Homeಕರ್ನಾಟಕಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ...

ಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ…

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ... "ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ" ! ಥೂ.....!

- Advertisement -
- Advertisement -

2009 ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಸ್.ಬಂಗಾರಪ್ಪ ಅವರ ಪಾಲಿಗೆ ಈ ಚುನಾವಣೆ “ಮಾಡು ಇಲ್ಲ ಮಡಿ” ಎಂಬ ವಿರೋಚಿತ ಹೋರಾಟವೇ ಆಗಿತ್ತು.

ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ತಮ್ಮ ಮಗ ಬಿ.ವೈ ರಾಘವೇಂದ್ರ ನನ್ನು ಕಣಕ್ಕಿಳಿಸಿದ್ದರು. ದೈತ ಅಧಿಕಾರ ಬಲ, ಹಣ ಬಲ, ಜಾತಿ ಬಲದ ಉತ್ತುಂಗದಲ್ಲಿದ್ದ ಯಡಿಯೂರಪ್ಪ ಅವರ ವಿರುದ್ಧ ಕುಸಿದ ಆರೋಗ್ಯ, ತಮ್ಮವರದ್ದೇ ವಿದ್ರೋಹಗಳಿಗೆ ಸಿಕ್ಕು ಬರಿಗೈ ಆದ ಬಂಗಾರಪ್ಪ ಅವರ ಬಳಿ ಉಳಿದದ್ದು ಅವರು ಜನರ ಮೇಲಿಟ್ಟಿದ್ದ ಅದಮ್ಯ ವಿಶ್ವಾಸ ಮತ್ತು ತಮ್ಮ ಎಂದಿನಂತೆ ಜನ್ಮಜಾತ ಛಲಗುಣ ಮಾತ್ರ.

ಇಡೀ ರಾಜ್ಯ ಇತರೆ ಲೋಕಸಭಾ ಕ್ಷೇತ್ರಗಳ ಚುನಾವಣೆಯೇ ಒಂದು ತೂಕವಾದರೆ, ಶಿವಮೊಗ್ಗ ಕ್ಷೇತ್ರದ ಚುನಾವಣೆಯೇ ಅವುಗಳಿಗೆ ಸರಿಸಮ ತೂಗುವ ಚುನಾವಣೆ ಆಗಿತ್ತು.

ಮತದಾನಕ್ಕೆ ಇನ್ನೂ ಆರು ದಿನ ಉಳಿದಿತ್ತು. ಶಿವಮೊಗ್ಗದ ಬಾಡಿಗೆ ಮನೆಯೊಂದರಲ್ಲಿ ಸೋಪಾ ಮೇಲೆ ದಿವ್ಯ ಮೌನ ಧರಿಸಿ ಕುಳಿತಿದ್ದರು ಬಂಗಾರಪ್ಪ.

ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ಬಂಗಾರಪ್ಪ ಅವರ ಮುಂದೆ ಕುಳಿತು  ‘ಸರ್ ಚುನಾವಣೆ ಗೆ ಸ್ವಲ್ಪ ದುಡ್ಡು ಬೇಕು. ಒಂದೆರೆಡು ಕೋಟಿ ಆದರೆ ಗೆಲುವು ನಮ್ಮದೆ’ ಎಂದು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚುನಾವಣೆಯ “ತಂತ್ರ” ಗಳಿಗೆ ಮತದಾನಕ್ಕೆ ಮುಂಚೆಯೇ ಕಾಂಗ್ರೆಸ್‌ ಧೂಳಿಪಟವಾಗಿತ್ತು. ಮೌನ ಮುರಿದ ಬಂಗಾರಪ್ಪ ” ನೋ…. ನನ್ನತ್ರ ದುಡ್ಡಿಲ್ಲ, ಇಷ್ಟ‌ಇದ್ರೆ ಪಕ್ಷದಿಂದ ಕೆಲ್ಸ ಮಾಡಿ‌ ಇಲ್ಲವಾದರೆ ಬಿಟ್ಟೋಗಿ” ಎಂದು ಗುಡುಗಿಬಿಟ್ಟರು.

