Homeಕರ್ನಾಟಕಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಹೊರಗಿನಿಂದ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು ಸ್ತ್ರೀಶಕ್ತಿ ಸ್ವಸಹಾಯ ಸಂಘ ಮಹಿಳೆಯರಿಗೆ ರಾತ್ರಿ ವೇಳೆ ಹಣ ಹಂಚುತ್ತಿದ್ದ ವಿಡಿಯೋಗಳು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್‌‌ನಿಂದ ಆಕ್ರೋಶ ವ್ಯಕ್ತವಾಗಿದೆ.

ಹುಲಿಕುಂಟೆ ಹೋಬಳಿಯ ಜವಾಬ್ದಾರಿಯನ್ನು ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರಿಗೆ ವಹಿಸಲಾಗಿದ್ದು ಈ ಹೋಬಳಿಯಲ್ಲಿ ಬಿಜೆಪಿಯಿಂದ ಮತದಾರರಿಗೆ ಹಣದ ಆಮಿಷವೊಡ್ಡುವುದು ಹೆಚ್ಚಾಗಿದೆ ಎಂದು ಆರೋಪಿಸಲಾಗಿದೆ. ಉಗೇನಕಟ್ಟೆ ಗೇಟ್ ಬಳಿ ಅಕ್ಟೋಬರ್ 26 ರಂದು ರಾತ್ರಿ ವೇಳೆ ಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸನ ಮತ್ತು ಮಂಡ್ಯದಿಂದ ಬಂದವರು ರಾತ್ರಿ 10 ಗಂಟೆ ನಂತರವೂ ಗ್ರಾಮಗಳಲ್ಲಿ ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿದ್ದ ದೃಶ್ಯಗಳನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕೇಸರಿಶಾಲು ಹಾಕಿಕೊಂಡ ಮುಖಂಡರೊಬ್ಬರು ಮಹಿಳೆಯರನ್ನು ಸೇರಿಸಿ ಹಣ ಹಂಚುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಮಹಿಳೆಯರು ನನಗೆ ಕೊಟ್ಟಿಲ್ಲ ಎಂದು 200 ರೂಗಳನ್ನು ಪಡೆಯುವುದು ವಿಡಿಯೋಗಳಲ್ಲಿ ಕಂಡು ಬರುತ್ತದೆ. ಮುಖಂಡರೊಬ್ಬರು ಹಾಸನದ ಶಾಸಕ ಪ್ರೀತಂಗೌಡರು ಹಣ ಹಂಚುವಂತೆ ಹೇಳಿದ್ದಾರೆ. ಪ್ರತಿ ಬಾರಿಯೂ ಚುನಾವಣೆಯ ಸಮಯದಲ್ಲಿ ಮಹಿಳೆಯರನ್ನು ಮರೆಯುತ್ತಾರೆ. ಪುರುಷರಿಗೆ ಮಾತ್ರ ಹಣ ಕೊಡುತ್ತಾರೆ. ಮಹಿಳೆಯರನ್ನು ನಿರ್ಲಕ್ಷಿಸುತ್ತಾರೆ. ನಾವು ಹಾಗೆ ಮಾಡುವುದಿಲ್ಲ. ನಮಗೆ ಪ್ರೀತಂಗೌಡರು ಹೇಳಿದ್ದಾರೆ. ಅರಿಶಿನ ಕುಂಕುಮಕ್ಕಾಗಿ 200 ರೂ ಕೊಡಿ ಎಂದು. ಮತದಾನದ ಹಿಂದಿನ ದಿನದವರೆಗೂ ಪ್ರತಿ ದಿನ 200 ರೂ ಕೊಡುತ್ತೇವೆ. ಮತ ಯಾರಿಗೆ ಹಾಕಬೇಕು ಹೇಳಿ ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆಯರು ಜೆಡಿಎಸ್ ಎಂದು ಹೇಳುತ್ತಾರೆ. ನಂತರ ಆದ ತಪ್ಪನ್ನು ತಿದ್ದಿದಾಗ ಕಮಲಕ್ಕೆ ಹಾಕುತ್ತೇವೆ ಎನ್ನುತ್ತಾರೆ.

ಇಂತಹ ನಾಲ್ಕು ವಿಡಿಯೋಗಳು ವೈರಲ್ ಆಗಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಬಿಜೆಪಿಯವರು ಅಧಿಕೃತವಾಗಿ ಹಣ ಹಂಚುತ್ತಿದ್ದರೂ ಪೊಲೀಸರಾಗಲಿ ಮತ್ತು ಚುನಾವಣಾ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನ್ಯಾಯ ಸಮ್ಮತ ಚುನಾವಣೆ ಅಂದ್ರೆ ಇದೇನಾ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಿರಾದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ. ಮತದಾರರಿಗೆ ಆಮಿಷವೊಡ್ಡುತ್ತಿದೆ. ಚುನಾವಣಾ ಆಯೋಗ ಮೌನ ವಹಿಸಿದೆ ಎಂದು ಆರೋಪಿಸಿದ್ದರೆ, ಕಾಂಗ್ರೆಸ್ ಮುಖಂಡರು ಹಣ ಹಂಚಿಕೆ ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಮತದಾನಕ್ಕೆ ಆರು ದಿನ ಮಾತ್ರ ಬಾಕಿ ಇದೆ. ಚುನಾವಣೆಯಲ್ಲಿ ಆಕ್ರಮ ನಡೆದಿರುವ ಬಗ್ಗೆ ಸಾಕಷ್ಟು ಬಾರಿ ಆರೋಪಗಳು ಕೇಳಿಬರುತ್ತಿದ್ದರೂ ಇದುವರೆಗೆ ಒಂದೇ ಒಂದು ಪ್ರಕರಣವನ್ನು ದಾಖಲಿಸಿದ ಉದಾಹರಣೆ ಇಲ್ಲ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...