Homeಮುಖಪುಟರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ

- Advertisement -
- Advertisement -

ಕೃಷಿ ವಿರೋಧಿ ಮಸೂದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ (SDPI) ವತಿಯಿಂದ ರಾಜ್ಯಾದ್ಯಂತ “ಜಾಗೋ ಕಿಸಾನ್” ಎಂಬ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ನಿನ್ನೆ ಹುಬ್ಬಳ್ಳಿ ಜಿಲ್ಲಾ ಕೇಂದ್ರದಲ್ಲಿ ಸಮಾಲೋಚನ ಸಭೆ ಆಯೋಜಿಸಲಾಗಿತ್ತು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ದಾಖಲಾಗುತ್ತಿದೆ. ಹಲವಾರು ಸಂಘಟನೆಗಳು ತಮ್ಮ ವ್ಯಾಪ್ತಿಯಲ್ಲಿಯೇ ವಿಭಿನ್ನವಾಗಿ ಪ್ರತಿಭಟಿಸುತ್ತಿವೆ. ಈ ಸಾಲಿಗೆ SDPI ಪಕ್ಷವೂ ಕೂಡಾ ಈ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ಕೃಷಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಆಹಮದ್, “ಈ ಮಸೂದೆಗಳಿಂದ ಕೇವಲ ರೈತ ಅಥವಾ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ, ಸಂಪೂರ್ಣವಾಗಿ ಮಾನವ ಸಮೂಹದ ಮೇಲೆ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಆದುದರಿಂದ ಇದು ಕೇವಲ ರೈತ ವಿರೋಧಿ ಆಗದೇ, ಮಾನವೀಯ ವಿರೋಧಿ ಆಗಿದೆ. ಹಾಗಾಗಿ ಸಮಸ್ತ ನಾಗರಿಕರು ಬಿಜೆಪಿ ನೇತೃತ್ವದ ಸರಕಾರ ನಡೆಸುತ್ತಿರುವ ದುರಾಡಳಿತದ ವಿರುದ್ದ ಒಗ್ಗೂಡಿ ಹೋರಾಡ ಬೇಕಾಗಿದೆ” ಎಂದು ಕರೆ ನೀಡಿದರು.

ಆದಾಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತರಾದ ಖಾಲೀದ್ ಜಮಾದಾರ್ ಮಾತನಾಡಿ, “ಜ್ಞಾನ ಇಲ್ಲದವರಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎಂಬುವುದಕ್ಕೆ ಮೋದಿ ಸರ್ಕಾರವೇ ಉತ್ತಮ ಉದಾಹರಣೆ. ಇದು ಕೇವಲ SDPI ಹೋರಾಟ ಅಲ್ಲ. ಇದು ನಮ್ಮೆಲ್ಲರ ಹೋರಾಟ ಆಗಬೇಕು. ಈ ಸಣ್ಣ ಹೋರಾಟ ಜನಾಂದೋಲನವಾಗಿ ಪರಿವರ್ತನೆ ಆಗಲಿ” ಎಂದು ಹೇಳಿದರು.

ಸಭೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ರಫೀಕ್ ಲಷ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಸಮೀರ್ ಬೆಡಗಿರಿ, ಸಂವಿಧಾನ ಸುರಕ್ಷಾ ಸಮಿತಿ ಸಂಘಟನೆಯ ಮುಖಂಡರಾದ ಆಸೀಫ್ ಪಾಚಪುರಿ, ರೈತ ಮಖಂಡರಾದ ಪರಸಪ್ಪ ಯಲ್ಲಪ್ಪ ಕೆರೆ ಕಟ್ಟೆ, ದೇವಂದ್ರಪ್ಪ ಮುಂತಾದವರು ಉಪಸ್ಥಿತಿರಿದ್ದರು.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...