Homeಕರ್ನಾಟಕಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ...

ಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ…

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ... "ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ" ! ಥೂ.....!

- Advertisement -
- Advertisement -

2009 ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಸ್.ಬಂಗಾರಪ್ಪ ಅವರ ಪಾಲಿಗೆ ಈ ಚುನಾವಣೆ “ಮಾಡು ಇಲ್ಲ ಮಡಿ” ಎಂಬ ವಿರೋಚಿತ ಹೋರಾಟವೇ ಆಗಿತ್ತು.

ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ತಮ್ಮ ಮಗ ಬಿ.ವೈ ರಾಘವೇಂದ್ರ ನನ್ನು ಕಣಕ್ಕಿಳಿಸಿದ್ದರು. ದೈತ ಅಧಿಕಾರ ಬಲ, ಹಣ ಬಲ, ಜಾತಿ ಬಲದ ಉತ್ತುಂಗದಲ್ಲಿದ್ದ ಯಡಿಯೂರಪ್ಪ ಅವರ ವಿರುದ್ಧ ಕುಸಿದ ಆರೋಗ್ಯ, ತಮ್ಮವರದ್ದೇ ವಿದ್ರೋಹಗಳಿಗೆ ಸಿಕ್ಕು ಬರಿಗೈ ಆದ ಬಂಗಾರಪ್ಪ ಅವರ ಬಳಿ ಉಳಿದದ್ದು ಅವರು ಜನರ ಮೇಲಿಟ್ಟಿದ್ದ ಅದಮ್ಯ ವಿಶ್ವಾಸ ಮತ್ತು ತಮ್ಮ ಎಂದಿನಂತೆ ಜನ್ಮಜಾತ ಛಲಗುಣ ಮಾತ್ರ.

ಇಡೀ ರಾಜ್ಯ ಇತರೆ ಲೋಕಸಭಾ ಕ್ಷೇತ್ರಗಳ ಚುನಾವಣೆಯೇ ಒಂದು ತೂಕವಾದರೆ, ಶಿವಮೊಗ್ಗ ಕ್ಷೇತ್ರದ ಚುನಾವಣೆಯೇ ಅವುಗಳಿಗೆ ಸರಿಸಮ ತೂಗುವ ಚುನಾವಣೆ ಆಗಿತ್ತು.

ಮತದಾನಕ್ಕೆ ಇನ್ನೂ ಆರು ದಿನ ಉಳಿದಿತ್ತು. ಶಿವಮೊಗ್ಗದ ಬಾಡಿಗೆ ಮನೆಯೊಂದರಲ್ಲಿ ಸೋಪಾ ಮೇಲೆ ದಿವ್ಯ ಮೌನ ಧರಿಸಿ ಕುಳಿತಿದ್ದರು ಬಂಗಾರಪ್ಪ.

ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ಬಂಗಾರಪ್ಪ ಅವರ ಮುಂದೆ ಕುಳಿತು  ‘ಸರ್ ಚುನಾವಣೆ ಗೆ ಸ್ವಲ್ಪ ದುಡ್ಡು ಬೇಕು. ಒಂದೆರೆಡು ಕೋಟಿ ಆದರೆ ಗೆಲುವು ನಮ್ಮದೆ’ ಎಂದು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚುನಾವಣೆಯ “ತಂತ್ರ” ಗಳಿಗೆ ಮತದಾನಕ್ಕೆ ಮುಂಚೆಯೇ ಕಾಂಗ್ರೆಸ್‌ ಧೂಳಿಪಟವಾಗಿತ್ತು. ಮೌನ ಮುರಿದ ಬಂಗಾರಪ್ಪ ” ನೋ…. ನನ್ನತ್ರ ದುಡ್ಡಿಲ್ಲ, ಇಷ್ಟ‌ಇದ್ರೆ ಪಕ್ಷದಿಂದ ಕೆಲ್ಸ ಮಾಡಿ‌ ಇಲ್ಲವಾದರೆ ಬಿಟ್ಟೋಗಿ” ಎಂದು ಗುಡುಗಿಬಿಟ್ಟರು.

