HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...