Homeಮುಖಪುಟಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು.- ಮೃತಳ ತಂದೆ

- Advertisement -
- Advertisement -

ಹರಿಯಾಣ ರಾಜ್ಯದ ಫರೀದಾಬಾದ್​ನಲ್ಲಿ 21 ವರ್ಷದ ಯುವತಿಯನ್ನು ತನ್ನ ಕಾಲೇಜಿನ ಹೊರಗಡೆ ಹಾಡಹಗಲೇ ಗುಂಡಿಟ್ಟು ಕೊಲ್ಲಲಾಗಿದೆ. ದೆಹಲಿಯಿಂದ ಕೇವಲ 30 ಕಿ.ಮೀ ದೂರದಲ್ಲಿರುವ ಬೀದಿಯಲ್ಲಿ ನಡೆದಿರುವ ಘಟನೆಯ ಭಯಾನಕ ವೀಡಿಯೊದಲ್ಲಿ ಜನರಲ್ಲಿ ಆತಂಕ ಉಂಟುಮಡಿದೆ.

ಸೋಮವಾರ(ಅ.26) ಮಧ್ಯಾಹ್ನ 3.40 ರ ಸುಮಾರಿಗೆ ಫರೀದಾಬಾದ್‌ನ ಬಲ್ಲಾಬ್‌ಗಢದ ಕಾಲೇಜೊಂದರ ಹೊರಗೆ ಈ ಘಟನೆ ನಡೆದಿದ್ದು, ನಿಖಿತಾ ತೋಮರ್ ಎಂಬ ಯುವತಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರ ಬರುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಕೃತ್ಯ ನಡೆಸಿದ ಆರೋಪಿ ತೌಸೀಫ್ ಎಂಬುವವ​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತೌಸೀಫ್ ಮತ್ತು ಆತನ ಸ್ನೇಹಿತ ರೆಹಾನ್, ನಿಖಿತಾರನ್ನು ಅಪಹರಿಸಲು ಆಕೆ ಕಾಲೇಜಿನಿಂದ ಹೊರಬರುವುದನ್ನೇ ಕಾಯುತ್ತಾ ಕಾರಿನಲ್ಲಿ ಕುಳಿತ್ತಿದ್ದರು. ತೌಸೀಫ್ ಮತ್ತು ನಿಖಿತಾ ಒಬ್ಬರಿಗೊಬ್ಬರು ಪರಿಚಯವಿದ್ದರು ಜೊತೆಗೆ ಆರೋಪಿ ತೌಸೀಫ್ ಈ ಹಿಂದೆ ಕೂಡ 2018 ರಲ್ಲಿ ಆಕೆಯನ್ನು ಅಪಹರಿಸಿದ್ದರು ಎಂದು ಫರೀದಾಬಾದ್ ಪೊಲೀಸ್ ಅಧಿಕಾರಿ ಒ.ಪಿ.ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಯುವತಿಯನ್ನು ಅಪಹರಿಸಲು ಯತ್ನಿಸುವ ದೃಶ್ಯ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಂದೂಕು ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಾಣಿಸುತ್ತದೆ. ಗುಂಡಿನ ದಾಳಿಗೆ ಒಳಗಾಗಿದ್ದ ನಿಖಿತಾರನ್ನು ಆಸ್ಪತ್ರೆಗೆ ಕೊಂಡೊಯ್ಯಲಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ನಿಖಿತಾ ತಂದೆ 2018 ರಲ್ಲಿ ಆತನ ವಿರುದ್ಧ ದೂರು ನೀಡಿದ್ದರೂ ಅದನ್ನು ಹಿಂತೆಗೆದುಕೊಂಡಿದ್ದರು. ಸದ್ಯ ಆರೋಪಿಗಳಾದ ತೌಸೀಫ್‌ ಮತ್ತು ರೆಹಾನ್ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು. ಆದರೆ ಈಗ ಅವರು ನನ್ನ ಮಗಳನ್ನು ಕೊಂದಿದ್ದಾರೆ” ಎಂದು ತಂದೆ ಎನ್‌ಡಿಟಿವಿಗೆ ತಿಳಿಸಿದ್ದಾರೆ. “ನನ್ನ ಮಗಳಿಗೆ ನ್ಯಾಯ ಬೇಕು. ಆಕೆಯನ್ನು ಕೊಂದ ರೀತಿಯೇ ಅವರಿಗು ಶಿಕ್ಷೆಯಾಗಬೇಕು ಎಂದು ನಿಖಿತಾ ಅವರ ತಾಯಿ ಆಕ್ರೋಶ ಹೊರಹಾಕಿದ್ದಾರೆ.

ಇದರ ಜೊತೆಗೆ ಯುವತಿಯ ಕುಟುಂಬ ಆಕೆಯ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದೆ. ಘಟನೆ ಸಂಬಂಧ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸುವಲ್ಲಿ ಸಫಲರಾಗಿದ್ದಾರೆ.

ಇಂಡಿಯಾ ಟುಡೆ ಜೊತೆ ಮಾತನಾಡಿರುವ ಸಂತ್ರಸ್ತೆಯ ಸಹೋದರಿ, “ಆರೋಪಿ 2018 ರಲ್ಲಿ ನಮ್ಮ ಸಹೋದರಿಯನ್ನು ಅಪಹರಿಸಲು ಯತ್ನಿಸಿದಾಗ, ಪೊಲೀಸರು ಏನನ್ನೂ ಮಾಡಲಿಲ್ಲ ಮತ್ತು ಬದಲಿಗೆ ನಮಗೆ ರಾಜಿ ಮಾಡಿಕೊಳ್ಳಲು  ಹೇಳಿದರು” ಎಂದು ಆರೋಪಿಸಿದ್ದಾರೆ.

ಜೊತೆಗೆ “ಆರೋಪಿ ತೌಸೀಫ್ ನಿಖಿತಾರನ್ನು ಮತಾಂತರಗೊಳಿಸಲು ಮತ್ತು ಮದುವೆಯಾಗಲು ಕೇಳುತ್ತಿದ್ದನು. ನಮ್ಮ ಸಹೋದರಿ ಒಪ್ಪಿರಲಿಲ್ಲ” ಎಂದು ಸಂತ್ರಸ್ತೆಯ ಸಹೋದರಿ ಆರೋಪಿಸಿದ್ದಾಳೆ.

ಇನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಿಂದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಗಮನಿಸಿದ್ದು, ಇತರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದೆ.


ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...