Homeಕರ್ನಾಟಕಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.

- Advertisement -
- Advertisement -

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಸತ್ಯ ಸಂಗತಿಯನ್ನು ಜನತೆಯ ಮುಂದಿಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ ಎಂದು ಬಿಜೆಪಿ ವಿರುದ್ದ ಹಲವಾರು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ.

ಬಿಜೆಪಿ ಮಾಡಿರುವ ಆರೋಪದ ಮೇಲೆ ಅಷ್ಟೊಂದು ವಿಶ್ವಾಸ ಇದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

“ಬಿಜೆಪಿ ತನ್ನ ನಾಯಕರಿಗೆ ದೇಶ, ಧರ್ಮ, ಸಮಾಜ ಒಡೆಯುವ ತರಬೇತಿಯನ್ನಷ್ಟೇ ನೀಡದೆ ಆಡಳಿತ ಮತ್ತು ಆರ್ಥಿಕ ನಿರ್ವಹಣೆ ಬಗ್ಗೆಯೂ ಪಾಠ ಮಾಡಿದ್ದರೆ ಅವರಿಂದ ಇಂತಹ ಅಜ್ಞಾನದ ಮುತ್ತುಗಳು ಉದುರಿ ಬೀಳುತ್ತಿರಲಿಲ್ಲ. ತರಬೇತಿದಾರರ ಕೊರತೆಯಿದ್ದರೆ ನಾನೇ ಬಂದು ಪಾಠ ಮಾಡ್ತೇನೆ” ಎಂದು ಅವರು ಹೇಳಿದ್ದಾರೆ.

“2008-09 ರಿಂದ 2013-14 ರ ವರೆಗಿನ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212 ರಷ್ಟು ಹೆಚ್ಚಿತ್ತು. 2013-14 ರಿಂದ 2018-19 ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65 ರಷ್ಟು ಮಾತ್ರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

“ಹಿಂದಿನ ಅವಧಿಯ ಸಾಲವನ್ನು ಸೇರಿಸಿ ರಾಜ್ಯದ ಒಟ್ಟು ಸಾಲದ ಪ್ರಮಾಣ 2008-09 ರಿಂದ 2013-14 ರ ಅವಧಿಯಲ್ಲಿ ಶೇಕಡಾ 94.18 ರಷ್ಟು ಹೆಚ್ಚಿದ್ದರೆ, 2013-14 ರಿಂದ 2018-19 ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 78.19 ರಷ್ಟು ಮಾತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಪ್ರಸಕ್ತ ಸಾಲಿನ ಬಜೆಟ್ ಅಂದಾಜಿನ ಪ್ರಕಾರ ರಾಜ್ಯದ ಸಾಲ ರೂ.53,000 ಕೋಟಿ. ಕೊರೊನಾದಿಂದಾಗಿ ಆಗಿರುವ ಆದಾಯ ಖೋತಾ ತುಂಬಲು ಹೆಚ್ಚುವರಿ ರೂ.33,000 ಕೋಟಿ ಸಾಲದ ಜೊತೆ, ಜಿಎಸ್‌ಟಿ ಪರಿಹಾರ ಭರಿಸಲು ಮತ್ತೆ ರೂ.12,000 ಕೋಟಿ ಸಾಲ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಒಂದೇ ವರ್ಷದಲ್ಲಿ ಸಾಲದ ಮೊತ್ತ ದುಪ್ಪಟ್ಟು ಮಾಡಿರುವುದು ಬಿಜೆಪಿಯ ಸಾಧನೆ” ಎಂದು ಹೇಳಿದ್ದಾರೆ.

