Homeಮುಖಪುಟರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ

- Advertisement -
- Advertisement -

ಕೃಷಿ ವಿರೋಧಿ ಮಸೂದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ (SDPI) ವತಿಯಿಂದ ರಾಜ್ಯಾದ್ಯಂತ “ಜಾಗೋ ಕಿಸಾನ್” ಎಂಬ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ನಿನ್ನೆ ಹುಬ್ಬಳ್ಳಿ ಜಿಲ್ಲಾ ಕೇಂದ್ರದಲ್ಲಿ ಸಮಾಲೋಚನ ಸಭೆ ಆಯೋಜಿಸಲಾಗಿತ್ತು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ದಾಖಲಾಗುತ್ತಿದೆ. ಹಲವಾರು ಸಂಘಟನೆಗಳು ತಮ್ಮ ವ್ಯಾಪ್ತಿಯಲ್ಲಿಯೇ ವಿಭಿನ್ನವಾಗಿ ಪ್ರತಿಭಟಿಸುತ್ತಿವೆ. ಈ ಸಾಲಿಗೆ SDPI ಪಕ್ಷವೂ ಕೂಡಾ ಈ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ಕೃಷಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಆಹಮದ್, “ಈ ಮಸೂದೆಗಳಿಂದ ಕೇವಲ ರೈತ ಅಥವಾ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ, ಸಂಪೂರ್ಣವಾಗಿ ಮಾನವ ಸಮೂಹದ ಮೇಲೆ ಕೆಟ್ಟ ದುಷ್ಪರಿಣಾಮ ಬೀರುತ್ತದೆ. ಆದುದರಿಂದ ಇದು ಕೇವಲ ರೈತ ವಿರೋಧಿ ಆಗದೇ, ಮಾನವೀಯ ವಿರೋಧಿ ಆಗಿದೆ. ಹಾಗಾಗಿ ಸಮಸ್ತ ನಾಗರಿಕರು ಬಿಜೆಪಿ ನೇತೃತ್ವದ ಸರಕಾರ ನಡೆಸುತ್ತಿರುವ ದುರಾಡಳಿತದ ವಿರುದ್ದ ಒಗ್ಗೂಡಿ ಹೋರಾಡ ಬೇಕಾಗಿದೆ” ಎಂದು ಕರೆ ನೀಡಿದರು.

ಆದಾಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತರಾದ ಖಾಲೀದ್ ಜಮಾದಾರ್ ಮಾತನಾಡಿ, “ಜ್ಞಾನ ಇಲ್ಲದವರಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎಂಬುವುದಕ್ಕೆ ಮೋದಿ ಸರ್ಕಾರವೇ ಉತ್ತಮ ಉದಾಹರಣೆ. ಇದು ಕೇವಲ SDPI ಹೋರಾಟ ಅಲ್ಲ. ಇದು ನಮ್ಮೆಲ್ಲರ ಹೋರಾಟ ಆಗಬೇಕು. ಈ ಸಣ್ಣ ಹೋರಾಟ ಜನಾಂದೋಲನವಾಗಿ ಪರಿವರ್ತನೆ ಆಗಲಿ” ಎಂದು ಹೇಳಿದರು.

ಸಭೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ರಫೀಕ್ ಲಷ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಸಮೀರ್ ಬೆಡಗಿರಿ, ಸಂವಿಧಾನ ಸುರಕ್ಷಾ ಸಮಿತಿ ಸಂಘಟನೆಯ ಮುಖಂಡರಾದ ಆಸೀಫ್ ಪಾಚಪುರಿ, ರೈತ ಮಖಂಡರಾದ ಪರಸಪ್ಪ ಯಲ್ಲಪ್ಪ ಕೆರೆ ಕಟ್ಟೆ, ದೇವಂದ್ರಪ್ಪ ಮುಂತಾದವರು ಉಪಸ್ಥಿತಿರಿದ್ದರು.

ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ

SDPI ಪಕ್ಷವು ದೇಶದಾದ್ಯಂತ ನಡೆಸುತ್ತಿರುವ ’ಜಾಗೋ ಕಿಸಾನ್’ ಅಭಿಯಾನದ ಅಂಗವಾಗಿ ರಾಜ್ಯದಲ್ಲೂ ’ಕೃಷಿ ಸಂಹಾರ ಬಿಜೆಪಿ ಹುನ್ನಾರ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಅಕ್ಟೋಬರ್‌ 15 ರಿಂದ 31 ರವರೆಗೆ ರೈತ ಜಾಗೃತಿ ಅಭಿಯಾನ ನಡೆಸಲಿದೆ.

ಈ ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಎಪಿಎಂಸಿ ಮಾರುಕಟ್ಟೆಗಳಲ್ಲಿ, ಸಂತೆಗಳಲ್ಲಿ, ಹಳ್ಳಿಗಳಲ್ಲಿ ರೈತರನ್ನು ಭೇಟಿ ಮಾಡಿ ಜಾಗೃತಿ ಮೂಡಿಸಲಾಗುತ್ತದೆ. ರೈತ ಹೋರಾಟಗಾರರ ಸಮಾಲೋಚನಾ ಸಭೆಯನ್ನು ನಡೆಸಲಾಗುತ್ತದೆ. ಅಷ್ಟೇ ಅಲ್ಲದೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಕೂಡಾ ಭಾಗವಹಿಸಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅಭಿಯಾನದ ರಾಜ್ಯ ಕವ್ವೀನರ್‌ ಅಬ್ರಾರ್ ಅಹ್ಮದ್, “ಪಕ್ಷದ ಜಿಲ್ಲಾಮಟ್ಟದ ಎಲ್ಲಾ ಪದಾಧಿಕಾರಿಗಳಿಗೆ ಕಾಯ್ದೆಯೂ ಯಾವ ರೀತಿಯಲ್ಲಿ ಲೋಪದೋಷದಿಂದ ಕೂಡಿದೆ ಎಂಬ ಕಾರ್ಯಗಾರ ಈಗಾಗಲೇ ನಡೆದಿದೆ. ಅಭಿಯಾನದ ಪೋಸ್ಟರ್‌ ಹಾಗೂ ಕರಪತ್ರಗಳು ತಯಾರಾಗಿದ್ದು ಈಗಾಗಲೇ ಹಂಚುತ್ತಾ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಅಭಿಯಾನದ ಅಂಗವಾಗಿ ಮಸೂದೆಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ನರ್‌ ಮೀಟಿಂಗ್, ಕಟ್ಟೆ ಚರ್ಚೆ ಸೇರಿದಂತೆ ಸಮಾಲೋಚನಾ ಸಭೆಯನ್ನು ಎಲ್ಲಾ ಹಳ್ಳಿಗಳಲ್ಲಿ ನಡೆಸಲಿದ್ದೇವೆ” ಎಂದರು.

ಅಭಿಯಾನದ ಕೊನೆಯ ದಿನ ಅಕ್ಟೋಬರ್‌ 31 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಅಭಿಯಾನಕ್ಕೆ ತಾತ್ಕಾಲಿಕ ತೆರೆ ಎಳೆಯಲಿದ್ದೇವೆ ಎಂದು ಅಬ್ರಾರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...