ಹಣ ವ್ಯವಸ್ಥೆಗೆ ಕಾಗೋಡು ತಿಮ್ಮಪ್ಪ ಮಾಡಿದ ಪ್ರಯತ್ನಗಳೆಲ್ಲಾ ಬಂಗಾರಪ್ಪನವರ ಮುಂದೆ ಫಲ ಕೊಡಲಿಲ್ಲ.
ಬಂಗಾರಪ್ಪ ಅಕ್ಷರಶಃ ಬರಿಗೈ ಆಗಿ ಕುಳಿತಿದ್ದರು. ಮಗ ಕುಮಾರ ಬಂಗಾರಪ್ಪ ಅವರಿಂದ ಹಣಸಹಾಯ ಪಡೆಯುವ ಕಾಂಗ್ರೆಸ್‌ ಮುಖಂಡರ ಪ್ರಯತ್ನವು ನೆಗೆದುಬಿತ್ತು. ಕಾಗೋಡು ತಿಮ್ಮಪ್ಪಾದಿಯಾಗಿ ದಿಕ್ಕು ತೋಚದೆ ಎಲ್ಲರೂ ಮನೆಯಿಂದ ಹೊರಬಿದ್ದರು.

ಅದುವರೆಗೂ ಮೂಕಪ್ರೇಕ್ಷಕನಂತೆ ಸಂದರ್ಶನಕ್ಕಾಗಿ‌ ಕಾದು ಕುಳಿತಿದ್ದ ನನ್ನ ಕಡೆ ನೋಡಿದ ಬಂಗಾರಪ್ಪನವರು
ಮಾತು ಶುರುವಿಟ್ಟುಕೊಂಡರು.

ಸಂದರ್ಶನದ ಮುಗಿದ ನಂತರದ ಆಫ್ ದಿ ರೆಕಾರ್ಡ್ ನಲ್ಲಿ…

“ಸರ್, ಚುನಾವಣೆಯ ಕೊನೆಯ ಘಳಿಗೆಯಲ್ಲಿ ದುಡ್ಡಿಲ್ಲ ಅಂದ್ರೆ ಚುನಾವಣೆ ನಿಮಗೆ ಕಷ್ಟ ಆಗೋಲ್ವ”? ಎಂದೆ.

“ಸೀ ಮಿಸ್ಟರ್ ರವಿಕುಮಾರ್, (ಅವರು ವಯಸ್ಸಿನಲ್ಲಿ ಚಿಕ್ಕವರನ್ನೂ ಬಹುವಚನದಿಂದಲೆ ಮಾತಾಡಿಸುವ ವಿವೇಕ ಇಟ್ಟುಕೊಂಡವರು) ನಾನು ಮನಸ್ಸು ಮಾಡಿದರೆ ಒಂದೆರಡು ಕೋಟಿ ತರೋದು ಕಷ್ಟ ಅಲ್ಲ, ಆದರೆ ಈ ಯಡಿಯೂರಪನ ಹಡಬೆ ದುಡ್ಡಿನ ಮುಂದೆ ನನ್ನ ದುಡ್ಡು ನಡೆಯೋಲ್ಲ”

ಒಂದು‌ ಲೋಟ ಮಜ್ಜಿಗೆ ಕುಡಿದು ಸಾವಾರಿಸಿಕೊಂಡು ಮಾತು ಮುಂದುವರೆಸಿದರು…

” ರವಿಕುಮಾರ್, ಈ ಚುನಾವಣೆ ದುಡ್ಡಿನ ಮೇಲೆ ನಡೀತಿದೆ. ಯಡಿಯೂರಪ್ಪನತ್ರ ಅಧಿಕಾರ, ಹಣ, ಸಿಸ್ಟಮ್ ಇದೆ. ನಾನು ಒಂದು ಓಟಿಗೆ 500 ಕೊಟ್ರೆ ಈ ಯಡಿಯೂರಪ್ಪ ಸಾವ್ರ ಕೊಡ್ತಾರೆ, ನಾನು ಸಾವ್ರ ಕೊಟ್ರೆ, ಅವ್ರು ಎರಡ್ಸಾವ್ರ ಕೊಡ್ತಾರೆ, ಒಂದು ಬೂತ್ ಗೆ ನಾನು ಐದು ಸಾವ್ರ ಕೊಟ್ರೆ, ಅವ್ರು ಹತ್ತು‌ಕೊಡ್ತಾರೆ. ಯಡಿಯೂರಪ್ಪನ ದುಡ್ಡಿನ ಮುಂದೆ ನನ್ನ ದುಡ್ಡು ಓಡೋಲ್ಲ. ದುಡ್ಡಿನ ಮೂಲಕ ಯಡಿಯೂರಪ್ಪನನ್ನು ಈಗ ಸೋಲಿಸೋಕೆ ಆಗೋಲ್ಲ,

