Homeಮುಖಪುಟತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ಚುನಾವಣೆಗಾಗಿ ಹಂಚುತ್ತಿದ್ದ 5.87 ಲಕ್ಷ ರೂ.ಗಳನ್ನು ನಾವು ವಶಪಡಿಸಿಕೊಂಡೆವು. ನಂತರ ಬಿಜೆಪಿ ಕಾರ್ಯಕರ್ತರು ಅದನ್ನು ಕಸಿದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಸಂಬಂಧಿ ಎಸ್.ಅಂಜನ್ ರಾವ್ ಮನೆಯಿಂದ ಪೊಲೀಸರು ವಶಪಡಿಸಿಕೊಂಡ ಸುಮಾರು 18.67 ಲಕ್ಷ ರೂ. ಹಣವನ್ನು ಬಿಜೆಪಿಯ ಕಾರ್ಯಕರ್ತರು ಪೊಲೀಸರಿಂದ ಕಸಿದುಕೊಂಡಿದ್ದರಿಂದ ಸಿದ್ದಿಪೇಟೆಯ ಉಪನ್ಯಾಸಕರ ಕಾಲೋನಿಯಲ್ಲಿ ಸೋಮವಾರ ಉದ್ವಿಗ್ನತೆ ಉಂಟಾಯಿತು.

ಈ ಘಟನೆ ನವಂಬರ್ 3 ರಂದು ನಡೆಯುವ ಉಪಚುನಾವಣೆಗೆ ಸಂಬಂಧಿಸಿದಂತೆ, ಮತದಾರರನ್ನು ಸೆಳೆಯಲು ಈ ಹಣವನ್ನು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಹಣವನ್ನು ವಶಪಡಿಸಿಕೊಂಡು ಹೊರಡುತ್ತಿರುವಾಗ ಅಲ್ಲಿಗೆ ತನ್ನ ಅನುಯಾಯಿಗಳೊಂದಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ ಕೋಲಾಹಲವನ್ನು ಸೃಷ್ಟಿಸಿದರು. ಇದರಿಂದ ಪೊಲೀಸರು ಮತ್ತು ಬಿಜೆಪಿ ನಾಯಕನ ಅನುಯಾಯಿಗಳ ನಡುವೆ ಜಗಳ ನಡೆದು, ಅನುಯಾಯಿಗಳು ಕಾನ್ಸ್ಟೇಬಲ್‌ನನ್ನು ಹಿಡಿದು ಅವರ ಕೈಯಲ್ಲಿದ್ದ ಹಣದ ಚೀಲವನ್ನು ಕಿತ್ತುಕೊಂಡನಂತರ, “ಮತದಾರರ ಮೇಲೆ ಪ್ರಭಾವ ಬೀರಲು ಹಣವನ್ನು ಬಳಸಿದ್ದಾರೆಂದು ಸುಳ್ಳು ಆರೋಪಗಳನ್ನು ಮಾಡಿ ಈ ಹಣವನ್ನು ಪೊಲೀಸರೇ ಅವರ ಮನೆಯಲ್ಲಿಟ್ಟಿದ್ದಾರೆ” ಎಂದು ಅವರು ಆರೋಪಿಸಿದರು.

ಮಾರನೆ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ಕುಮಾರ್ ರಘುನಂದನ್ ರಾವ್‌ಗೆ ಬೆಂಬಲ ನೀಡುವ ಸಲುವಾಗಿ ಸಿದ್ದಿಪೇಟೆಗೆ ಬಂದಾಗ ಅವರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಚಕಮಕಿಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಇದರ ನಂತರ ಸಿದ್ದಿಪೇಟೆಗೆ ಆಗಮಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, “ರಾಜ್ಯದ ಬಿಜೆಪಿ ಮುಖ್ಯಸ್ಥರ ಮೇಲೆ ಕ್ರೂರ ಹಲ್ಲೆ ಮಾಡಿ ಬಂಧಿಸಿರುವುದು ನ್ಯಾಯಸಮ್ಮತವಲ್ಲ. ಇದು ಪ್ರಜಾಪ್ರಭುತ್ವದ ನಾಚಿಕೆಗೇಡಿತನ ಕೆಲಸ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಇದರ ನಡುವೆ, ಸಿದ್ದಿಪೇಟೆ ಪೊಲೀಸ್ ಆಯುಕ್ತ ಜೋಯಲ್ ಡೇವಿಸ್, “ದುಬ್ಬಾಕ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣ ನೀಡಲಾಗುತ್ತಿದೆ ಎಂಬ ಸುಳಿವಿನ ಆಧಾರದ ಮೇಲೆ 3 ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಸಿದ್ದಿಪೇಟೆ ಪುರಸಭೆ ಅಧ್ಯಕ್ಷ ಕೆ.ರಾಜನರಸು, ರಘುನಂದನ್ ರಾವ್ ಅವರ ಮಾವ ಎಸ್.ರಾಮ್ ಗೋಪಾಲ್ ರಾವ್ ಮತ್ತು ಅವರ ಸಂಬಂಧಿಕರಾದ ಎಸ್ ಅಂಜನ್ ರಾವ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮತದಾರರಿಗೆ ಹಣ ಹಂಚುವ ಸಲುವಾಗಿ ರಘುನಂದನ್ ರಾವ್ ಅವರ ಸಂಬಂಧಿ ಜಿತೇಂದರ್ ರಾವ್ ತಮ್ಮ ಡ್ರೈವರ್ ಮೂಲಕ ಹಣವನ್ನು ಕಳುಹಿಸಿದ್ದು ಸಣ್ಣ ಪ್ರಮಾಣದಲ್ಲಿ ವಿತರಿಸುವಂತೆ ಹೇಳಿದ್ದರು. ನಾವು ಈ ಹಣವನ್ನು ವಶಪಡಿಸಿಕೊಂಡ ನಂತರ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ 200 ಸದಸ್ಯರೊಂದಿಗೆ ಬಂದು, 20-30 ಸದಸ್ಯರು ತಕ್ಷಣ ಒಳಗೆ ಹೋಗಿ 5.87 ಲಕ್ಷ ರೂ.ಗಳನ್ನು ಕಸಿದುಕೊಂಡರು. ಎಲ್ಲವೂ ದಾಖಲಾಗಿದೆ. ಅಪರಾಧಿಗಳನ್ನು ಗುರುತಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಗಳನ್ನು ದಾಖಲಿಸಲಾಗುವುದು” ಎಂದು ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕನ ಸಂಬಂಧಿಯಾದ ರಾಮಗೋಪಾಲ್ ರಾವ್ ಮಾತನಾಡಿ, “ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಂದ ಮೊಬೈಲ್‌ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಬೆಳವಣಿಗೆಯಲ್ಲಿ ಬಿಜೆಪಿ ನಾಯಕರಾದ ಜಿ.ವಿವೇಕ್ ಮತ್ತು ಜಿತೇಂದರ್ ರೆಡ್ಡಿ ಅವರನ್ನು ಬಂಧಿಸಿ ಮತ್ತೆ ಹೈದರಾಬಾದ್‌ಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...