Homeಮುಖಪುಟಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಅರ್ನಾಬ್ ಗೋಸ್ವಾಮಿ ವರದಿ ಮಾಡುವಾಗ ಜವಾಬ್ದಾರಿಯಿಂದ ವರ್ತಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ ಸೂಚಿಸಿದರು.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧದ ತನಿಖೆಗೆ ಜೂನ್ 30 ರಂದು ಬಾಂಬೆ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಮಹರಾಷ್ಟ್ರ ಸರ್ಕಾರ ನೀಡಿದ್ದ ಮೇಲ್ಮನವಿಯನ್ನು ಆಲಿಸುತ್ತಿದ್ದ ಸುಪ್ರೀಂಕೋರ್ಟ್, ”ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆಗಳನ್ನು ಕೇಳಬಾರದು ಎಂದು ಅರ್ಥವಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಪಾಲ್ಘರ್ ಗುಂಪುಹತ್ಯೆ ಮತ್ತು ಬಾಂದ್ರಾ ಬಸ್ ನಿಲ್ದಾಣದಲ್ಲಿ ವಲಸೆ ಕಾರ್ಮಿಕರು ಗುಂಪು ಸೇರಿದ್ದ ಘಟನೆಯನ್ನು ಕೋಮು ದ್ವೇಷ ಹರಡಲು ಪ್ರಚೋದಿಸಿದ ಆರೋಪದಲ್ಲಿ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎರಡು ಎಫ್ಐಆರ್ ಅನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ರಿಪಬ್ಲಿಕ್ ಟಿವಿ ಕಾರ್ಯಕ್ರಮಗಳನ್ನು ಪ್ರಶ್ನಿಸಿ ನ್ಯಾಯಾಲಯ ಹತ್ತಿದ ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ, ಅರ್ನಾಬ್ ವಿರುದ್ಧದ ಸಂಪೂರ್ಣ ತನಿಖೆಯನ್ನು ತಡೆಹಿಡಿಯುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆಂದು ಲೈವ್ ಲಾ ವರದಿ ಮಾಡಿದೆ.

“ತನಿಖೆ ಮತ್ತೇ ಪ್ರಾರಂಭವಾದರೆ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ ಅವರು, ”ಕೆಲವು ಜನರು ಕಾನೂನಿಗಿಂತ ಮೇಲಿದ್ದಾರೆ ಎಂದು ಸಂದೇಶವು ಹೋಗಬಾರದು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ, “ಯಾರೂ ಕಾನೂನಿನ ಮೇಲಿರದಿದ್ದರೂ, ಕೆಲವು ಜನರು ಗುರಿಯಾಗುತ್ತಾರೆ. ಈ ಸಮಯದಲ್ಲಿ ಅವರಿಗೆ ಹೆಚ್ಚಿನ ಮಟ್ಟದ ರಕ್ಷಣೆ ನೀಡುವ ಸಂಪ್ರದಾಯ ಇದೆ” ಎಂದು ಹೇಳಿದರು.

PC: Sujit Jaiswal/AFP

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಅರ್ನಾಬ್ ಗೋಸ್ವಾಮಿ ಅವರ ಸಲಹೆಗಾರ ಹರೀಶ್ ಸಾಲ್ವೆಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ಪತ್ರಿಕಾ ಸ್ವಾತಂತ್ರ್ಯವು ನಿರ್ಣಾಯಕ ಎಂದು ನ್ಯಾಯಾಲಯ ಒಪ್ಪಿಕೊಂಡರೂ, ಮಾಧ್ಯಮದ ಒಬ್ಬ ವ್ಯಕ್ತಿಯಾಗಿ ನಿಮ್ಮ ಕಕ್ಷಿದಾರರನ್ನು ಯಾವುದೇ ಪ್ರಶ್ನೆ ಕೇಳಬಾರದು ಎಂಬ ಮನವಿಯನ್ನು ಪ್ರಶಂಸಿಸುವುದಿಲ್ಲ” ಎಂದು ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯು ವರದಿ ಮಾಡುವಾಗ ಜವಾಬ್ದಾರಿಯಿಂದ ವರ್ತಿಸುವಂತೆ ನ್ಯಾಯಮೂರ್ತಿ ಸೂಚಿಸಿದರು. ನ್ಯಾಯಾಲಯದ ವಿಷಯವನ್ನು ಒಪ್ಪಿದ ಅರ್ನಾನ್ ಪರ ಹಾಜರಾದ ವಕೀಲ ಸಾಲ್ವೆ, ಅರ್ನಾಬ್‌ ವಿರುದ್ದದ ಎಫ್‌ಐಆರ್‌ಗಳು ನಿಜವಲ್ಲ, ಅದನ್ನು ಗಣನೆಗೆ ತೆಗೆದು ಕೊಳ್ಳಬಾರದು ಎಂದು ಹೇಳಿದರು.

ಗೋಸ್ವಾಮಿ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಮಹಾರಾಷ್ಟ್ರ ಸರ್ಕಾರವನ್ನು ಕೇಳಿದ್ದು, ವಿಚಾರಣೆಯನ್ನು ಎರಡು ವಾರಗಳ ನಂತರ ಮಾಡುವುದಾಗಿ ಪ್ರಕಟಿಸಿತು.

ಇದನ್ನೂ ಒದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...