Homeಎಕಾನಮಿ3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

ಜೀವನೋಪಾಯಕ್ಕಿಂತ ಜೀವ ಮುಖ್ಯ ಎಂದು ಮನಗಂಡ ಸರ್ಕಾರವು ಮಾರ್ಚ್ 25 ರಿಂದ ಸರ್ಕಾರವು ಕಠಿಣವಾದ ಲಾಕ್‌ಡೌನ್ ವಿಧಿಸಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಆರ್ಥಿಕತೆಯಲ್ಲಿ ಪುನಶ್ಚೇತನದ ಲಕ್ಷಣಗಳು ಕಂಡುಬರುತ್ತಿವೆ ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಿಡಿಪಿ ಬೆಳವಣಿಗೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಋಣಾತ್ಮಕ ವಲಯದಲ್ಲಿರಬಹುದು ಅಥವಾ ಶೂನ್ಯಕ್ಕೆ ಹತ್ತಿರವಾಗಬಹುದು ಎಂದು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಆರ್ಥಿಕತೆಯಲ್ಲಿ ಶೇಕಡಾ -23.9 ರಷ್ಟು ಕುಸಿತ ಕಂಡುಬಂದಿರುವುದು ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಸೆರಾವೀಕ್‌ನ ಇಂಡಿಯಾ ಎನರ್ಜಿ ಫೋರಂನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಜೀವನೋಪಾಯಕ್ಕಿಂತ ಜೀವ ಮುಖ್ಯ ಎಂದು ಮನಗಂಡ ಸರ್ಕಾರವು ಮಾರ್ಚ್ 25 ರಿಂದ ಸರ್ಕಾರವು ಕಠಿಣವಾದ ಲಾಕ್‌ಡೌನ್ ವಿಧಿಸಿತ್ತು” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

“ಸಾಂಕ್ರಾಮಿಕ ರೋಗವನ್ನು ಎದುರಿಸಲು ಪೂರ್ವಸಿದ್ಧತಾ ಕಾರ್ಯಗಳನ್ನು ಮಾಡಲು ಲಾಕ್‌ಡೌನ್ ನಮಗೆ ಸಮಯ ನೀಡಿತು. ಆದರೆ ಅನ್‌ಲಾಕ್‌ನೊಂದಿಗೆ ಸ್ಥೂಲ ಆರ್ಥಿಕ ಸೂಚಕಗಳು ಪುನಶ್ಚೇತನದ ಲಕ್ಷಣಗಳನ್ನು ತೋರಿಸುತ್ತಿವೆ. ಹಬ್ಬಗಳ ಸಮಯವು ಆರ್ಥಿಕತೆಯನ್ನು ಮತ್ತಷ್ಟು ಉತ್ತೇಜಿಸುತ್ತಿದೆ. ಹಾಗಾಗಿ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕಗಳಲ್ಲಿ ಸಕಾರಾತ್ಮಕ ಬೆಳವಣಿಗೆಯ ಭರವಸೆ ಪುನರುಜ್ಜೀವನಗೊಂಡಿದೆ” ಎಂದು ಹೇಳಿದರು..

ಒಟ್ಟಾರೆಯಾಗಿ, ಪ್ರಸಕ್ತ ಹಣಕಾಸು ವರ್ಷದ (ಏಪ್ರಿಲ್ 2020 ರಿಂದ ಮಾರ್ಚ್ 2021) ಜಿಡಿಪಿ ಬೆಳವಣಿಗೆಯು ಋಣಾತ್ಮಕ ವಲಯ ಅಥವಾ ಶೂನ್ಯಕ್ಕೆ ಹತ್ತಿರವಾಗಲಿದ್ದು, ಮುಂದಿನ ಹಣಕಾಸು ವರ್ಷದಿಂದ ಈ ಬೆಳವಣಿಗೆ ಪುನರುಜ್ಜೀವನಗೊಳ್ಳುತ್ತದೆ ಎಂದು ಅವರು ಹೇಳಿದರು.

ಇತ್ತೀಚೆಗೆ ಐಎಂಎಫ್ ಬಿಡುಗಡೆ ಮಾಡಿದ ವರದಿಯನ್ವಯ ಭಾರತದ ಜಿಡಿಪಿಯು ಏಷ್ಯಾದ ರಾಷ್ಟ್ರಗಳಲ್ಲಿಯೇ ಅತ್ಯಂತ ಕೆಳಮಟ್ಟದಲ್ಲಿತ್ತು. ಸ್ವಾತಂತ್ರ್ಯಾ ನಂತರದಲ್ಲಿ ಇದು ಅತ್ಯಂತ ಕಳಪೆ ಪ್ರದರ್ಶನ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ:ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇತ್ತೀಚೆಗೆ ಆರ್‌ಬಿಐನ ಉಪ ಗವರ್ನರ್ ಮೈಕೆಲ್ ಪಾತ್ರಾ ಮಾತನಾಡಿ, ಆರ್ಥಿಕತೆ ಪುನರುಜ್ಜೀವನಗೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದು ಹೇಳಿದ್ದರು.

ಈಗ ನಿರ್ಮಲಾ ಸೀತಾರಾಮನ್ ನಿಡಿರುವ ಹೇಳಿಕೆಯ ಪ್ರಕಾರ, “3 ಅಥವಾ 4ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ಋಣಾತ್ಮಕತೆಯಿಂದ ಧನಾತ್ಮಕತೆಯೆಡೆಗೆ (ಮೈನಸ್-ಪ್ಲಸ್) ಬೆಳವಣಿಗೆಯಾಗಬಹುದು. ಆದರೆ ಶೂನ್ಯದ (0) ಆಸುಪಾಸಿನಲ್ಲಿಯೇ ಇರುಬಹುದು ಅಥವಾ ಋಣಾತ್ಮಕವಾಗಿಯೇ (-) ಇರಬಹುದು” ಎಂದು ಹೇಳಿದ್ದಾರೆ. ಅಂದರೆ ಈ ವರ್ಷವೂ ಆರ್ಥಿಕತೆ ಧನಾತ್ಮಕ ಬೆಳವಣಿಗೆಯನ್ನು ಕಾಣುವುದಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಅರ್ಥಿಕ ಕುಸಿತದಿಂದ ಕೇಂದ್ರ ಬಿಜೆಪಿ ಸರ್ಕಾರವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ನಡುವೆ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸಿತ್ತು. ಆದರೂ ಆರ್ಥಕತೆ ತೆವಳುತ್ತಲೇ ಇದೆ.


ಇದನ್ನೂ ಓದಿ: ಆರ್ಥಿಕತೆ ಮೇಲೆತ್ತಲು ಹರಸಾಹಸ: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ನೀಡಲು ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...