Homeಮುಖಪುಟಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ವಾಕ್ಸಮರ ಮುಂದುವರೆದಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ.

ನಿನ್ನೆ ಉದ್ಧವ್ ಠಾಕ್ರೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಅದಕ್ಕೆ ಸರಣಿ ಟ್ವೀಟ್‌ಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ ರಾಣಾವತ್ “ಸಂಜಯ್ ರಾಣಾವತ್ ನನ್ನನ್ನು ಹರಮ್‌ಖೋರ್ ಎಂದು ಕರೆದರು. ಈಗ ಉದ್ಧವ್ ಠಾಕ್ರೆ ನಮಕ್ ಹರಾಮ್ (ವಿಶ್ವಾಸಘಾತುಕರು) ಎಂದು ಕರೆಯುತ್ತಿದ್ದಾರೆ. ಅವರು ಮುಂಬೈ ನನಗೆ ಆಶ್ರಯ ನೀಡದಿದ್ದರೆ ನನ್ನ ರಾಜ್ಯದಲ್ಲಿ ನನಗೆ ಆಹಾರ ಸಿಗುವುದಿಲ್ಲ ಎನ್ನುತ್ತಿದ್ದಾರೆ. ತನ್ನ ಮಗನ ವಯಸ್ಸಿನವಳಾದ ಒಬ್ಬಂಟಿ ಮಹಿಳೆಯ ಕುರಿತು ಹೀಗೆ ಮಾತನಾಡುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಮುಖ್ಯಮಂತ್ರಿಗಳೇ ನೆಪೋಟಿಸಂನ (ಸ್ವಜನಪಕ್ಷಪಾತ) ಕೆಟ್ಟ ಉತ್ಪನ್ನ ನೀವು” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿಗಳೇ, “ನಾನು ನಿಮ್ಮಂತೆ ನನ್ನ ತಂದೆಯ ಸಂಪತ್ತಿನಿಂದ ಬದುಕುತ್ತಿಲ್ಲ. ನಾನು ಸ್ವಜನಪಕ್ಷಪಾತದ ಉತ್ಪನ್ನವಾಗಬೇಕೆಂದು ಬಯಸಿದರೆ ನಾನು ಹಿಮಾಚಲದಲ್ಲಿಯೇ ಉಳಿಯಬಹುದಿತ್ತು. ನಾನು ಹೆಸರಾಂತ ಕುಟುಂಬದಿಂದ ಬಂದವಳು, ಅವರ ಸಂಪತ್ತಿನ ಮೇಲೆ ಬದುಕಲು ನಾನು ಬಯಸುವುದಿಲ್ಲ. ಕೆಲವು ಜನರು ಸ್ವಾಭಿಮಾನ ಮತ್ತು ಸ್ವಯಂ ಮೌಲ್ಯವನ್ನು ಹೊಂದಿದ್ದಾರೆ” ಎಂದು ಕಂಗನಾ ಕಿಡಿಕಾರಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವನ್ನು ಕಂಗನಾ ಸೇರಿದಂತೆ ಹಲವರು ಕೊಲೆ ಎಂದು ಆರೋಪಿಸಿದ್ದರು. ಆದರೆ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಅಂದಿನಿಂದ ಬಿಜೆಪಿ ಮತ್ತು ಕಂಗನಾ ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದ್ದರು. ಈಗ ಏಮ್ಸ್ ವೈದ್ಯರು ಸುಶಾಂತ್ ಸಾವು ಆತ್ಮಹತ್ಯೆ ಎಂದಿದ್ದಾರೆ. ಆದರು ಕಂಗನಾ ಟೀಕೆ ಮುಂದುವರೆಸಿದ್ದಾರೆ.

ಕಂಗನಾ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರವೆಂದು ಕರೆದಿದ್ದಾಗ ಶಿವಸೇನೆ ಕೆಂಡಾಮಂಡಲವಾಗಿತ್ತು. ಅಕ್ರಮ ಕಟ್ಟಡದ ನೆಪದಲ್ಲಿ ಕಂಗನಾ ಕಚೇರಿಯನ್ನು ಬಿಎಂಸಿ ನೆಲಸಮಗೊಳಿಸಲು ಮುಂದಾಗಿತ್ತು.

ಅಮಿತ್ ಷಾ ಅವರ ಮಗ ಬಿಸಿಸಿಐ ಸೆಕ್ರೆಟರಿ, ಅರುಣ್ ಜೇಟ್ಲಿಯ ಮಗ ಡಿಡಿಸಿಎ ಅಧ್ಯಕ್ಷ, ಅರ್ನಾಬ್ ಗೋಸ್ವಾಮಿಯ ಪತ್ನಿ ರಿಪಬ್ಲಿಕ್ ಟಿವಿಯಲ್ಲಿ ಕಾರ್ಯಕ್ರಮಗಳ ಮುಖ್ಯಸ್ಥರಾಗಿದ್ದಾರೆ. ಕಂಗನಾ ರಣಾವತ್ ಅವರ ಸಹೋದರ ಮತ್ತು ಸಹೋದರಿ ತನ್ನ ಪ್ರೊಡಕ್ಷನ್ ಹೌಸ್‌ನಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಪಾಟಿಸಂ ವಾರಿಯರ್ ಭಕ್ತರು ಈ ಎಲ್ಲದರ ಬಗ್ಗೆ ಮೌನವಾಗಿರುತ್ತಾರೆ ಎಂದು ಖ್ಯಾತ ಯೂಟ್ಯೂಬರ್ ಧೃವ್ ರಾಠೀ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಗೋವಾದಲ್ಲಿ ಬೀಫ್ ಬ್ಯಾನ್ ಯಾಕಿಲ್ಲ, ಇದ ನಿಮ್ಮ ಹಿಂದುತ್ವ?: ಉದ್ಧವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...