Homeಕರ್ನಾಟಕಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.

- Advertisement -
- Advertisement -

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಸತ್ಯ ಸಂಗತಿಯನ್ನು ಜನತೆಯ ಮುಂದಿಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ ಎಂದು ಬಿಜೆಪಿ ವಿರುದ್ದ ಹಲವಾರು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ.

ಬಿಜೆಪಿ ಮಾಡಿರುವ ಆರೋಪದ ಮೇಲೆ ಅಷ್ಟೊಂದು ವಿಶ್ವಾಸ ಇದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

“ಬಿಜೆಪಿ ತನ್ನ ನಾಯಕರಿಗೆ ದೇಶ, ಧರ್ಮ, ಸಮಾಜ ಒಡೆಯುವ ತರಬೇತಿಯನ್ನಷ್ಟೇ ನೀಡದೆ ಆಡಳಿತ ಮತ್ತು ಆರ್ಥಿಕ ನಿರ್ವಹಣೆ ಬಗ್ಗೆಯೂ ಪಾಠ ಮಾಡಿದ್ದರೆ ಅವರಿಂದ ಇಂತಹ ಅಜ್ಞಾನದ ಮುತ್ತುಗಳು ಉದುರಿ ಬೀಳುತ್ತಿರಲಿಲ್ಲ. ತರಬೇತಿದಾರರ ಕೊರತೆಯಿದ್ದರೆ ನಾನೇ ಬಂದು ಪಾಠ ಮಾಡ್ತೇನೆ” ಎಂದು ಅವರು ಹೇಳಿದ್ದಾರೆ.

“2008-09 ರಿಂದ 2013-14 ರ ವರೆಗಿನ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212 ರಷ್ಟು ಹೆಚ್ಚಿತ್ತು. 2013-14 ರಿಂದ 2018-19 ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65 ರಷ್ಟು ಮಾತ್ರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

“ಹಿಂದಿನ ಅವಧಿಯ ಸಾಲವನ್ನು ಸೇರಿಸಿ ರಾಜ್ಯದ ಒಟ್ಟು ಸಾಲದ ಪ್ರಮಾಣ 2008-09 ರಿಂದ 2013-14 ರ ಅವಧಿಯಲ್ಲಿ ಶೇಕಡಾ 94.18 ರಷ್ಟು ಹೆಚ್ಚಿದ್ದರೆ, 2013-14 ರಿಂದ 2018-19 ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 78.19 ರಷ್ಟು ಮಾತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಪ್ರಸಕ್ತ ಸಾಲಿನ ಬಜೆಟ್ ಅಂದಾಜಿನ ಪ್ರಕಾರ ರಾಜ್ಯದ ಸಾಲ ರೂ.53,000 ಕೋಟಿ. ಕೊರೊನಾದಿಂದಾಗಿ ಆಗಿರುವ ಆದಾಯ ಖೋತಾ ತುಂಬಲು ಹೆಚ್ಚುವರಿ ರೂ.33,000 ಕೋಟಿ ಸಾಲದ ಜೊತೆ, ಜಿಎಸ್‌ಟಿ ಪರಿಹಾರ ಭರಿಸಲು ಮತ್ತೆ ರೂ.12,000 ಕೋಟಿ ಸಾಲ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಒಂದೇ ವರ್ಷದಲ್ಲಿ ಸಾಲದ ಮೊತ್ತ ದುಪ್ಪಟ್ಟು ಮಾಡಿರುವುದು ಬಿಜೆಪಿಯ ಸಾಧನೆ” ಎಂದು ಹೇಳಿದ್ದಾರೆ.

