Homeಮುಖಪುಟಶ್ರೀನಗರ: ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಶ್ರೀನಗರ: ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಜಮ್ಮು ಮತ್ತು ಕಾಶ್ಮೀರದ ಧ್ವಜವನ್ನು ಪುನಃಸ್ಥಾಪಿಸುವವರೆಗೆ ತ್ರಿವರ್ಣಧ್ವಜ ಹಿಡಿಯುವುದಿಲ್ಲ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದರು.

- Advertisement -
- Advertisement -

ಶ್ರೀನಗರದ ಲಾಲ್ ಚೌಕ್‌ನಲ್ಲಿರುವ ಘಂಟಾ ಘರ್‌ (ಗಡಿಯಾರ ಗೋಪುರ‌) ಮೇಲೆ ರಾಷ್ಟ್ರಧ್ವಜ ಹಾರಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕರ್ತರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಗಳನ್ನು ಕೂಗುತ್ತಾ, ನಗರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದರು. ಜೊತೆಗೆ ಶ್ರೀನಗರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕಚೇರಿ ಮುಂದೆಯೂ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸುವ ಪ್ರಯತ್ನ ಮಾಡಿದ್ದಾರೆ.

ಅಕ್ಟೋಬರ್ 13 ರಂದು ಬಂಧನದಿಂದ ಬಿಡುಗಡೆಯಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಜಮ್ಮು ಮತ್ತು ಕಾಶ್ಮೀರದ ಧ್ವಜವನ್ನು ಪುನಃಸ್ಥಾಪಿಸುವವರೆಗೆ ತ್ರಿವರ್ಣಧ್ವಜ ಹಿಡಿಯುವುದಿಲ್ಲ ಎಂದು ಹೇಳಿದರು. ಇದನ್ನು ವಿರೋಧಿಸಿದ್ದ ಬಿಜೆಪಿ, ದೇಶದ್ರೋಹದ ಹೇಳಿಕೆ ನೀಡಿರುವ ಮುಫ್ತಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿತ್ತು.

ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

370 ನೇ ವಿಧಿಯನ್ನು ಪುನಃ ಸ್ಥಾಪಿಸುವವರೆಗೆ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸುವವರೆಗೆ ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮುಫ್ತಿ ಘೋಷಿಸಿದ್ದಾರೆ. ಆರ್ಟಿಕಲ್ 370 ರ ಪುನಃಸ್ಥಾಪನೆಗಾಗಿ ಒಟ್ಟಾಗಿ ಹೋರಾಡಲು, ಪೀಪಲ್ಸ್ ಅಲಯನ್ಸ್ ಆಫ್ ಗುಪ್ಕರ್ ಡಿಕ್ಲರೇಷನ್ (PAGD) ಅಧ್ಯಕ್ಷರಾಗಿ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಆಯ್ಕೆ ಮಾಡಿದ ನಂತರ ಈ ಬೆಳವಣಿಗೆ ಕಂಡುಬಂದಿದೆ.

ಕಳೆದ ವಾರ ರಾಜ್ಯದ ಏಳು ಮುಖ್ಯ ರಾಜಕೀಯ ಪಕ್ಷಗಳು ಸೇರಿ PAGD ರಚಿಸಿ, 2019ರ ಆಗಸ್ಟ್ 5 ಕ್ಕಿಂತ  ಮೊದಲು ಜಮ್ಮು ಕಾಶ್ಮೀರ ಮತ್ತು ಲಡಾಖ್ ಜನರು ಹೊಂದಿದ್ದ ಎಲ್ಲಾ ಹಕ್ಕುಗಳನ್ನು ಹಿಂದಿರುಗಿಸುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿತ್ತು. ಜೊತೆಗೆ ಈ ಅಲಯನ್ಸ್ ಬಿಜೆಪಿ ವಿರೋಧಿ ಆದರೆ ರಾಷ್ಟ್ರ ವಿರೋಧಿ ಅಲ್ಲ ಎಂದು ಹೇಳಿತ್ತು.

ಮೂವರು ಬಿಜೆಪಿ ಕಾರ್ಯಕರ್ತರ ಗುಂಪು ಘಂಟಾ ಘರ್‌ ಮೇಲೆ ರಾಷ್ಟ್ರಧ್ವಜ ಹಾರಿಸಲು ಮುಂದಾಗಿತ್ತು. ಕೂಡಲೇ ಅವರನ್ನು ತಡೆದ ‍ಪೊಲೀಸರು ಬಂಧಿಸಿ ಕೋಟಿಬಾಗ್‌ ಠಾಣೆಗೆ ಕರೆದೊಯ್ದರು. ರಾಷ್ಟ್ರಧ್ವಜವನ್ನು  ತಮ್ಮ ಸುಪರ್ದಿಗೆ ತೆಗೆದುಕೊಂಡರು ಎಂದು ಹೇಳಲಾಗಿದೆ.

ಈ ನಡುವೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿಕೆ ಖಂಡಿಸಿ, ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮೂವರು ಮುಖಂಡರಾದ ಟಿ.ಎಸ್.ಬಜ್ವಾ, ವೇದ ಮಹಾಜನ್ ಮತ್ತು ಹುಸೇನ್-ಎ-ವಾಫಾ ಪಿಡಿಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...