Homeಮುಖಪುಟಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ವಾಕ್ಸಮರ ಮುಂದುವರೆದಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ.

ನಿನ್ನೆ ಉದ್ಧವ್ ಠಾಕ್ರೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಅದಕ್ಕೆ ಸರಣಿ ಟ್ವೀಟ್‌ಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ ರಾಣಾವತ್ “ಸಂಜಯ್ ರಾಣಾವತ್ ನನ್ನನ್ನು ಹರಮ್‌ಖೋರ್ ಎಂದು ಕರೆದರು. ಈಗ ಉದ್ಧವ್ ಠಾಕ್ರೆ ನಮಕ್ ಹರಾಮ್ (ವಿಶ್ವಾಸಘಾತುಕರು) ಎಂದು ಕರೆಯುತ್ತಿದ್ದಾರೆ. ಅವರು ಮುಂಬೈ ನನಗೆ ಆಶ್ರಯ ನೀಡದಿದ್ದರೆ ನನ್ನ ರಾಜ್ಯದಲ್ಲಿ ನನಗೆ ಆಹಾರ ಸಿಗುವುದಿಲ್ಲ ಎನ್ನುತ್ತಿದ್ದಾರೆ. ತನ್ನ ಮಗನ ವಯಸ್ಸಿನವಳಾದ ಒಬ್ಬಂಟಿ ಮಹಿಳೆಯ ಕುರಿತು ಹೀಗೆ ಮಾತನಾಡುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಮುಖ್ಯಮಂತ್ರಿಗಳೇ ನೆಪೋಟಿಸಂನ (ಸ್ವಜನಪಕ್ಷಪಾತ) ಕೆಟ್ಟ ಉತ್ಪನ್ನ ನೀವು” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿಗಳೇ, “ನಾನು ನಿಮ್ಮಂತೆ ನನ್ನ ತಂದೆಯ ಸಂಪತ್ತಿನಿಂದ ಬದುಕುತ್ತಿಲ್ಲ. ನಾನು ಸ್ವಜನಪಕ್ಷಪಾತದ ಉತ್ಪನ್ನವಾಗಬೇಕೆಂದು ಬಯಸಿದರೆ ನಾನು ಹಿಮಾಚಲದಲ್ಲಿಯೇ ಉಳಿಯಬಹುದಿತ್ತು. ನಾನು ಹೆಸರಾಂತ ಕುಟುಂಬದಿಂದ ಬಂದವಳು, ಅವರ ಸಂಪತ್ತಿನ ಮೇಲೆ ಬದುಕಲು ನಾನು ಬಯಸುವುದಿಲ್ಲ. ಕೆಲವು ಜನರು ಸ್ವಾಭಿಮಾನ ಮತ್ತು ಸ್ವಯಂ ಮೌಲ್ಯವನ್ನು ಹೊಂದಿದ್ದಾರೆ” ಎಂದು ಕಂಗನಾ ಕಿಡಿಕಾರಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವನ್ನು ಕಂಗನಾ ಸೇರಿದಂತೆ ಹಲವರು ಕೊಲೆ ಎಂದು ಆರೋಪಿಸಿದ್ದರು. ಆದರೆ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಅಂದಿನಿಂದ ಬಿಜೆಪಿ ಮತ್ತು ಕಂಗನಾ ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದ್ದರು. ಈಗ ಏಮ್ಸ್ ವೈದ್ಯರು ಸುಶಾಂತ್ ಸಾವು ಆತ್ಮಹತ್ಯೆ ಎಂದಿದ್ದಾರೆ. ಆದರು ಕಂಗನಾ ಟೀಕೆ ಮುಂದುವರೆಸಿದ್ದಾರೆ.

ಕಂಗನಾ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರವೆಂದು ಕರೆದಿದ್ದಾಗ ಶಿವಸೇನೆ ಕೆಂಡಾಮಂಡಲವಾಗಿತ್ತು. ಅಕ್ರಮ ಕಟ್ಟಡದ ನೆಪದಲ್ಲಿ ಕಂಗನಾ ಕಚೇರಿಯನ್ನು ಬಿಎಂಸಿ ನೆಲಸಮಗೊಳಿಸಲು ಮುಂದಾಗಿತ್ತು.

ಅಮಿತ್ ಷಾ ಅವರ ಮಗ ಬಿಸಿಸಿಐ ಸೆಕ್ರೆಟರಿ, ಅರುಣ್ ಜೇಟ್ಲಿಯ ಮಗ ಡಿಡಿಸಿಎ ಅಧ್ಯಕ್ಷ, ಅರ್ನಾಬ್ ಗೋಸ್ವಾಮಿಯ ಪತ್ನಿ ರಿಪಬ್ಲಿಕ್ ಟಿವಿಯಲ್ಲಿ ಕಾರ್ಯಕ್ರಮಗಳ ಮುಖ್ಯಸ್ಥರಾಗಿದ್ದಾರೆ. ಕಂಗನಾ ರಣಾವತ್ ಅವರ ಸಹೋದರ ಮತ್ತು ಸಹೋದರಿ ತನ್ನ ಪ್ರೊಡಕ್ಷನ್ ಹೌಸ್‌ನಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಪಾಟಿಸಂ ವಾರಿಯರ್ ಭಕ್ತರು ಈ ಎಲ್ಲದರ ಬಗ್ಗೆ ಮೌನವಾಗಿರುತ್ತಾರೆ ಎಂದು ಖ್ಯಾತ ಯೂಟ್ಯೂಬರ್ ಧೃವ್ ರಾಠೀ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಗೋವಾದಲ್ಲಿ ಬೀಫ್ ಬ್ಯಾನ್ ಯಾಕಿಲ್ಲ, ಇದ ನಿಮ್ಮ ಹಿಂದುತ್ವ?: ಉದ್ಧವ್ ಠಾಕ್ರೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...