Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...