Homeಮುಖಪುಟರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

"ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ" ಎಂದು ಸಂಪಾದಕರ ಸಂಘ ತಿಳಿಸಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್ ದಾಖಲಾಗಿರುವುದು “ನೋವಿನ ಸಂಗತಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಿಆರ್‌ಪಿ ತಿರುಚಿರುವ ಪ್ರಕರಣ ಮತ್ತು ಮುಂಬೈ ಪೊಲೀಸರ ವಿರುದ್ಧ ಅಸಮಾಧಾನ ಉಂಟು ಮಾಡುವ ವಿಚಾರಗಳನ್ನು ಹರಡಿರುವ ಆರೋಪದಲ್ಲಿ ನೂರಾರು ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ “ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿರುವುದನ್ನು ನೋಡಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ನೋವಿನಿಂದ ಕೂಡಿದೆ” ಎಂದು ತಿಳಿಸಿದೆ.

“ನಾವು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ, ತನಿಖೆಯಿಂದ ಟಿಆರ್‌ಪಿಗಳಲ್ಲಿ ಅಗತ್ಯವಾದ ಪಾರದರ್ಶಕತೆಯನ್ನು ತರುವ ಸಾಮರ್ಥ್ಯವಿದೆ ಎಂದು ನಾವು ನಂಬಿದ್ದೇವೆ. ಆದರೆ ಪತ್ರಕರ್ತರನ್ನು ಬಲಿಪಶು ಮಾಡುವುದು ತಕ್ಷಣವೇ ನಿಲ್ಲಬೇಕು. ಏಕೆಂದರೆ ಅನಿಯಂತ್ರಿತ ರಾಜ್ಯಾಧಿಕಾರ ಕೂಡ ಕೆಲಸ ಮಾಡುವ ಪತ್ರಕರ್ತರ ಹಿತಾಸಕ್ತಿಯ ಪರವಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮುಂಬೈ ಪೊಲೀಸ್ ಮತ್ತು ರಿಪಬ್ಲಿಕ್ ಟಿವಿ ನಡುವೆ ತೀವ್ರ ವಿವಾದ ಉಂಟಾಗಿದೆ. ರಿಪಬ್ಲಿಕ್ ಟಿವಿ ಮೇಲೆ ಟಿಆರ್‌ಪಿಗಳನ್ನು ತಿರುಚಿರುವ ಆರೋಪ ಮತ್ತು ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ವಿರುದ್ಧ ಪ್ರಚೋದನಾತ್ಮಕ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ಧ “ಅಸಮಾಧಾನ” ಪ್ರಚೋದಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಿದ್ದಾರೆ, ಅದರ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ಇತರ ಸಂಪಾದಕೀಯ ಸಿಬ್ಬಂದಿ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ” ಎಂದು ಸಂಪಾದಕರ ಸಂಘ ತಿಳಿಸಿದೆ. ಜೊತೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವನ್ನು ಮಾಧ್ಯಮಗಳು ವರದಿ ಮಾಡಿದ ರೀತಿಯನ್ನು ಗಿಲ್ಡ್ ಗಮನಿಸಿದೆ ಎಂದು ತಿಳಿಸಿದೆ.

ಇಂತಹ ವರದಿಗಳು “ಮಾಧ್ಯಮ ವಿಶ್ವಾಸಾರ್ಹತೆ ಮತ್ತು ವರದಿ ಮಾಡುವ ಮಿತಿಗಳ ಬಗ್ಗೆ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದು ಗಿಲ್ಡ್ ತಿಳಿಸಿದೆ.

ಇಂತಹ ಸಮಸ್ಯೆಗಳು ಬಹಳ ಹಿಂದೆಯೇ ಪರಿಹರಿಸಬೇಕಾದ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇಂದು ಉಲ್ಬಣಗೊಳಿಸಲಾಗುತ್ತಿದೆ. ಇದು ಚಾನಲ್‌ಗಳು ಜವಾಬ್ದಾರಿಯುತವಾಗಿ ವರ್ತಿಸುವ ಸಮಯ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮಗಳ ಸಾಮೂಹಿಕ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ”ಎಂದು ಗಿಲ್ಡ್ ಹೇಳಿದೆ.

“ತನಿಖೆ ನಡೆಸುವ ಪೊಲೀಸರು ಚಾನಲ್‌ನ ಪತ್ರಕರ್ತರಿಗೆ ನೋವುಂಟು ಮಾಡುವುದು ಅಥವಾ ಯಾರನ್ನು  ಬಂಧಿಸುವುದಾಗಲಿ ಮಾಡಬಾರದು. ತನಿಖೆಯು ಮಾಧ್ಯಮ ಹಕ್ಕುಗಳನ್ನು ನಿಗ್ರಹಿಸುವ ಸಾಧನವಾಗಿ ಪರಿಣಮಿಸಬಾರದು ”ಎಂದು ಗಿಲ್ಡ್ ಹೇಳಿದೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...