Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...