“ಸಾಲದ ಹೊರೆಯ ಸುಳ್ಳು ಆರೋಪ ಮಾಡುವುದಕ್ಕಿಂತ ಮೊದಲು ರಾಜ್ಯದ ಬಿಜೆಪಿ ನಾಯಕರು ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನೊಮ್ಮೆ ಓದಿಕೊಳ್ಳಬೇಕಿತ್ತು. ಅದರ ಪ್ರಕಾರ ನಮ್ಮ ಸಾಲ ರಾಜ್ಯದ ಆಂತರಿಕ ಉತ್ಪನ್ನದ 25% ರ ಮಿತಿಯಲ್ಲಿರಬೇಕಾಗುತ್ತದೆ. ನನ್ನ ಕೊನೆಯ ಬಜೆಟ್‌ನಲ್ಲಿ ರಾಜ್ಯದ ಸಾಲ ಶೇಕಡಾ 20.36 ರ ಮಿತಿಯೊಳಗೆ ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಅದು ಶೇಕಡಾ 33 ರ ಮಿತಿ ದಾಟಲಿದೆ” ಎಂದ ಭವಿಷ್ಯ ನುಡಿದಿದ್ದಾರೆ.

“ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ(GSDP) ಶೇಕಡಾ ಮೂರನ್ನು ಮೀರಬಾರದು ಎಂದು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯ ಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49 ರಷ್ಟಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಸಿದ್ದರಾಮಯ್ಯ

“ರಾಜ್ಯದ ಬಿಜೆಪಿ ಸರ್ಕಾರ ವಿತ್ತೀಯ ಕೊರತೆಯ ಮಿತಿಯನ್ನು 3% ಇಂದ 5% ಗೆ ಏರಿಕೆ ಮಾಡುವ ಅಪಾಯಕಾರಿ ನಿಲುವು ತೆಗೆದುಕೊಂಡಿದೆ. 5% ಗೆ ಏರಿಕೆಯಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ ಹೆಚ್ಚೆಂದರೆ 3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬಹುದಿತ್ತು. ಈ ಕಿವುಡು ಸರ್ಕಾರಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“2020-21 ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೊನಾ ಹಾವಳಿ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12 ಲಕ್ಷ ಕೋಟಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮರ್ಥ್ಯ ಕೂಡಾ ಕಡಿಮೆಯಾಗಲಿದೆ” ಎಂದು ಹೇಳಿದ್ದಾರೆ.

“ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ 5 ವರ್ಷಗಳ ಕಾಲ ಜಿಎಸ್‌ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. 2020-2021 ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ 30,000 ಕೋಟಿ ನೀಡಬೇಕಾಗುತ್ತದೆ ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“14 ನೇ ಹಣಕಾಸು ಆಯೋಗದಲ್ಲಿ 4.71% ಇದ್ದ ರಾಜ್ಯದ ಪಾಲನ್ನು 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ ರೂ.12 ಸಾವಿರ ಕೋಟಿ ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ ರೂ.5495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

“ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರ್ಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆದಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿ ಸಾಲ ಎತ್ತಲು ಹೊರಟರೂ ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಪರಿಹಾರ ಕೊಡಲು ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ, ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಜನರ ತೆರಿಗೆಯ ದುಡ್ಡಿನ ಜೊತೆ ಸಾಲದ ದುಡ್ಡು ಕೂಡಾ ಯಾರ ಜೇಬಿಗೆ ಹೋಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ತಿಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಆಡಳಿತದ ಹಿಂದಿನ ಅವಧಿಯಲ್ಲಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದ್ದು ಎಂದು ಮಾಧ್ಯಮಗಳು ತುಚ್ಚೀಕರಿಸುತ್ತಿತ್ತು. ನಮ್ಮ ಆಡಳಿತದ ಕಾಲದಲ್ಲಿ ಅತ್ಯಂತ ಸಮರ್ಥವಾಗಿ ಹಣಕಾಸನ್ನು ನಿರ್ವಹಿಸಿದ ರಾಜ್ಯ ಕರ್ನಾಟಕವೆಂದು ದೇಶ ಕೊಂಡಾಡುತ್ತಿತ್ತು. ಇಂತಹ ಕರ್ನಾಟಕವನ್ನು ಭಾರತೀಯ ಜನತಾ ಪಕ್ಷದ ಸರ್ಕಾರ ಮತ್ತೆ ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...