Homeಮುಖಪುಟಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ.

- Advertisement -
- Advertisement -

ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕೆ ಮಾಧ್ಯಮಗಳನ್ನು ಟೀಕಿಸುತ್ತಲೇ ಇರುತ್ತೇವೆ. ಆ ಸುದ್ದಿ ಹಾಗಿದೆ, ಇ ಸುದ್ದಿ ಹೀಗಿದೆ. ಎಷ್ಟು ಸೆನ್ಸಿಟಿವ್ ವಿಷಯ ಹೀಗೆ ತೋರಿಸ್ತಿದ್ದಾರೆ ಹಾಗೆ ಹೀಗೆ ಅಂತಾ ಗೋಣಗಿಕೊಳ್ಳುತ್ತೇವೆ. ಇಂತಹ ಟೀಕೆ, ವಿಮರ್ಶೆ ಹಿನ್ನಲೆ, ಡಿಜಿಟಲ್ ಯುಗಕ್ಕೆ ಆರೋಗ್ಯಕರ ಸುದ್ದಿ ಪರಿಸರ ವ್ಯವಸ್ಥೆಯನ್ನು ರಚಿಸಲು 11 ಡಿಜಿಟಲ್ ಸುದ್ದಿ ಸಂಸ್ಥೆಗಳು ಮಂಗಳವಾರ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ಪ್ರಾರಂಭಿಸಿವೆ.

“ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ದೃಢವಾದ ಡಿಜಿಟಲ್ ನ್ಯೂಸ್ ಪರಿಸರ ವಿಜ್ಞಾನವನ್ನು ನಿರ್ಮಿಸಲು, ಉತ್ತಮ ಅಭ್ಯಾಸಗಳನ್ನು ಪ್ರತಿನಿಧಿಸಲು, ವರ್ಧಿಸಲು ಮತ್ತು ವಿಕಸಿಸಲು ರಚಿಸಲಾಗಿದೆ. ಡಿಜಿಪಬ್ ನಿಜವಾಗಿಯೂ ವಿಶ್ವ ದರ್ಜೆಯ, ಸ್ವತಂತ್ರ ಮತ್ತು ಪತ್ರಿಕೋದ್ಯಮದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯುತ್ತದೆ” ಎಂದು ಸಂಘ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಪರಂಪರೆ ಮಾಧ್ಯಮದ ಅನ್ವೇಷಣೆಗಳು ಮತ್ತು ಆಸಕ್ತಿಗಳು ಯಾವಾಗಲೂ ಡಿಜಿಟಲ್ ಮಾಧ್ಯಮದಂತೆಯೇ ಇರಬಾರದು ಎಂಬ ಅಂಶವನ್ನು ಒತ್ತಿಹೇಳುತ್ತದೆ. ಅದರಲ್ಲೂ ವಿಶೇಷವಾಗಿ ನಿಯಂತ್ರಣ, ವ್ಯವಹಾರ ಮಾದರಿಗಳು, ತಂತ್ರಜ್ಞಾನ ಮತ್ತು ರಚನೆಗಳಿಗೆ ಸಂಬಂಧಿಸಿದಂತೆ” ಎಂದು ತಿಳಿಸಿದೆ.

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ. ಡಿಜಿಪಬ್ ಸದಸ್ಯತ್ವವು ಪ್ರಸ್ತುತ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮಳಿಗೆಗಳು ಮತ್ತು ಪತ್ರಕರ್ತರಿಗೆ ಸೀಮಿತವಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುವ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತರಿಗೆ ಡಿಜಿಪಬ್ ಮುಕ್ತವಾಗಿದೆ.  “ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆಯ ಅಗತ್ಯತೆಗಳನ್ನು ಸಂಸ್ಥೆಗಳು ಮಾತ್ರ ಪ್ರತಿನಿಧಿಸಬೇಕು ಅಥವಾ ಧ್ವನಿ ನೀಡಬೇಕು ಎಂದು ಪ್ರತಿಷ್ಠಾನವು ನಂಬುವುದಿಲ್ಲ. ಈ ವ್ಯವಸ್ಥೆಯ ಭದ್ರಕೋಟೆ ರೂಪಿಸುವಲ್ಲಿ ಸ್ವತಂತ್ರ ಪತ್ರಕರ್ತರ ಕೊಡುಗೆಯನ್ನು ಗುರುತಿಸುವುದು ಕಡ್ಡಾಯವಾಗಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.

ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್ ಅವರು ಸಂಘದ ಮೊದಲ ಅಧ್ಯಕ್ಷರಾಗಿದ್ದಾರೆ. ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್‌ಕಯಸ್ಥ ಉಪಾಧ್ಯಕ್ಷರಾಗಿದ್ದಾರೆ. ಕ್ವಿಂಟ್‌ನ ರಿತು ಕಪೂರ್ ಮತ್ತು ನ್ಯೂಸ್‌ಲಾಂಡ್ರಿಯ ಅಭಿನಂದನ್ ಸೇಖ್ರಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

“ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ “ಡಿಜಿಟಲ್” ಮೊದಲ ಸುದ್ದಿ ಸಂಸ್ಥೆಗಳ ಈ ಸಂಘಟಿತ ಪ್ರಯತ್ನವು ಸುದ್ದಿ ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ” ಎಂದು ರಾಜೇಂದ್ರನ್ ಹೇಳಿದರು.  ಜೊತೆಗೆ “ಇಂದು ಪತ್ರಿಕೋದ್ಯಮವು ಎದುರಿಸುತ್ತಿರುವ ಬೃಹತ್ ಸವಾಲುಗಳನ್ನು ಒಟ್ಟಾಗಿ ಪರಿಹರಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

“ಭಾರತದಲ್ಲಿ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಸೋಸಿಯೇಷನ್ ​​ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದ್ದರೂ, ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳು ಕ್ರಮವಾಗಿ ಸ್ವಯಂ ನಿಯಂತ್ರಣ ಹೊಂದಿವೆ. ಆದರೆ ಡಿಜಿಟಲ್ ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಅಂತಹ ಯಾವುದೇ ಸಂಸ್ಥೆ ಇರಲಿಲ್ಲ ಹಾಗಾಗಿ ಡಿಜಿಪಬ್ ಈ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಮಾಧ್ಯಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಇತರ ಎರಡು ಸಂಸ್ಥೆಗಳು ಇವೆ. ಒಂದು ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇದರಲ್ಲಿ ಟೈಮ್ಸ್ ಗ್ರೂಪ್, ಇಂಡಿಯಾ ಟುಡೆ ಗ್ರೂಪ್, ಹಿಂದೂಸ್ತಾನ್ ಟೈಮ್ಸ್, ಎನ್‌ಡಿಟಿವಿ ಸೇರಿವೆ.

ಎರಡನೆಯದು ಇಂಡಿಯನ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್(IDMA), ಇದರಲ್ಲಿ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಒಡಿಶಾ ಟಿವಿ, ನ್ಯೂಸ್ ಎಕ್ಸ್, ಸಂಡೇ ಗಾರ್ಡಿಯನ್, ಒಪಿಇಂಡಿಯಾ ಮತ್ತು ಗೋವಾ ಕ್ರಾನಿಕಲ್ ಚಾನೆಲ್‌ಗಳು ಸದಸ್ಯರಾಗಿವೆ.

IDMA ಗುಜರಾತ್ ಮತ್ತು ಅಸ್ಸಾಂನ ಎರಡು ಅಸ್ಪಷ್ಟ ಪ್ರಾದೇಶಿಕ ವೆಬ್‌ಸೈಟ್‌ಗಳನ್ನು ಅದರ ಸದಸ್ಯರೆಂದು ಪರಿಗಣಿಸಿದರೆ, DNPA ಡಿಜಿಟಲ್ ಸುದ್ದಿ ನೀಡುವ ಮಾಧ್ಯಮ ಸಂಸ್ಥೆಗಳ ಸಂಘವಾಗಿದೆ. ಆದರೆ ಸಂಪೂರ್ನವಾಗಿ ಡಿಜಿಟಲ್ ಮಾಧ್ಯಮಕ್ಕೆ ಒಂದು ಸಂಸ್ಥೆ ಇಲ್ಲ.

ಮಾಧ್ಯಮಗಳು ತಮ್ಮ ಮಿತಿಗಳನ್ನು ಮೀರುತ್ತಿರುವ ಈ ಸಂದರ್ಭದಲ್ಲಿ, ಮಾಧ್ಯಮಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗುತ್ತಿರುವ ಈ ಸಮಯದಲ್ಲಿ ಆರೋಗ್ಯಕರ ಸುದ್ದಿಗಳನ್ನು ನೀಡುವ ಒಂದು ವೇದಿಕೆಯ ಅವಶ್ಯಕತೆ ಕಂಡಿತ ಇದೆ. ಇದೆ ವಿಶ್ವಾಸವನ್ನು ಡಿಜಿಪಬ್ ವ್ಯಕ್ತಪಡಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...