Homeಮುಖಪುಟತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ಚುನಾವಣೆಗಾಗಿ ಹಂಚುತ್ತಿದ್ದ 5.87 ಲಕ್ಷ ರೂ.ಗಳನ್ನು ನಾವು ವಶಪಡಿಸಿಕೊಂಡೆವು. ನಂತರ ಬಿಜೆಪಿ ಕಾರ್ಯಕರ್ತರು ಅದನ್ನು ಕಸಿದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಸಂಬಂಧಿ ಎಸ್.ಅಂಜನ್ ರಾವ್ ಮನೆಯಿಂದ ಪೊಲೀಸರು ವಶಪಡಿಸಿಕೊಂಡ ಸುಮಾರು 18.67 ಲಕ್ಷ ರೂ. ಹಣವನ್ನು ಬಿಜೆಪಿಯ ಕಾರ್ಯಕರ್ತರು ಪೊಲೀಸರಿಂದ ಕಸಿದುಕೊಂಡಿದ್ದರಿಂದ ಸಿದ್ದಿಪೇಟೆಯ ಉಪನ್ಯಾಸಕರ ಕಾಲೋನಿಯಲ್ಲಿ ಸೋಮವಾರ ಉದ್ವಿಗ್ನತೆ ಉಂಟಾಯಿತು.

ಈ ಘಟನೆ ನವಂಬರ್ 3 ರಂದು ನಡೆಯುವ ಉಪಚುನಾವಣೆಗೆ ಸಂಬಂಧಿಸಿದಂತೆ, ಮತದಾರರನ್ನು ಸೆಳೆಯಲು ಈ ಹಣವನ್ನು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಹಣವನ್ನು ವಶಪಡಿಸಿಕೊಂಡು ಹೊರಡುತ್ತಿರುವಾಗ ಅಲ್ಲಿಗೆ ತನ್ನ ಅನುಯಾಯಿಗಳೊಂದಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ ಕೋಲಾಹಲವನ್ನು ಸೃಷ್ಟಿಸಿದರು. ಇದರಿಂದ ಪೊಲೀಸರು ಮತ್ತು ಬಿಜೆಪಿ ನಾಯಕನ ಅನುಯಾಯಿಗಳ ನಡುವೆ ಜಗಳ ನಡೆದು, ಅನುಯಾಯಿಗಳು ಕಾನ್ಸ್ಟೇಬಲ್‌ನನ್ನು ಹಿಡಿದು ಅವರ ಕೈಯಲ್ಲಿದ್ದ ಹಣದ ಚೀಲವನ್ನು ಕಿತ್ತುಕೊಂಡನಂತರ, “ಮತದಾರರ ಮೇಲೆ ಪ್ರಭಾವ ಬೀರಲು ಹಣವನ್ನು ಬಳಸಿದ್ದಾರೆಂದು ಸುಳ್ಳು ಆರೋಪಗಳನ್ನು ಮಾಡಿ ಈ ಹಣವನ್ನು ಪೊಲೀಸರೇ ಅವರ ಮನೆಯಲ್ಲಿಟ್ಟಿದ್ದಾರೆ” ಎಂದು ಅವರು ಆರೋಪಿಸಿದರು.

ಮಾರನೆ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ಕುಮಾರ್ ರಘುನಂದನ್ ರಾವ್‌ಗೆ ಬೆಂಬಲ ನೀಡುವ ಸಲುವಾಗಿ ಸಿದ್ದಿಪೇಟೆಗೆ ಬಂದಾಗ ಅವರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಚಕಮಕಿಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಇದರ ನಂತರ ಸಿದ್ದಿಪೇಟೆಗೆ ಆಗಮಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, “ರಾಜ್ಯದ ಬಿಜೆಪಿ ಮುಖ್ಯಸ್ಥರ ಮೇಲೆ ಕ್ರೂರ ಹಲ್ಲೆ ಮಾಡಿ ಬಂಧಿಸಿರುವುದು ನ್ಯಾಯಸಮ್ಮತವಲ್ಲ. ಇದು ಪ್ರಜಾಪ್ರಭುತ್ವದ ನಾಚಿಕೆಗೇಡಿತನ ಕೆಲಸ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಇದರ ನಡುವೆ, ಸಿದ್ದಿಪೇಟೆ ಪೊಲೀಸ್ ಆಯುಕ್ತ ಜೋಯಲ್ ಡೇವಿಸ್, “ದುಬ್ಬಾಕ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣ ನೀಡಲಾಗುತ್ತಿದೆ ಎಂಬ ಸುಳಿವಿನ ಆಧಾರದ ಮೇಲೆ 3 ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಸಿದ್ದಿಪೇಟೆ ಪುರಸಭೆ ಅಧ್ಯಕ್ಷ ಕೆ.ರಾಜನರಸು, ರಘುನಂದನ್ ರಾವ್ ಅವರ ಮಾವ ಎಸ್.ರಾಮ್ ಗೋಪಾಲ್ ರಾವ್ ಮತ್ತು ಅವರ ಸಂಬಂಧಿಕರಾದ ಎಸ್ ಅಂಜನ್ ರಾವ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮತದಾರರಿಗೆ ಹಣ ಹಂಚುವ ಸಲುವಾಗಿ ರಘುನಂದನ್ ರಾವ್ ಅವರ ಸಂಬಂಧಿ ಜಿತೇಂದರ್ ರಾವ್ ತಮ್ಮ ಡ್ರೈವರ್ ಮೂಲಕ ಹಣವನ್ನು ಕಳುಹಿಸಿದ್ದು ಸಣ್ಣ ಪ್ರಮಾಣದಲ್ಲಿ ವಿತರಿಸುವಂತೆ ಹೇಳಿದ್ದರು. ನಾವು ಈ ಹಣವನ್ನು ವಶಪಡಿಸಿಕೊಂಡ ನಂತರ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ 200 ಸದಸ್ಯರೊಂದಿಗೆ ಬಂದು, 20-30 ಸದಸ್ಯರು ತಕ್ಷಣ ಒಳಗೆ ಹೋಗಿ 5.87 ಲಕ್ಷ ರೂ.ಗಳನ್ನು ಕಸಿದುಕೊಂಡರು. ಎಲ್ಲವೂ ದಾಖಲಾಗಿದೆ. ಅಪರಾಧಿಗಳನ್ನು ಗುರುತಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಗಳನ್ನು ದಾಖಲಿಸಲಾಗುವುದು” ಎಂದು ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕನ ಸಂಬಂಧಿಯಾದ ರಾಮಗೋಪಾಲ್ ರಾವ್ ಮಾತನಾಡಿ, “ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಂದ ಮೊಬೈಲ್‌ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಬೆಳವಣಿಗೆಯಲ್ಲಿ ಬಿಜೆಪಿ ನಾಯಕರಾದ ಜಿ.ವಿವೇಕ್ ಮತ್ತು ಜಿತೇಂದರ್ ರೆಡ್ಡಿ ಅವರನ್ನು ಬಂಧಿಸಿ ಮತ್ತೆ ಹೈದರಾಬಾದ್‌ಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...