Homeಮುಖಪುಟಕೊರೊನಾದ ನಡುವೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಆರಂಭ!

ಕೊರೊನಾದ ನಡುವೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಆರಂಭ!

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ನಡೆಯುವ ಮೊದಲ ಚುನಾವಣೆ ಇದಾಗಿದೆ.

- Advertisement -
- Advertisement -

ಬಿಹಾರದ ಮೂರು ಹಂತದ ವಿಧಾನಸಭಾ ಚುನಾವಣೆಯ ಭಾಗವಾಗಿ ರಾಜ್ಯದ 243 ಸ್ಥಾನಗಳ ಪೈಕಿ ಇಂದು 71 ಸ್ಥಾನಗಳಲ್ಲಿ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ 71 ವಿಧಾನಸಭಾ ವಿಭಾಗಗಳಲ್ಲಿ 1,066 ಅಭ್ಯರ್ಥಿಗಳ ಭವಿಷ್ಯವನ್ನು ಎರಡು ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ನಡೆಯುವ ಮೊದಲ ಚುನಾವಣೆ ಇದಾಗಿದೆ. ಚುನಾವಣಾ ಆಯೋಗವು ಪ್ರಚಾರ ಮತ್ತು ಮತದಾನಕ್ಕಾಗಿ ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಈ ಬಾರಿ ಮತದಾನ ಕೇಂದ್ರದಲ್ಲಿ 1,000 ಮತದಾರರಿಗೆ ಮಾತ್ರ ಅವಕಾಶ ನೀಡಲಾಗುವುದು. ಥರ್ಮಲ್ ಸ್ಕ್ಯಾನರ್‌ಗಳು, ಹ್ಯಾಂಡ್ ಸ್ಯಾನಿಟೈಸರ್, ಸೋಪ್ ಮತ್ತು ನೀರು ಮತದಾರರಿಗೆ ಲಭ್ಯವಾಗಲಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಥವಾ ಕೊರೊನಾ ಸೋಂಕಿತರಿಗೆ ಅಂಚೆ ಮತಪತ್ರ ಸೌಲಭ್ಯವನ್ನು ನೀಡಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಮತದಾನದ ಸಮಯವನ್ನೂ ವಿಸ್ತರಿಸಲಾಗಿದೆ. ಈ ಬಾರಿ ಮತದಾನ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿ ಸಂಜೆ 6 ರವರೆಗೆ ಮುಂದುವರಿಯಲಿದೆ. ಆದಾಗ್ಯೂ, ಪರಿಷ್ಕೃತ ಸಮಯಗಳು ಎಡಪಂಥೀಯ ಉಗ್ರವಾದದಿಂದ ಪ್ರಭಾವಿತ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ.

ಕಾಂಗ್ರೆಸ್, ರಾಷ್ಟ್ರೀಯ ಜನತಾದಳ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ಬಿಹಾರದ ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ಜನತಾದಳ ವಿಧಾನಸಭಾ ಚುನಾವಣೆಯಲ್ಲಿ 144 ಸ್ಥಾನಗಳಿಂದ ಸ್ಪರ್ಧಿಸಲಿದ್ದು, ಕಾಂಗ್ರೆಸ್ 70 ಮತ್ತು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಟ್ಟಾಗಿ 29 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಮೈತ್ರಿಕೂಟವು, 10 ಲಕ್ಷ ಉದ್ಯೋಗಗಳನ್ನು ಒದಗಿಸುವುದಾಗಿಯೂ, ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿಯೂ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಜನತಾದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷ ಈ ಮಧ್ಯೆ ಸುಮಾರು 50:50 ಸ್ಥಾನಗಳ ಹಂಚಿಕೆ ಒಪ್ಪಂದವನ್ನು ಘೋಷಿಸಿತ್ತು. ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ನಿತೀಶ್ ಕುಮಾರ್ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ. ಕೇಸರಿ ಪಕ್ಷವು ಉಚಿತ ಕೊರೊನಾ ವೈರಸ್ ಲಸಿಕೆಗಳು ಮತ್ತು 19 ಲಕ್ಷ ಉದ್ಯೋಗಗಳನ್ನು ನೀಡುವ ಭರವಸೆ ನೀಡಿತ್ತು. ಆರೋಗ್ಯ ಬಿಕ್ಕಟ್ಟನ್ನು ರಾಜಕೀಯಗೊಳಿಸಿದ್ದಕ್ಕಾಗಿ ಪಕ್ಷವನ್ನು ತೀವ್ರವಾಗಿ ಟೀಕಿಸಲಾಗಿದೆ.

ಮೊದಲ ಹಂತದ ಮತದಾನದಲ್ಲಿ, ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಮತ್ತು ಆರ್ಜೆಡಿ ಅಭ್ಯರ್ಥಿ ಉದಯ್ ನಾರಾಯಣ್ ಚೌಧರಿ ಅವರು ಇಮಾಮಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಈ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಿದೆ. ಜಮುಯಿಯಲ್ಲಿ, 2018 ರ ಕಾಮನ್ವೆಲ್ತ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ಬಿಜೆಪಿ ಅಭ್ಯರ್ಥಿ ಶ್ರೇಯಾಸಿ, ಆರ್‌ಜೆಡಿ ಶಾಸಕ ವಿಜಯ್ ಪ್ರಕಾಶ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ಮುಂದಿನ ಎರಡು ಹಂತದ ಚುನಾವಣೆಗಳು ನವೆಂಬರ್ 3 ಮತ್ತು ನವೆಂಬರ್ 7 ರಂದು ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...