ಹಣ ವ್ಯವಸ್ಥೆಗೆ ಕಾಗೋಡು ತಿಮ್ಮಪ್ಪ ಮಾಡಿದ ಪ್ರಯತ್ನಗಳೆಲ್ಲಾ ಬಂಗಾರಪ್ಪನವರ ಮುಂದೆ ಫಲ ಕೊಡಲಿಲ್ಲ.
ಬಂಗಾರಪ್ಪ ಅಕ್ಷರಶಃ ಬರಿಗೈ ಆಗಿ ಕುಳಿತಿದ್ದರು. ಮಗ ಕುಮಾರ ಬಂಗಾರಪ್ಪ ಅವರಿಂದ ಹಣಸಹಾಯ ಪಡೆಯುವ ಕಾಂಗ್ರೆಸ್‌ ಮುಖಂಡರ ಪ್ರಯತ್ನವು ನೆಗೆದುಬಿತ್ತು. ಕಾಗೋಡು ತಿಮ್ಮಪ್ಪಾದಿಯಾಗಿ ದಿಕ್ಕು ತೋಚದೆ ಎಲ್ಲರೂ ಮನೆಯಿಂದ ಹೊರಬಿದ್ದರು.

ಅದುವರೆಗೂ ಮೂಕಪ್ರೇಕ್ಷಕನಂತೆ ಸಂದರ್ಶನಕ್ಕಾಗಿ‌ ಕಾದು ಕುಳಿತಿದ್ದ ನನ್ನ ಕಡೆ ನೋಡಿದ ಬಂಗಾರಪ್ಪನವರು
ಮಾತು ಶುರುವಿಟ್ಟುಕೊಂಡರು.

ಸಂದರ್ಶನದ ಮುಗಿದ ನಂತರದ ಆಫ್ ದಿ ರೆಕಾರ್ಡ್ ನಲ್ಲಿ…

“ಸರ್, ಚುನಾವಣೆಯ ಕೊನೆಯ ಘಳಿಗೆಯಲ್ಲಿ ದುಡ್ಡಿಲ್ಲ ಅಂದ್ರೆ ಚುನಾವಣೆ ನಿಮಗೆ ಕಷ್ಟ ಆಗೋಲ್ವ”? ಎಂದೆ.

“ಸೀ ಮಿಸ್ಟರ್ ರವಿಕುಮಾರ್, (ಅವರು ವಯಸ್ಸಿನಲ್ಲಿ ಚಿಕ್ಕವರನ್ನೂ ಬಹುವಚನದಿಂದಲೆ ಮಾತಾಡಿಸುವ ವಿವೇಕ ಇಟ್ಟುಕೊಂಡವರು) ನಾನು ಮನಸ್ಸು ಮಾಡಿದರೆ ಒಂದೆರಡು ಕೋಟಿ ತರೋದು ಕಷ್ಟ ಅಲ್ಲ, ಆದರೆ ಈ ಯಡಿಯೂರಪನ ಹಡಬೆ ದುಡ್ಡಿನ ಮುಂದೆ ನನ್ನ ದುಡ್ಡು ನಡೆಯೋಲ್ಲ”

ಒಂದು‌ ಲೋಟ ಮಜ್ಜಿಗೆ ಕುಡಿದು ಸಾವಾರಿಸಿಕೊಂಡು ಮಾತು ಮುಂದುವರೆಸಿದರು…

” ರವಿಕುಮಾರ್, ಈ ಚುನಾವಣೆ ದುಡ್ಡಿನ ಮೇಲೆ ನಡೀತಿದೆ. ಯಡಿಯೂರಪ್ಪನತ್ರ ಅಧಿಕಾರ, ಹಣ, ಸಿಸ್ಟಮ್ ಇದೆ. ನಾನು ಒಂದು ಓಟಿಗೆ 500 ಕೊಟ್ರೆ ಈ ಯಡಿಯೂರಪ್ಪ ಸಾವ್ರ ಕೊಡ್ತಾರೆ, ನಾನು ಸಾವ್ರ ಕೊಟ್ರೆ, ಅವ್ರು ಎರಡ್ಸಾವ್ರ ಕೊಡ್ತಾರೆ, ಒಂದು ಬೂತ್ ಗೆ ನಾನು ಐದು ಸಾವ್ರ ಕೊಟ್ರೆ, ಅವ್ರು ಹತ್ತು‌ಕೊಡ್ತಾರೆ. ಯಡಿಯೂರಪ್ಪನ ದುಡ್ಡಿನ ಮುಂದೆ ನನ್ನ ದುಡ್ಡು ಓಡೋಲ್ಲ. ದುಡ್ಡಿನ ಮೂಲಕ ಯಡಿಯೂರಪ್ಪನನ್ನು ಈಗ ಸೋಲಿಸೋಕೆ ಆಗೋಲ್ಲ,

