್ರ್ಯಗಳಾದ ಚಳುವಳಿಯ ಹಕ್ಕನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಸಾಮರ್ಥ್ಯವಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸ್ಪೇನ್‌ನ ಸರ್ಕಾರ ಈಗಾಗಲೇ ಎರಡು ತುರ್ತು ಪರಿಸ್ಥಿತಿಗಳನ್ನು ಘೋಷಿಸಿದೆ. ರಾಷ್ಟ್ರದಾದ್ಯಂತ ಕಟ್ಟುನಿಟ್ಟಾದ ಗೃಹಬಂಧನವನ್ನು ಅನ್ವಯಿಸಲು, ಅಂಗಡಿ- ಮಳಿಗೆಗಳನ್ನು ಮುಚ್ಚಲು ಮತ್ತು ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ಹೋರಾಟಕ್ಕಾಗಿ ಖಾಸಗಿ ಉದ್ಯಮವನ್ನು ನೇಮಿಸಿಕೊಳ್ಳಲು ಮಾರ್ಚ್‌ನಲ್ಲಿ ಮೊದಲ ಬಾರಿಗೆ ಘೋಷಿಸಲಾಗಿತ್ತು. ಜೂನ್‌ನಲ್ಲಿ ತುರ್ತು ಪರಿಸ್ಥಿತಿ ತೆಗೆದುಹಾಕಲಾಗಿತ್ತು. ಎರಡನೆಯದು ಮ್ಯಾಡ್ರಿಡ್‌ನಲ್ಲಿ ಎರಡು ವಾರಗಳವರೆಗೆ ಜಾರಿಗೆ ಬಂದಿತು.

ಸ್ಪ್ಯಾನಿಷ್ ಆರೋಗ್ಯ ಸಚಿವ ಸಾಲ್ವಡಾರ್ ಇಲ್ಲಾ ತಮ್ಮ ಸಂಸ್ಥೆ ಮತ್ತು ಪ್ರಾದೇಶಿಕ ಆರೋಗ್ಯ ಅಧಿಕಾರಿಗಳು ರಾತ್ರಿಯ ಕರ್ಫ್ಯೂಗಳನ್ನು ಹೇಗೆ ಜಾರಿಗೆ ತರಬೇಕೆಂದು ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಬಹುಶಃ ಫ್ರಾನ್ಸ್‌ನ ಪ್ರಮುಖ ನಗರಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ರಾತ್ರಿ 9 ಗಂಟೆಯಿಂದ ಕರ್ಫ್ಯೂ ಜಾರಿಯಾಗಬಹುದು ಎಂದಿದ್ದರು.

ಸ್ಪೇನ್‌ನ ಆರ್ಥಿಕತೆಯ ದುರ್ಬಲ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತೊಂದು ಸಂಪೂರ್ಣ ಲಾಕ್‌ಡೌನ್ ಮತ್ತು ಉದ್ಯಮ ಸ್ಥಗಿತಗೊಳಿಸುವಿಕೆಯಿಂದ ಹಿಂಜರಿಯುತ್ತಿದ್ದಾರೆ. ಈಗಾಗಲೇ ಸ್ಪೇನ್ ಆರ್ಥಿಕ ಹಿಂಜರಿತ ಮತ್ತು ನಿರುದ್ಯೋಗದಲ್ಲಿ ಮುಳುಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...