Homeಮುಖಪುಟಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಹೋರಾಟಗಾರ್ತಿ ಕುರಿತು ಆಕ್ಷೇಪಾರ್ಹ ಟೀಕೆ: ಬೇಷರತ್ ಕ್ಷಮೆ ಕೇಳುವಂತೆ ಟೈಮ್ಸ್‌‌ನೌಗೆ NBSA ಆದೇಶ

ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ NBSA ಆದೇಶದಲ್ಲಿರುವಂತೆ TIMES NOW ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಅವರ ಬಗ್ಗೆ 2018 ರ ಏಪ್ರಿಲ್‌‌ನಲ್ಲಿ ನಡೆದ ಚರ್ಚೆಯ ಸಂದರ್ಭ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುವಂತೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA)ಯು ಟೈಮ್ಸ್ ನೌ ಸುದ್ದಿ ವಾಹಿನಿಗೆ ನಿರ್ದೇಶಿಸಿದೆ.

ಟೈಮ್ಸ್ ನೌ ವಾಹಿನಿಯೂ 2018 ರ ಏಪ್ರಿಲ್ 6 ರಂದು ಸಂಜುಕ್ತ ಬಗ್ಗೆ ಮಾನಹಾನಿಕರ ಕಾರ್ಯಕ್ರಮವನ್ನು ನಡೆಸಿತ್ತು. ಚಾನೆಲ್ ತನ್ನ ಕಾರ್ಯಕ್ರಮದಲ್ಲಿ ಅವರನ್ನು “ಹಿಂದೂ ದ್ವೇಷಿ”, “ದುಷ್ಟ ಟ್ರೋಲರ್‌” ಎಂದು ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಟ್ರೋಲ್ ಸೇನೆಯ”ಯ ಭಾಗವೆಂದು ಹೇಳಿಕೊಂಡಿತ್ತು. ಮಾತ್ರವಲ್ಲದೆ ವಾಹಿನಿಯು ಸಂಜುಕ್ತಾ ಅವರ ಹೇಳಿಕೆಯನ್ನು ಪಡೆದಿಲ್ಲ ಮತ್ತು ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಲಿಲ್ಲ ಎಂದು NBSA ಯ ಆದೇಶ ಹೇಳಿದ್ದು, ಆ ಮೂಲಕ ಸಂಘದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

NBSA ಆದೇಶದ ಪ್ರಕಾರ, ಟೈಮ್ಸ್ ನೌ ಅಕ್ಟೋಬರ್ 27, 2020 ರಂದು ರಾತ್ರಿ 9 ಗಂಟೆಗೆ ಕ್ಷಮೆಯಾಚನೆ ಪ್ರಸಾರ ಮಾಡಬೇಕಿದ್ದು ಅದು ಕೆಳಗಿನ ಪಠ್ಯವನ್ನು ಪೂರ್ಣ ಪರದೆಯಲ್ಲಿ ದೊಡ್ಡ ಫಾಂಟ್ ಗಾತ್ರದಲ್ಲಿ ಸ್ಪಷ್ಟವಾಗಿ ಕೇಳಬಲ್ಲ ಧ್ವನಿಯ (ನಿಧಾನಗತಿಯಲ್ಲಿ) ಮೂಲಕ ಬೇಷರತ್ತಾಗಿ ಕ್ಷಮೆಯಾಚಿಸಬೇಕಾಗಿದೆ.