ಅದ್ಕೆ ನಾನು ದುಡ್ಡಿಲ್ಲದೆ ಜನರ ಮುಂದೆ ಹೋಗ್ತಿನಿ. ಜನ ದುಡ್ಡಿಗೆ ಓಟಾಕ್ತಾರೋ, ನಾನು ಜನರ ಮೇಲಿಟ್ಟಿರುವ ನಂಬಿಕೆಗೆ ಕೈ ಹಿಡಿತಾರೋ ನೋಡೇ ಬಿಡ್ತಿನಿ. It’s one experiment in my life… Mr.Ravikumar ” ನಾನು ಇಂತಹ experiment ಗಳನ್ನೆ ಮಾಡ್ಕೊಂಡ್ ಬಂದಿದಿನಿ. ಈ ಬಂಗಾರಪ್ಪ ಸೋತಿದ್ದೇ ಇಲ್ಲ.

ಈ ಜನಕ್ಕೆ ನಾನು ಬೇಕಾ? ಯಡಿಯೂರಪ್ಪನ ಹಡಬೆ ದುಡ್ಡು ಬೇಕಾ? ನೋಡೋಣ”

ಬಂಗಾರಪ್ಪ ಅವರ ಈ ಆತ್ಮವಿಶ್ವಾಸ ಕಂಡು ನನಗೆ ವಿಸ್ಮಯ ಅನಿಸಿತು. !

ಯಡಿಯೂರಪ್ಪನವರ ಅಬ್ಬರದ ಮುಂದೆ ಚುನಾವಣೆಯನ್ನು ಕಾಂಗ್ರೆಸ್‌ ಕೈ ಚೆಲ್ಲಿತ್ತು. ಅನಾರೋಗ್ಯದ ದೈಹಿಕ ನೋವು ನುಂಗಿಕೊಳ್ಳುತ್ತಲೆ ಬಂಗಾರಪ್ಪ ಏಕಾಂಗಿಯಾಗಿ ಹಳ್ಳಿ ಹಳ್ಳಿ ತಿರುಗಿದರು.

ಬಿ ವೈ ರಾಘವೇಂದ್ರ ಪರ ನಿಂತ ಮಠಗಳ ಜನ್ಮ‌ಜಾಲಾಡಿದರು. ನಾಕು ಗೊಡ್ಡೆಮ್ಮೆ ಸಾಕಿದ ಮಾತ್ರಕ್ಕೆ ಗೋ ರಕ್ಷಕನಾಗೋಲ್ಲ. ನಮ್ಮಂಗೆ ಸಗಣಿ, ಗಂಜಲ ಬಾಚಿ ಬಳಿ ಬೇಕು ಎಂದು ಈ ಭಾಗದ ಸ್ವಾಮಿಯನ್ನು ಬಹಿರಂಗವಾಗಿ ಈಡಾಡಿದರು.

ಮತದಾನದ ದಿನ ಶೇ.90 ರಷ್ಟು ಬೂತ್ ಗಳಲ್ಲಿ ಬಂಗಾರಪ್ಪ ಪರ ಹ್ಯಾಂಡ್ ಬಿಲ್ ಹಿಡಿಯಲು ಒಬ್ಬ ಕಾರ್ಯಕರ್ತ ಕಾಣಲಿಲ್ಲ. ಅವರೇ ಸೃಷ್ಟಿದ ಹಾಲಪ್ಪ, ಗೋಪಾಲಕೃಷ್ಣ ಅವರೆಲ್ಲಾ ಬೆನ್ನಿಗೆ ಇರಿದಿದ್ದರು.

ಯಡಿಯೂರಪ್ಪ ಅವರ “ಪ್ರಭಾವ” ಕ್ಕೆ ಮರುಳಾದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ತನ್ನ ಬೆಂಬಲಿಗರಿಂದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ದಾಂಧಲೆ ನಡೆಸಿದರು. ಬೀಸಿ ಬಂದ ಕಲ್ಲಿಗೆ ಎದ್ದು ನಿಂತು ಎದೆ ಕೊಟ್ಟ ಬಂಗಾರಪ್ಪ ಅವರು ತೋಳೇರಿಸಿ ಅಬ್ಬರಿಸಿದರು.

ಫಲಿತಾಂಶ ಹೊರಬಿದ್ದಾಗ ಯಡಿಯೂರಪ್ಪ ಅವರ ಪುತ್ರರತ್ನ ರಾಘವೇಂದ್ರ ಕೇವಲ 52.893 ಮತಗಳಿಂದ ಗೆಲುವು ಸಾಧಿಸಿದರು.

