Homeಮುಖಪುಟಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ...

ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೋರಾಟಗಾರ ಕನ್ಹಯ್ಯ ಕುಮಾರ್‌ ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಹಾರದ ವಿಧಾನಸಭಾ ಚುನಾವಣೆಗೆ ನಾಳೆ ಮೊದಲ ಹಂತದ ಮತದಾನ ಆರಂಭವಾಗಲಿದೆ. ಚುನಾವಣೆ ಇಷ್ಟು ಸಮೀಪವಿರುವಾಗಲೇ ಬಿಹಾರದಲ್ಲಿ ದುರಂತಗಳು ಶುರುವಾಗಿವೆ. ಮುಂಗೆರ್ ಪಟ್ಟಣದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ಮೇಳೆ ಪೊಲೀಸರು ಮತ್ತು ಜನಸಮೂಹದ ನಡುವೆ ಗುಂಪು ಘರ್ಷಣೆ ಉಂಟಾಗಿದೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಗಾ ವಿಗ್ರಹಗಳ ವಿಸರ್ಜನೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಜನ ಮತ್ತು ಕೊತ್ವಾಲಿ ಪೊಲೀಸ್ ಠಾಣಾ ಸಿಬ್ಬಂದಿ ನಡುವೆ ವಾಗ್ವಾದ ನಡೆದು, ನಂತರ ಹಿಂಸಾಚಾರ ಆರಂಭವಾಗಿದೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘರ್ಷಣೆ ತಡೆಯಲು ಮೊದಲು ಪೊಲೀಸರು ಅಶ್ರುವಾಯು ಬಳಸಿದರು. ಆದರೆ ಜನಸಮೂಹವನ್ನು ನಿಯಂತ್ರಣಕ್ಕೆ ತರುವಲ್ಲಿ ಅವು ವಿಫಲವಾದ ಪರಿಣಾಮ ಪೊಲೀಸರು ಗುಂಡು ಹಾರಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

“ಜನಸಮೂಹ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸಿದ್ದು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು. ಘಟನೆಯಲ್ಲಿ 20 ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ” ಎಂದು ಮುಂಗೆರ್ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೇಳಿದ್ದಾರೆ.

“ಈ ಬಾರಿ ಮುಂಗೆರ್‌ನಲ್ಲಿ 53 ಕ್ಕೂ ಹೆಚ್ಚು ದುರ್ಗಾ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ, ಅದರಲ್ಲಿ 15 ವಿಗ್ರಹಗಳನ್ನು ದೀನ್‌ದಯಾಳ್ ಚೌಕ್‌ನಲ್ಲಿ ಗಂಗಾ ನದಿಯಲ್ಲಿ ಮುಳುಗಿಸಲು ಸಂಭ್ರಮದಿಂದ ತೆಗೆದುಕೊಂಡು ಹೋಗಲಾಗುತ್ತಿತ್ತು” ಎಂದು ದುರ್ಗಾ ಐಡೆಲ್ ಇಮ್ಮರ್ಶನ್ ಸಮಿತಿಯ ಸದಸ್ಯ ಪ್ರಕಾಶ್ ಭಗತ್ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ, ವಿಜಯದಶಮಿ ಹಬ್ಬದ ಮೂರು ದಿನಗಳ ನಂತರ ವಿಗ್ರಹಗಳನ್ನು ವಿಸರ್ಜಿಸಲಾಗುತ್ತದೆ. ಆದರೆ, ಈ ಬಾರಿ ಬುಧವಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇರುವ ಕಾರಣ,  ಮಂಗಳವಾರ ಬೆಳಿಗ್ಗೆ 5 ಗಂಟೆಯೊಳಗೆ ದುರ್ಗಾ ವಿಸರ್ಜನೆಗೆ ಅಧಿಕಾರಿಗಳು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದುರಂತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ಏಳು ಜನರಿಗೆ ಬುಲೆಟ್ ತಾಗಿ ಗಾಯಗಳಾಗಿದ್ದು, ಅವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಭಾಗಲ್‌ಪುರಕ್ಕೆ ಕರೆದೊಯ್ಯಲಾಗಿದೆ” ಎಂದು ಮುಂಗೆರ್ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ. ನಿರಂಜನ್ ಹೇಳಿದ್ದಾರೆ. ಮೃತ ಅನುರಾಗ್ ಕುಮಾರ್ ತಲೆಗೆ ಗುಂಡು ತಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಸಾಧನಾ ಕುಮಾರ್ ಹೇಳಿದ್ದಾರೆ.

ಘರ್ಷಣೆಯಲ್ಲಿ ಸಂಗರ್‌ಪುರ, ಕೊತ್ವಾಲಿ, ಕಾಸಿಮ್ ಬಜಾರ್, ಬಸುದೇಪುರ ಪೊಲೀಸ್ ಠಾಣೆಗಳ ಎಸ್‌ಎಚ್‌ಒಗಳು ಸೇರಿದಂತೆ ಕನಿಷ್ಠ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಘಟನೆ ನಂತರ ಜಿಲ್ಲೆಯ ಬಹುತೇಕ ಪೊಲೀಸ್ ಪಡೆಗಳನ್ನು ಕೊತ್ವಾಲಿ ಕಡೆಗೆ ಕಳುಹಿಸಲಾಗಿದೆ. ನಂತರ ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ಘರ್ಷಣಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ಬಿಗಿ ಭದ್ರತೆಯ ನಡುವೆಯೂ ಮುಂಗೆರ್ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಪರಿಸ್ಥಿತಿ ಉದ್ವಿಗ್ನವಾಗಿದೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಹೋರಾಟಗಾರ ಕನ್ಹಯ್ಯ ಕುಮಾರ್‌ ಟ್ವೀಟ್ ಮಾಡಿದ್ದಾರೆ.

“ನಿನ್ನೆ ರಾತ್ರಿ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರು ಅನಾಗರಿಕ ಲಾಠಿ ಚಾರ್ಜ್ ನಡೆಸಿ, ನಂತರ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಜನರು ಹೇಳುತ್ತಾರೆ. ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...