ಅದ್ಕೆ ನಾನು ದುಡ್ಡಿಲ್ಲದೆ ಜನರ ಮುಂದೆ ಹೋಗ್ತಿನಿ. ಜನ ದುಡ್ಡಿಗೆ ಓಟಾಕ್ತಾರೋ, ನಾನು ಜನರ ಮೇಲಿಟ್ಟಿರುವ ನಂಬಿಕೆಗೆ ಕೈ ಹಿಡಿತಾರೋ ನೋಡೇ ಬಿಡ್ತಿನಿ. It’s one experiment in my life… Mr.Ravikumar ” ನಾನು ಇಂತಹ experiment ಗಳನ್ನೆ ಮಾಡ್ಕೊಂಡ್ ಬಂದಿದಿನಿ. ಈ ಬಂಗಾರಪ್ಪ ಸೋತಿದ್ದೇ ಇಲ್ಲ.

ಈ ಜನಕ್ಕೆ ನಾನು ಬೇಕಾ? ಯಡಿಯೂರಪ್ಪನ ಹಡಬೆ ದುಡ್ಡು ಬೇಕಾ? ನೋಡೋಣ”

ಬಂಗಾರಪ್ಪ ಅವರ ಈ ಆತ್ಮವಿಶ್ವಾಸ ಕಂಡು ನನಗೆ ವಿಸ್ಮಯ ಅನಿಸಿತು. !

ಯಡಿಯೂರಪ್ಪನವರ ಅಬ್ಬರದ ಮುಂದೆ ಚುನಾವಣೆಯನ್ನು ಕಾಂಗ್ರೆಸ್‌ ಕೈ ಚೆಲ್ಲಿತ್ತು. ಅನಾರೋಗ್ಯದ ದೈಹಿಕ ನೋವು ನುಂಗಿಕೊಳ್ಳುತ್ತಲೆ ಬಂಗಾರಪ್ಪ ಏಕಾಂಗಿಯಾಗಿ ಹಳ್ಳಿ ಹಳ್ಳಿ ತಿರುಗಿದರು.

ಬಿ ವೈ ರಾಘವೇಂದ್ರ ಪರ ನಿಂತ ಮಠಗಳ ಜನ್ಮ‌ಜಾಲಾಡಿದರು. ನಾಕು ಗೊಡ್ಡೆಮ್ಮೆ ಸಾಕಿದ ಮಾತ್ರಕ್ಕೆ ಗೋ ರಕ್ಷಕನಾಗೋಲ್ಲ. ನಮ್ಮಂಗೆ ಸಗಣಿ, ಗಂಜಲ ಬಾಚಿ ಬಳಿ ಬೇಕು ಎಂದು ಈ ಭಾಗದ ಸ್ವಾಮಿಯನ್ನು ಬಹಿರಂಗವಾಗಿ ಈಡಾಡಿದರು.

ಮತದಾನದ ದಿನ ಶೇ.90 ರಷ್ಟು ಬೂತ್ ಗಳಲ್ಲಿ ಬಂಗಾರಪ್ಪ ಪರ ಹ್ಯಾಂಡ್ ಬಿಲ್ ಹಿಡಿಯಲು ಒಬ್ಬ ಕಾರ್ಯಕರ್ತ ಕಾಣಲಿಲ್ಲ. ಅವರೇ ಸೃಷ್ಟಿದ ಹಾಲಪ್ಪ, ಗೋಪಾಲಕೃಷ್ಣ ಅವರೆಲ್ಲಾ ಬೆನ್ನಿಗೆ ಇರಿದಿದ್ದರು.

ಯಡಿಯೂರಪ್ಪ ಅವರ “ಪ್ರಭಾವ” ಕ್ಕೆ ಮರುಳಾದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ತನ್ನ ಬೆಂಬಲಿಗರಿಂದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ದಾಂಧಲೆ ನಡೆಸಿದರು. ಬೀಸಿ ಬಂದ ಕಲ್ಲಿಗೆ ಎದ್ದು ನಿಂತು ಎದೆ ಕೊಟ್ಟ ಬಂಗಾರಪ್ಪ ಅವರು ತೋಳೇರಿಸಿ ಅಬ್ಬರಿಸಿದರು.

ಫಲಿತಾಂಶ ಹೊರಬಿದ್ದಾಗ ಯಡಿಯೂರಪ್ಪ ಅವರ ಪುತ್ರರತ್ನ ರಾಘವೇಂದ್ರ ಕೇವಲ 52.893 ಮತಗಳಿಂದ ಗೆಲುವು ಸಾಧಿಸಿದರು.