“ನಾವು 6.4.2018 ರಂದು ಪ್ರಸಾರವಾದ ’ಇಂಡಿಯಾ ಅಪ್‌ಫ್ರಂಟ್ @pm 8’ ಮತ್ತು ‘ದಿ ನ್ಯೂಶೋರ್ ಡಿಬೇಟ್ @ 9’ ಕಾರ್ಯಕ್ರಮದಲ್ಲಿ ಸಂಜುಕ್ತ ಬಸು ಅವರ ಹೇಳಿಕೆಯನ್ನು ತೆಗೆದುಕೊಂಡಿಲ್ಲ, ಇದರಿಂದಾಗಿ ನಿಷ್ಪಕ್ಷಪಾತ, ವಸ್ತುನಿಷ್ಠತೆ, ವರದಿ ಮಾಡುವಲ್ಲಿ ತಟಸ್ಥತೆ ಮತ್ತು ನ್ಯಾಯಸಮ್ಮತತೆಯನ್ನು ಖಾತರಿಪಡಿಸುವುದು ಸೇರಿದಂತೆ ಸಂಬಂಧಿಸಿದ ತತ್ವಗಳನ್ನು ಉಲ್ಲಂಘಿಸಿದ್ದೇವೆ. ಶ್ರೀಮತಿ ಸಂಜುಕ್ತ ಬಸು ಅವರಿಗೆ ಅಪಖ್ಯಾತಿ ತರುವ ಉದ್ದೇಶವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ”

ಅಷ್ಟೇ ಅಲ್ಲದೆ ತನ್ನ ವೆಬ್‌ಸೈಟ್, ಯೂಟ್ಯೂಬ್ ಅಥವಾ ಇನ್ನಾವುದೇ ಲಿಂಕ್‌ಗಳಿಂದ ಪ್ರಸಾರದ ವೀಡಿಯೊವನ್ನು ತೆಗೆದುಹಾಕಿ ಅದನ್ನು ಲಿಖಿತವಾಗಿ NBSA ಗೆ ಸಲ್ಲಿಸುವಂತೆ ಪ್ರಾಧಿಕಾರವು ಚಾನೆಲ್‌ಗೆ ಸೂಚಿಸಿದೆ.

ಈ ಆದೇಶದ ಅನುಸರಣೆಯ ಸಂಕೇತವಾಗಿ ಪ್ರಸಾರವಾದ ಒಂದು ವಾರದೊಳಗೆ ದಿನಾಂಕ ಮತ್ತು ಸಮಯದೊಂದಿಗೆ ಕ್ಷಮೆಯಾಚನೆ ಪ್ರಸಾರವನ್ನು ಒಳಗೊಂಡಿರುವ ಕಾಂಪ್ಯಾಕ್ಟ್ ಡಿಸ್ಕ್ ಅಥವಾ ಸಿಡಿಯನ್ನು ಸಲ್ಲಿಸಲು ಸುದ್ದಿ ವಾಹಿನಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?

ಇದಲ್ಲದೆ, ಟೈಮ್ಸ್ ನೌ ಈ ಆದೇಶವನ್ನು ಮಾಧ್ಯಮಗಳು, ನ್ಯೂಸ್ ಬ್ರಾಡ್ಕಾಸ್ಟರ್ಸ್ ಅಸೋಸಿಯೇಶನ್ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು ಮತ್ತು ಅದನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿ ಅದನ್ನು ತನ್ನ ವಾರ್ಷಿಕ ವರದಿಯಲ್ಲಿ ಸೇರಿಸಿಕೊಳ್ಳಬೇಕು ಎಂದೂ ಹೇಳಿದೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಸಂಜುಕ್ತ ಬಸು ಟ್ವಿಟ್ಟರ್‌ನಲ್ಲಿ, “ಇಂದು ಟೈಮ್ಸ್ ನೌಗೆ ಸರಿಯಾದ ಶಿಕ್ಷೆಯಾಗಿದೆ. ನಾವು ಗೆದ್ದಿದ್ದೇವೆ” ಎಂದು ಬರೆದ್ದಾರೆ.

ಇದನ್ನೂ ಓದಿ: ಕಟ್ಟಬೇಕಿರುವುದು ಪರ್ಯಾಯ ಮಾಧ್ಯಮವನ್ನಲ್ಲ; ಹೊಸ ಮುಖ್ಯವಾಹಿನಿ ಮಾಧ್ಯಮವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....