“ಸಾಲದ ಹೊರೆಯ ಸುಳ್ಳು ಆರೋಪ ಮಾಡುವುದಕ್ಕಿಂತ ಮೊದಲು ರಾಜ್ಯದ ಬಿಜೆಪಿ ನಾಯಕರು ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನೊಮ್ಮೆ ಓದಿಕೊಳ್ಳಬೇಕಿತ್ತು. ಅದರ ಪ್ರಕಾರ ನಮ್ಮ ಸಾಲ ರಾಜ್ಯದ ಆಂತರಿಕ ಉತ್ಪನ್ನದ 25% ರ ಮಿತಿಯಲ್ಲಿರಬೇಕಾಗುತ್ತದೆ. ನನ್ನ ಕೊನೆಯ ಬಜೆಟ್‌ನಲ್ಲಿ ರಾಜ್ಯದ ಸಾಲ ಶೇಕಡಾ 20.36 ರ ಮಿತಿಯೊಳಗೆ ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಅದು ಶೇಕಡಾ 33 ರ ಮಿತಿ ದಾಟಲಿದೆ” ಎಂದ ಭವಿಷ್ಯ ನುಡಿದಿದ್ದಾರೆ.

“ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ(GSDP) ಶೇಕಡಾ ಮೂರನ್ನು ಮೀರಬಾರದು ಎಂದು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯ ಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49 ರಷ್ಟಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಸಿದ್ದರಾಮಯ್ಯ

“ರಾಜ್ಯದ ಬಿಜೆಪಿ ಸರ್ಕಾರ ವಿತ್ತೀಯ ಕೊರತೆಯ ಮಿತಿಯನ್ನು 3% ಇಂದ 5% ಗೆ ಏರಿಕೆ ಮಾಡುವ ಅಪಾಯಕಾರಿ ನಿಲುವು ತೆಗೆದುಕೊಂಡಿದೆ. 5% ಗೆ ಏರಿಕೆಯಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ ಹೆಚ್ಚೆಂದರೆ 3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬಹುದಿತ್ತು. ಈ ಕಿವುಡು ಸರ್ಕಾರಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“2020-21 ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೊನಾ ಹಾವಳಿ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12 ಲಕ್ಷ ಕೋಟಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮರ್ಥ್ಯ ಕೂಡಾ ಕಡಿಮೆಯಾಗಲಿದೆ” ಎಂದು ಹೇಳಿದ್ದಾರೆ.

“ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ 5 ವರ್ಷಗಳ ಕಾಲ ಜಿಎಸ್‌ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. 2020-2021 ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ 30,000 ಕೋಟಿ ನೀಡಬೇಕಾಗುತ್ತದೆ ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“14 ನೇ ಹಣಕಾಸು ಆಯೋಗದಲ್ಲಿ 4.71% ಇದ್ದ ರಾಜ್ಯದ ಪಾಲನ್ನು 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ ರೂ.12 ಸಾವಿರ ಕೋಟಿ ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ ರೂ.5495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

“ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರ್ಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆದಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿ ಸಾಲ ಎತ್ತಲು ಹೊರಟರೂ ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಪರಿಹಾರ ಕೊಡಲು ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ, ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಜನರ ತೆರಿಗೆಯ ದುಡ್ಡಿನ ಜೊತೆ ಸಾಲದ ದುಡ್ಡು ಕೂಡಾ ಯಾರ ಜೇಬಿಗೆ ಹೋಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ತಿಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಆಡಳಿತದ ಹಿಂದಿನ ಅವಧಿಯಲ್ಲಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದ್ದು ಎಂದು ಮಾಧ್ಯಮಗಳು ತುಚ್ಚೀಕರಿಸುತ್ತಿತ್ತು. ನಮ್ಮ ಆಡಳಿತದ ಕಾಲದಲ್ಲಿ ಅತ್ಯಂತ ಸಮರ್ಥವಾಗಿ ಹಣಕಾಸನ್ನು ನಿರ್ವಹಿಸಿದ ರಾಜ್ಯ ಕರ್ನಾಟಕವೆಂದು ದೇಶ ಕೊಂಡಾಡುತ್ತಿತ್ತು. ಇಂತಹ ಕರ್ನಾಟಕವನ್ನು ಭಾರತೀಯ ಜನತಾ ಪಕ್ಷದ ಸರ್ಕಾರ ಮತ್ತೆ ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...