Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎನ್ನುತ್ತಿವೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳಲ್ಲಿ ಈ ಮೈತ್ರಿ ಕಾಣೆಯಾಗಿದೆ.

ಹೌದು, ಬಿಜೆಪಿಯ ಭಿತ್ತಿ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಏಕವ್ಯಕ್ತಿ ಚಿತ್ರ ಮಾತ್ರ ಕಾಣಿಸಿಕೊಂಡಿದೆ. ಈ ಕಡೆ ಪತ್ರಿಕೆಗಳಲ್ಲಿ, ಕರಪತ್ರಗಳಲ್ಲಿ ಜೆಡಿಯು ನೀಡಿರುವ ನಿತೀಶ್ ಕುಮಾರ್ ಅವರ ಜಾಹೀರಾತುಗಳಲ್ಲಿ ಪಿಎಂ ಮೋದಿ ಅಥವಾ ಬಿಜೆಪಿ ಬಗ್ಗೆ ಉಲ್ಲೇಖವಿಲ್ಲ. ಇಂತಹ ಬೆಳವಣಿಗೆಗಳು ಪ್ರತಿಪಕ್ಷಗಳಿಗೆ ಲೇವಡಿ ಮಾಡಲು ಆಹಾರ ಒದಗಿಸಿದೆ.

ಶನಿವಾರ ಬಿಹಾರದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಎಲ್ಲಿಯೂ  ಜಾಹೀರಾತಿನಲ್ಲಿ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಶ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಜಾಹೀರಾತುಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅನೇಕ ಮಂದಿ ವ್ಯಂಗ್ಯವಾಡಿದ್ದಾರೆ.

 

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

0p55fkrg

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಎನ್‌ಡಿಎ ಚುನಾವಣಾ ಜಾಹೀರಾತುಗಳಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕದಿರುವ ನಿರ್ಧಾರವನ್ನು ಮುಖ್ಯಮಂತ್ರಿ ನಿತೀಶ್‌ಕುಮಾರ್ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಕಾರ್ಯಕ್ರಮದ ದಿನದಂದು ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, 2010 ರಲ್ಲಿ, ಪಾಟ್ನಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಂದರ್ಭದಲ್ಲಿ ಜಾಹೀರಾತಿನಲ್ಲಿ ನಿತೀಶ್‌ ಕುಮಾರ್ ಮತ್ತು ಮೋದಿ ಜತೆಗಿರುವ ಚಿತ್ರವೊಂದು ಪ್ರಕಟವಾಗಿತ್ತು. ಅಂದು ಕೋಪಗೊಂಡಿದ್ದ ನಿತೀಶ್ ಕುಮಾರ್‌ ಎಫ್‌ಐಆರ್ ಸಹ ದಾಖಲಿಸಿದ್ದರು.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆಯ ಬ್ಯಾನರ್‌ಗಳು ಬಿಹಾರದಲ್ಲಿ ಪ್ರಕಟವಾಗಿದ್ದವು.  2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್‌ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...