ಬಂಗಾರಪ್ಪ ಅವರನ್ನು ಠೇವಣಿ ಕಳೆದು ಹೀನಾಯ ಸೋಲಿಗೆ ದೂಡಬೇಕೆಂದು ಸಕಲ ಸಂಪತ್ತು, ದಂಡು- ದಳ, ತಂತ್ರ, ಮಂತ್ರಗಳೊಂದಿಗೆ ಹಠಕ್ಕಿಳಿದಿದ್ದ ಯಡಿಯೂರಪ್ಪ ಫಲಿತಾಂಶದ ಲೀಡ್ ಕೇಳಿ ಕೆರಳಿ‌ ಕೆಂಡವಾದರು. ತಮ್ಮದೇ ಸಂಪುಟ ಸಚಿವ ಈಶ್ವರಪ್ಪ ನವರ ಮೇಲೆ ಹರಿಹಾಯ್ದರು ಕೂಡ. ಮಗನ ವಿಜಯೋತ್ಸವ ಅವರಿಗೆ ಅಪಥ್ಯವಾಗಿತ್ತು.

ಅಕ್ಷರಶಃ ಬರಿಗೈ ನಿರ್ಗತಿಕನಾಗಿ ನಿಂತಿದ್ದ ಬಂಗಾರಪ್ಪ ಅವರು ಕೇವಲ 52 ಸಾವಿರ ಮತಗಳ ಅಂತರದಲ್ಲಿ ತಾಂತ್ರಿಕವಾಗಿ ಸೋತಿದ್ದರು. ಆದರೆ ಜನರ ಮೇಲಿಟ್ಟಿದ್ದ ಅವರ ವಿಶ್ವಾಸ ಯಾವ ಖರೀದಿಗೂ ಒಳಗಾಗದೆ ಅವರನ್ನು ನೈತಿಕವಾಗಿ ಗೆಲ್ಲಿಸಿತ್ತು.

ಈ ಸೋಲು, ತಮ್ಮವರೇ ಎಸಗಿದ ವಿದ್ರೋಹಗಳು ಬಂಗಾರಪ್ಪ ಅವರನ್ನು ಇನ್ನಿಲ್ಲದೆ ಬಾಧಿಸಿಬಿಟ್ಟಿತು…

ಈ ನೋವನ್ನು ನುಂಗಿಕೊಂಡೆ ಅವರು ವಿರೋಚಿತವಾಗಿ ನಿರ್ಗಮಿಸಿದರು.

ಇವತ್ತು ಸೊರಬದಲ್ಲಿ ಬಂಗಾರಪ್ಪ ಅವರ 87 ನೇ ಜನ್ಮದಿನೋತ್ಸವ ಸಮಾರಂಭವನ್ನು ಪುತ್ರ ‌ಕುಮಾರ್ ಬಂಗಾರಪ್ಪ ಆಯೋಜಿಸಿದ್ದು ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನವರು ಬಂಗಾರಪ್ಪ ಅವರನ್ನು ಕೊಂಡಾಡಿದರು. ಅವರ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ ಬಿಡುಗಡೆ ಮಾಡುವುದಾಗಿ ಘೋಷಿಸಿದರು.

ಬದುಕಿದ್ದಾಗ ತನಗೆ ರಾಜಕೀಯ ಅಸ್ತಿತ್ವ ಕೊಟ್ಟ ತನ್ನ ಅಪ್ಪನನ್ನು ಕೌಟುಂಬಿಕವಾಗಿ, ರಾಜಕೀಯವಾಗಿ ಕಾಡಿದ ಕುಮಾರ ಬಂಗಾರಪ್ಪ ಇದ್ದಕ್ಕಿದ್ದಂತೆ ಅಪ್ಪನ ಜನ್ಮದಿನವನ್ನು ಅದ್ಧೂರಿಯಾಗಿ ನಡೆಸಿದರು. ಅದನ್ನು ಯಡಿಯೂರಪ್ಪ ಉದ್ಘಾಟಿಸಿದರು. ಎಂತಹ ವೈರುಧ್ಯ ನೋಡಿ!

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ…

“ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ” ! ಥೂ…..!

ಅದೇನೆ ಇರಲಿ, ಬಂಗಾರಪ್ಪ ಸರ್ ನಿಮಗೆ‌ ಜನ್ಮದಿನದ ಶುಭಾಶಯಗಳು.

  • ಎನ್.ರವಿಕುಮಾರ್ ಟೆಲೆಕ್ಸ್

(ರವಿಕುಮಾರ್ ಪತ್ರಕರ್ತರು ಮತ್ತು ಯುವ ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...