Homeಮುಖಪುಟಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಕಮಲಾ ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು.

- Advertisement -
- Advertisement -

ಅಮೆರಿಕ ಚುನಾವಣೆ ನವೆಂಬರ್‌ 3ರಂದು ನಡೆಯಲಿದೆ. ಅಮೆರಿಕದಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿ ಸಾಗಿದೆ. ಆದರೆ ಭಾರತದ ಇಲ್ಲೊಂದು ಹಳ್ಳಿಯಲ್ಲೂ ಅಮೆರಿಕದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ದೊಡ್ಡ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಹೌದು, ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಕ್ಕೆ ಭೇಟಿ ನೀಡುವವರನ್ನು ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಹ್ಯಾರಿಸ್ ಅವರ ಬ್ಯಾನರ್‌ಗಳು ಸ್ವಾಗತಿಸಲಿವೆ. ನವೆಂಬರ್‌ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಹ್ಯಾರಿಸ್ ಗೆಲುವು ಸಾಧಿಸಲಿ ಎಂದು ಅಲ್ಲಿನ ಜನತೆ ಹಾರೈಸಿದ್ದಾರೆ.

ಚೆನ್ನೈ ನಗರದಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ಈ ಗ್ರಾಮ ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಹತ್ತಾರು ಬ್ಯಾನರ್‌ಗಳ ಪೈಕಿ “ತುಲಸೇಂದ್ರಪುರಂನಿಂದ ಅಮೆರಿಕಕ್ಕೆ” ಎಂಬ ಘೋಷಣೆ ಕೂಡ ಒಂದು ಬ್ಯಾನರ್‌ನಲ್ಲಿ ಕಾಣಿಸಿಕೊಂಡಿದೆ. “ನಾವು, ತುಲಸೇಂದ್ರಪುರಂ ಗ್ರಾಮಸ್ಥರು, ಅಮೆರಿಕದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಚುನಾವಣಾ ಯಶಸ್ಸನ್ನು ಬಯಸುತ್ತೇವೆ. ಏಕೆಂದರೆ ಅವರ ಪೂರ್ವಜರು ತುಲಸೇಂದ್ರಪುರಂ ಮೂಲದವರು” ಎಂದು ಬರೆಯಲಾಗಿದೆ.


ಇದನ್ನೂ ಓದಿ: ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!


ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.

ಕಮಲಾ ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗೋಪಾಲನ್ ಅವರ ಮನೆ ಈಗ ಗ್ರಾಮದಲ್ಲಿ ಅಸ್ತಿತ್ವದಲ್ಲಿಲ್ಲ. ಮನೆ ಇದ್ದ ಸ್ಥಳ ಪಾಳು ಬಿದ್ದಿದೆ.

ಗ್ರಾಮದ 200 ಕ್ಕೂ ಹೆಚ್ಚು ಕೃಷಿ ಕುಟುಂಬಗಳ ಮೇಲ್ವಿಚಾರಣೆಯನ್ನು ನಿರ್ವಹಿಸುವ ತುಲಸೇಂದ್ರಪುರಂ ಗ್ರಾಮ ಸಮಿತಿಯ ಮುಖ್ಯಸ್ಥ ಎಂ.ಗುರುನಾಥನ್ ಅವರ ನಿರ್ದೇಶನದ ಮೇರೆಗೆ ಈ ಬ್ಯಾನರ್‌ಗಳನ್ನು ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಚುನಾವಣಾ ದಿನದಂದು ಸ್ಥಳೀಯ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಸಲು ಯೋಜಿಸುತ್ತಿರುವುದಾಗಿಯೂ ಗುರುನಾಥನ್  ಹೇಳುತ್ತಾರೆ. “ಅವರು ಗೆಲ್ಲುತ್ತಾರೆ ಎಂದು ನಮಗೆ ವಿಶ್ವಾಸವಿದೆ. “ಆಕೆಯ ಕಾರಣದಿಂದಾಗಿ ನಮ್ಮ ಗ್ರಾಮವು ಜಾಗತಿಕ ಖ್ಯಾತಿಯನ್ನು ಪಡೆದಿದೆ. ಅವರು ನಮ್ಮ ಹೆಮ್ಮೆ” ಎಂದು ಸಂತಸ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಕಮಲಾ ಹ್ಯಾರಿಸ್ ಕಮ್ಯುನಿಸ್ಟ್‌’ – ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...