Homeಮುಖಪುಟಕೊರೊನಾದ ನಡುವೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಆರಂಭ!

ಕೊರೊನಾದ ನಡುವೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಆರಂಭ!

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ನಡೆಯುವ ಮೊದಲ ಚುನಾವಣೆ ಇದಾಗಿದೆ.

- Advertisement -
- Advertisement -

ಬಿಹಾರದ ಮೂರು ಹಂತದ ವಿಧಾನಸಭಾ ಚುನಾವಣೆಯ ಭಾಗವಾಗಿ ರಾಜ್ಯದ 243 ಸ್ಥಾನಗಳ ಪೈಕಿ ಇಂದು 71 ಸ್ಥಾನಗಳಲ್ಲಿ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ 71 ವಿಧಾನಸಭಾ ವಿಭಾಗಗಳಲ್ಲಿ 1,066 ಅಭ್ಯರ್ಥಿಗಳ ಭವಿಷ್ಯವನ್ನು ಎರಡು ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ನಡೆಯುವ ಮೊದಲ ಚುನಾವಣೆ ಇದಾಗಿದೆ. ಚುನಾವಣಾ ಆಯೋಗವು ಪ್ರಚಾರ ಮತ್ತು ಮತದಾನಕ್ಕಾಗಿ ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಈ ಬಾರಿ ಮತದಾನ ಕೇಂದ್ರದಲ್ಲಿ 1,000 ಮತದಾರರಿಗೆ ಮಾತ್ರ ಅವಕಾಶ ನೀಡಲಾಗುವುದು. ಥರ್ಮಲ್ ಸ್ಕ್ಯಾನರ್‌ಗಳು, ಹ್ಯಾಂಡ್ ಸ್ಯಾನಿಟೈಸರ್, ಸೋಪ್ ಮತ್ತು ನೀರು ಮತದಾರರಿಗೆ ಲಭ್ಯವಾಗಲಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಥವಾ ಕೊರೊನಾ ಸೋಂಕಿತರಿಗೆ ಅಂಚೆ ಮತಪತ್ರ ಸೌಲಭ್ಯವನ್ನು ನೀಡಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಮತದಾನದ ಸಮಯವನ್ನೂ ವಿಸ್ತರಿಸಲಾಗಿದೆ. ಈ ಬಾರಿ ಮತದಾನ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿ ಸಂಜೆ 6 ರವರೆಗೆ ಮುಂದುವರಿಯಲಿದೆ. ಆದಾಗ್ಯೂ, ಪರಿಷ್ಕೃತ ಸಮಯಗಳು ಎಡಪಂಥೀಯ ಉಗ್ರವಾದದಿಂದ ಪ್ರಭಾವಿತ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ.

ಕಾಂಗ್ರೆಸ್, ರಾಷ್ಟ್ರೀಯ ಜನತಾದಳ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ಬಿಹಾರದ ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ಜನತಾದಳ ವಿಧಾನಸಭಾ ಚುನಾವಣೆಯಲ್ಲಿ 144 ಸ್ಥಾನಗಳಿಂದ ಸ್ಪರ್ಧಿಸಲಿದ್ದು, ಕಾಂಗ್ರೆಸ್ 70 ಮತ್ತು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಟ್ಟಾಗಿ 29 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಮೈತ್ರಿಕೂಟವು, 10 ಲಕ್ಷ ಉದ್ಯೋಗಗಳನ್ನು ಒದಗಿಸುವುದಾಗಿಯೂ, ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿಯೂ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಜನತಾದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷ ಈ ಮಧ್ಯೆ ಸುಮಾರು 50:50 ಸ್ಥಾನಗಳ ಹಂಚಿಕೆ ಒಪ್ಪಂದವನ್ನು ಘೋಷಿಸಿತ್ತು. ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ನಿತೀಶ್ ಕುಮಾರ್ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ. ಕೇಸರಿ ಪಕ್ಷವು ಉಚಿತ ಕೊರೊನಾ ವೈರಸ್ ಲಸಿಕೆಗಳು ಮತ್ತು 19 ಲಕ್ಷ ಉದ್ಯೋಗಗಳನ್ನು ನೀಡುವ ಭರವಸೆ ನೀಡಿತ್ತು. ಆರೋಗ್ಯ ಬಿಕ್ಕಟ್ಟನ್ನು ರಾಜಕೀಯಗೊಳಿಸಿದ್ದಕ್ಕಾಗಿ ಪಕ್ಷವನ್ನು ತೀವ್ರವಾಗಿ ಟೀಕಿಸಲಾಗಿದೆ.

ಮೊದಲ ಹಂತದ ಮತದಾನದಲ್ಲಿ, ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಮತ್ತು ಆರ್ಜೆಡಿ ಅಭ್ಯರ್ಥಿ ಉದಯ್ ನಾರಾಯಣ್ ಚೌಧರಿ ಅವರು ಇಮಾಮಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಈ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಿದೆ. ಜಮುಯಿಯಲ್ಲಿ, 2018 ರ ಕಾಮನ್ವೆಲ್ತ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ಬಿಜೆಪಿ ಅಭ್ಯರ್ಥಿ ಶ್ರೇಯಾಸಿ, ಆರ್‌ಜೆಡಿ ಶಾಸಕ ವಿಜಯ್ ಪ್ರಕಾಶ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ಮುಂದಿನ ಎರಡು ಹಂತದ ಚುನಾವಣೆಗಳು ನವೆಂಬರ್ 3 ಮತ್ತು ನವೆಂಬರ್ 7 ರಂದು ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...