ಬಂಗಾರಪ್ಪ ಅವರನ್ನು ಠೇವಣಿ ಕಳೆದು ಹೀನಾಯ ಸೋಲಿಗೆ ದೂಡಬೇಕೆಂದು ಸಕಲ ಸಂಪತ್ತು, ದಂಡು- ದಳ, ತಂತ್ರ, ಮಂತ್ರಗಳೊಂದಿಗೆ ಹಠಕ್ಕಿಳಿದಿದ್ದ ಯಡಿಯೂರಪ್ಪ ಫಲಿತಾಂಶದ ಲೀಡ್ ಕೇಳಿ ಕೆರಳಿ‌ ಕೆಂಡವಾದರು. ತಮ್ಮದೇ ಸಂಪುಟ ಸಚಿವ ಈಶ್ವರಪ್ಪ ನವರ ಮೇಲೆ ಹರಿಹಾಯ್ದರು ಕೂಡ. ಮಗನ ವಿಜಯೋತ್ಸವ ಅವರಿಗೆ ಅಪಥ್ಯವಾಗಿತ್ತು.

ಅಕ್ಷರಶಃ ಬರಿಗೈ ನಿರ್ಗತಿಕನಾಗಿ ನಿಂತಿದ್ದ ಬಂಗಾರಪ್ಪ ಅವರು ಕೇವಲ 52 ಸಾವಿರ ಮತಗಳ ಅಂತರದಲ್ಲಿ ತಾಂತ್ರಿಕವಾಗಿ ಸೋತಿದ್ದರು. ಆದರೆ ಜನರ ಮೇಲಿಟ್ಟಿದ್ದ ಅವರ ವಿಶ್ವಾಸ ಯಾವ ಖರೀದಿಗೂ ಒಳಗಾಗದೆ ಅವರನ್ನು ನೈತಿಕವಾಗಿ ಗೆಲ್ಲಿಸಿತ್ತು.

ಈ ಸೋಲು, ತಮ್ಮವರೇ ಎಸಗಿದ ವಿದ್ರೋಹಗಳು ಬಂಗಾರಪ್ಪ ಅವರನ್ನು ಇನ್ನಿಲ್ಲದೆ ಬಾಧಿಸಿಬಿಟ್ಟಿತು…

ಈ ನೋವನ್ನು ನುಂಗಿಕೊಂಡೆ ಅವರು ವಿರೋಚಿತವಾಗಿ ನಿರ್ಗಮಿಸಿದರು.

ಇವತ್ತು ಸೊರಬದಲ್ಲಿ ಬಂಗಾರಪ್ಪ ಅವರ 87 ನೇ ಜನ್ಮದಿನೋತ್ಸವ ಸಮಾರಂಭವನ್ನು ಪುತ್ರ ‌ಕುಮಾರ್ ಬಂಗಾರಪ್ಪ ಆಯೋಜಿಸಿದ್ದು ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನವರು ಬಂಗಾರಪ್ಪ ಅವರನ್ನು ಕೊಂಡಾಡಿದರು. ಅವರ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ ಬಿಡುಗಡೆ ಮಾಡುವುದಾಗಿ ಘೋಷಿಸಿದರು.

ಬದುಕಿದ್ದಾಗ ತನಗೆ ರಾಜಕೀಯ ಅಸ್ತಿತ್ವ ಕೊಟ್ಟ ತನ್ನ ಅಪ್ಪನನ್ನು ಕೌಟುಂಬಿಕವಾಗಿ, ರಾಜಕೀಯವಾಗಿ ಕಾಡಿದ ಕುಮಾರ ಬಂಗಾರಪ್ಪ ಇದ್ದಕ್ಕಿದ್ದಂತೆ ಅಪ್ಪನ ಜನ್ಮದಿನವನ್ನು ಅದ್ಧೂರಿಯಾಗಿ ನಡೆಸಿದರು. ಅದನ್ನು ಯಡಿಯೂರಪ್ಪ ಉದ್ಘಾಟಿಸಿದರು. ಎಂತಹ ವೈರುಧ್ಯ ನೋಡಿ!

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ…

“ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ” ! ಥೂ…..!

ಅದೇನೆ ಇರಲಿ, ಬಂಗಾರಪ್ಪ ಸರ್ ನಿಮಗೆ‌ ಜನ್ಮದಿನದ ಶುಭಾಶಯಗಳು.

  • ಎನ್.ರವಿಕುಮಾರ್ ಟೆಲೆಕ್ಸ್

(ರವಿಕುಮಾರ್ ಪತ್ರಕರ್ತರು ಮತ್ತು ಯುವ ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...