Homeಮುಖಪುಟಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಕಮಲಾ ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು.

- Advertisement -
- Advertisement -

ಅಮೆರಿಕ ಚುನಾವಣೆ ನವೆಂಬರ್‌ 3ರಂದು ನಡೆಯಲಿದೆ. ಅಮೆರಿಕದಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿ ಸಾಗಿದೆ. ಆದರೆ ಭಾರತದ ಇಲ್ಲೊಂದು ಹಳ್ಳಿಯಲ್ಲೂ ಅಮೆರಿಕದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ದೊಡ್ಡ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಹೌದು, ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಕ್ಕೆ ಭೇಟಿ ನೀಡುವವರನ್ನು ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಹ್ಯಾರಿಸ್ ಅವರ ಬ್ಯಾನರ್‌ಗಳು ಸ್ವಾಗತಿಸಲಿವೆ. ನವೆಂಬರ್‌ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಹ್ಯಾರಿಸ್ ಗೆಲುವು ಸಾಧಿಸಲಿ ಎಂದು ಅಲ್ಲಿನ ಜನತೆ ಹಾರೈಸಿದ್ದಾರೆ.

ಚೆನ್ನೈ ನಗರದಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ಈ ಗ್ರಾಮ ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಹತ್ತಾರು ಬ್ಯಾನರ್‌ಗಳ ಪೈಕಿ “ತುಲಸೇಂದ್ರಪುರಂನಿಂದ ಅಮೆರಿಕಕ್ಕೆ” ಎಂಬ ಘೋಷಣೆ ಕೂಡ ಒಂದು ಬ್ಯಾನರ್‌ನಲ್ಲಿ ಕಾಣಿಸಿಕೊಂಡಿದೆ. “ನಾವು, ತುಲಸೇಂದ್ರಪುರಂ ಗ್ರಾಮಸ್ಥರು, ಅಮೆರಿಕದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಚುನಾವಣಾ ಯಶಸ್ಸನ್ನು ಬಯಸುತ್ತೇವೆ. ಏಕೆಂದರೆ ಅವರ ಪೂರ್ವಜರು ತುಲಸೇಂದ್ರಪುರಂ ಮೂಲದವರು” ಎಂದು ಬರೆಯಲಾಗಿದೆ.


ಇದನ್ನೂ ಓದಿ: ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!


ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.

ಕಮಲಾ ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗೋಪಾಲನ್ ಅವರ ಮನೆ ಈಗ ಗ್ರಾಮದಲ್ಲಿ ಅಸ್ತಿತ್ವದಲ್ಲಿಲ್ಲ. ಮನೆ ಇದ್ದ ಸ್ಥಳ ಪಾಳು ಬಿದ್ದಿದೆ.

ಗ್ರಾಮದ 200 ಕ್ಕೂ ಹೆಚ್ಚು ಕೃಷಿ ಕುಟುಂಬಗಳ ಮೇಲ್ವಿಚಾರಣೆಯನ್ನು ನಿರ್ವಹಿಸುವ ತುಲಸೇಂದ್ರಪುರಂ ಗ್ರಾಮ ಸಮಿತಿಯ ಮುಖ್ಯಸ್ಥ ಎಂ.ಗುರುನಾಥನ್ ಅವರ ನಿರ್ದೇಶನದ ಮೇರೆಗೆ ಈ ಬ್ಯಾನರ್‌ಗಳನ್ನು ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಚುನಾವಣಾ ದಿನದಂದು ಸ್ಥಳೀಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಸಲು ಯೋಜಿಸುತ್ತಿರುವುದಾಗಿಯೂ ಗುರುನಾಥನ್  ಹೇಳುತ್ತಾರೆ. “ಅವರು ಗೆಲ್ಲುತ್ತಾರೆ ಎಂದು ನಮಗೆ ವಿಶ್ವಾಸವಿದೆ. “ಆಕೆಯ ಕಾರಣದಿಂದಾಗಿ ನಮ್ಮ ಗ್ರಾಮವು ಜಾಗತಿಕ ಖ್ಯಾತಿಯನ್ನು ಪಡೆದಿದೆ. ಅವರು ನಮ್ಮ ಹೆಮ್ಮೆ” ಎಂದು ಸಂತಸ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಕಮಲಾ ಹ್ಯಾರಿಸ್ ಕಮ್ಯುನಿಸ್ಟ್‌’ – ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...