Homeಮುಖಪುಟರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

"ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ" ಎಂದು ಸಂಪಾದಕರ ಸಂಘ ತಿಳಿಸಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್ ದಾಖಲಾಗಿರುವುದು “ನೋವಿನ ಸಂಗತಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಿಆರ್‌ಪಿ ತಿರುಚಿರುವ ಪ್ರಕರಣ ಮತ್ತು ಮುಂಬೈ ಪೊಲೀಸರ ವಿರುದ್ಧ ಅಸಮಾಧಾನ ಉಂಟು ಮಾಡುವ ವಿಚಾರಗಳನ್ನು ಹರಡಿರುವ ಆರೋಪದಲ್ಲಿ ನೂರಾರು ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ “ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿರುವುದನ್ನು ನೋಡಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ನೋವಿನಿಂದ ಕೂಡಿದೆ” ಎಂದು ತಿಳಿಸಿದೆ.

“ನಾವು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ, ತನಿಖೆಯಿಂದ ಟಿಆರ್‌ಪಿಗಳಲ್ಲಿ ಅಗತ್ಯವಾದ ಪಾರದರ್ಶಕತೆಯನ್ನು ತರುವ ಸಾಮರ್ಥ್ಯವಿದೆ ಎಂದು ನಾವು ನಂಬಿದ್ದೇವೆ. ಆದರೆ ಪತ್ರಕರ್ತರನ್ನು ಬಲಿಪಶು ಮಾಡುವುದು ತಕ್ಷಣವೇ ನಿಲ್ಲಬೇಕು. ಏಕೆಂದರೆ ಅನಿಯಂತ್ರಿತ ರಾಜ್ಯಾಧಿಕಾರ ಕೂಡ ಕೆಲಸ ಮಾಡುವ ಪತ್ರಕರ್ತರ ಹಿತಾಸಕ್ತಿಯ ಪರವಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮುಂಬೈ ಪೊಲೀಸ್ ಮತ್ತು ರಿಪಬ್ಲಿಕ್ ಟಿವಿ ನಡುವೆ ತೀವ್ರ ವಿವಾದ ಉಂಟಾಗಿದೆ. ರಿಪಬ್ಲಿಕ್ ಟಿವಿ ಮೇಲೆ ಟಿಆರ್‌ಪಿಗಳನ್ನು ತಿರುಚಿರುವ ಆರೋಪ ಮತ್ತು ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ವಿರುದ್ಧ ಪ್ರಚೋದನಾತ್ಮಕ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ಧ “ಅಸಮಾಧಾನ” ಪ್ರಚೋದಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಿದ್ದಾರೆ, ಅದರ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ಇತರ ಸಂಪಾದಕೀಯ ಸಿಬ್ಬಂದಿ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ” ಎಂದು ಸಂಪಾದಕರ ಸಂಘ ತಿಳಿಸಿದೆ. ಜೊತೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವನ್ನು ಮಾಧ್ಯಮಗಳು ವರದಿ ಮಾಡಿದ ರೀತಿಯನ್ನು ಗಿಲ್ಡ್ ಗಮನಿಸಿದೆ ಎಂದು ತಿಳಿಸಿದೆ.

ಇಂತಹ ವರದಿಗಳು “ಮಾಧ್ಯಮ ವಿಶ್ವಾಸಾರ್ಹತೆ ಮತ್ತು ವರದಿ ಮಾಡುವ ಮಿತಿಗಳ ಬಗ್ಗೆ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದು ಗಿಲ್ಡ್ ತಿಳಿಸಿದೆ.

ಇಂತಹ ಸಮಸ್ಯೆಗಳು ಬಹಳ ಹಿಂದೆಯೇ ಪರಿಹರಿಸಬೇಕಾದ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇಂದು ಉಲ್ಬಣಗೊಳಿಸಲಾಗುತ್ತಿದೆ. ಇದು ಚಾನಲ್‌ಗಳು ಜವಾಬ್ದಾರಿಯುತವಾಗಿ ವರ್ತಿಸುವ ಸಮಯ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮಗಳ ಸಾಮೂಹಿಕ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ”ಎಂದು ಗಿಲ್ಡ್ ಹೇಳಿದೆ.

“ತನಿಖೆ ನಡೆಸುವ ಪೊಲೀಸರು ಚಾನಲ್‌ನ ಪತ್ರಕರ್ತರಿಗೆ ನೋವುಂಟು ಮಾಡುವುದು ಅಥವಾ ಯಾರನ್ನು  ಬಂಧಿಸುವುದಾಗಲಿ ಮಾಡಬಾರದು. ತನಿಖೆಯು ಮಾಧ್ಯಮ ಹಕ್ಕುಗಳನ್ನು ನಿಗ್ರಹಿಸುವ ಸಾಧನವಾಗಿ ಪರಿಣಮಿಸಬಾರದು ”ಎಂದು ಗಿಲ್ಡ್ ಹೇಳಿದೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...