Homeಮುಖಪುಟಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ಹರಿಯಾಣ: ಹಾಡಹಗಲೇ ಯುವತಿಯನ್ನು ಗುಂಡಿಟ್ಟು ಕೊಂದ ದುರ್ಷ್ಕಮಿ

ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು.- ಮೃತಳ ತಂದೆ

- Advertisement -
- Advertisement -

ಹರಿಯಾಣ ರಾಜ್ಯದ ಫರೀದಾಬಾದ್​ನಲ್ಲಿ 21 ವರ್ಷದ ಯುವತಿಯನ್ನು ತನ್ನ ಕಾಲೇಜಿನ ಹೊರಗಡೆ ಹಾಡಹಗಲೇ ಗುಂಡಿಟ್ಟು ಕೊಲ್ಲಲಾಗಿದೆ. ದೆಹಲಿಯಿಂದ ಕೇವಲ 30 ಕಿ.ಮೀ ದೂರದಲ್ಲಿರುವ ಬೀದಿಯಲ್ಲಿ ನಡೆದಿರುವ ಘಟನೆಯ ಭಯಾನಕ ವೀಡಿಯೊದಲ್ಲಿ ಜನರಲ್ಲಿ ಆತಂಕ ಉಂಟುಮಡಿದೆ.

ಸೋಮವಾರ(ಅ.26) ಮಧ್ಯಾಹ್ನ 3.40 ರ ಸುಮಾರಿಗೆ ಫರೀದಾಬಾದ್‌ನ ಬಲ್ಲಾಬ್‌ಗಢದ ಕಾಲೇಜೊಂದರ ಹೊರಗೆ ಈ ಘಟನೆ ನಡೆದಿದ್ದು, ನಿಖಿತಾ ತೋಮರ್ ಎಂಬ ಯುವತಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರ ಬರುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಕೃತ್ಯ ನಡೆಸಿದ ಆರೋಪಿ ತೌಸೀಫ್ ಎಂಬುವವ​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತೌಸೀಫ್ ಮತ್ತು ಆತನ ಸ್ನೇಹಿತ ರೆಹಾನ್, ನಿಖಿತಾರನ್ನು ಅಪಹರಿಸಲು ಆಕೆ ಕಾಲೇಜಿನಿಂದ ಹೊರಬರುವುದನ್ನೇ ಕಾಯುತ್ತಾ ಕಾರಿನಲ್ಲಿ ಕುಳಿತ್ತಿದ್ದರು. ತೌಸೀಫ್ ಮತ್ತು ನಿಖಿತಾ ಒಬ್ಬರಿಗೊಬ್ಬರು ಪರಿಚಯವಿದ್ದರು ಜೊತೆಗೆ ಆರೋಪಿ ತೌಸೀಫ್ ಈ ಹಿಂದೆ ಕೂಡ 2018 ರಲ್ಲಿ ಆಕೆಯನ್ನು ಅಪಹರಿಸಿದ್ದರು ಎಂದು ಫರೀದಾಬಾದ್ ಪೊಲೀಸ್ ಅಧಿಕಾರಿ ಒ.ಪಿ.ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಯುವತಿಯನ್ನು ಅಪಹರಿಸಲು ಯತ್ನಿಸುವ ದೃಶ್ಯ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಂದೂಕು ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಾಣಿಸುತ್ತದೆ. ಗುಂಡಿನ ದಾಳಿಗೆ ಒಳಗಾಗಿದ್ದ ನಿಖಿತಾರನ್ನು ಆಸ್ಪತ್ರೆಗೆ ಕೊಂಡೊಯ್ಯಲಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ನಿಖಿತಾ ತಂದೆ 2018 ರಲ್ಲಿ ಆತನ ವಿರುದ್ಧ ದೂರು ನೀಡಿದ್ದರೂ ಅದನ್ನು ಹಿಂತೆಗೆದುಕೊಂಡಿದ್ದರು. ಸದ್ಯ ಆರೋಪಿಗಳಾದ ತೌಸೀಫ್‌ ಮತ್ತು ರೆಹಾನ್ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೌಸೀಫ್‌ ನನ್ನ ಮಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ನಾವು 2018 ರಲ್ಲಿ ದೂರು ನೀಡಿದ್ದೆವು ಮತ್ತು ನಮ್ಮ ಮಗಳ ಮರ್ಯಾದೆಗೆ ಅಂಜಿ ನಾವು ದೂರನ್ನು ಹಿಂತೆಗೆದುಕೊಂಡಿದ್ದೇವು. ಆದರೆ ಈಗ ಅವರು ನನ್ನ ಮಗಳನ್ನು ಕೊಂದಿದ್ದಾರೆ” ಎಂದು ತಂದೆ ಎನ್‌ಡಿಟಿವಿಗೆ ತಿಳಿಸಿದ್ದಾರೆ. “ನನ್ನ ಮಗಳಿಗೆ ನ್ಯಾಯ ಬೇಕು. ಆಕೆಯನ್ನು ಕೊಂದ ರೀತಿಯೇ ಅವರಿಗು ಶಿಕ್ಷೆಯಾಗಬೇಕು ಎಂದು ನಿಖಿತಾ ಅವರ ತಾಯಿ ಆಕ್ರೋಶ ಹೊರಹಾಕಿದ್ದಾರೆ.

ಇದರ ಜೊತೆಗೆ ಯುವತಿಯ ಕುಟುಂಬ ಆಕೆಯ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದೆ. ಘಟನೆ ಸಂಬಂಧ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸುವಲ್ಲಿ ಸಫಲರಾಗಿದ್ದಾರೆ.

ಇಂಡಿಯಾ ಟುಡೆ ಜೊತೆ ಮಾತನಾಡಿರುವ ಸಂತ್ರಸ್ತೆಯ ಸಹೋದರಿ, “ಆರೋಪಿ 2018 ರಲ್ಲಿ ನಮ್ಮ ಸಹೋದರಿಯನ್ನು ಅಪಹರಿಸಲು ಯತ್ನಿಸಿದಾಗ, ಪೊಲೀಸರು ಏನನ್ನೂ ಮಾಡಲಿಲ್ಲ ಮತ್ತು ಬದಲಿಗೆ ನಮಗೆ ರಾಜಿ ಮಾಡಿಕೊಳ್ಳಲು  ಹೇಳಿದರು” ಎಂದು ಆರೋಪಿಸಿದ್ದಾರೆ.

ಜೊತೆಗೆ “ಆರೋಪಿ ತೌಸೀಫ್ ನಿಖಿತಾರನ್ನು ಮತಾಂತರಗೊಳಿಸಲು ಮತ್ತು ಮದುವೆಯಾಗಲು ಕೇಳುತ್ತಿದ್ದನು. ನಮ್ಮ ಸಹೋದರಿ ಒಪ್ಪಿರಲಿಲ್ಲ” ಎಂದು ಸಂತ್ರಸ್ತೆಯ ಸಹೋದರಿ ಆರೋಪಿಸಿದ್ದಾಳೆ.

ಇನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋದಿಂದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಗಮನಿಸಿದ್ದು, ಇತರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದೆ.


ಇದನ್ನೂ ಓದಿ:  ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...