Homeಚಳವಳಿಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ - ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ – ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು.

- Advertisement -
- Advertisement -

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಉಪಾಧ್ಯಕ್ಷರು, ಸಿಪಿಐಎಂ ಪಕ್ಷದ ರಾಜ್ಯ ನೇತಾರರು ಆಗಿದ್ದ ಹಿರಿಯ ರೈತ ನಾಯಕ ಕಾಮ್ರೆಡ್ ಮಾರುತಿರಾವ್ ಮಾನ್ಪಡೆ ರವರು ದಿನಾಂಕ 20.10.2020ರ ಬೆಳಗ್ಗೆ 9:30ಕ್ಕೆ ನಿಧನರಾದರು. ಇದು ರಾಜ್ಯದ ರೈತ ಚಳವಳಿ ಹಾಗೂ ಶೋಷಿತರ ಪರ ಹೋರಾಟದ ಹಿತೈಷಿಗಳಿಗೆ ಒಟ್ಟಾರೆಯಾಗಿ ಇಡೀ ಪ್ರಜಾಸತ್ತಾತ್ಮಕ ಹೋರಾಟದ ಒಡನಾಡಿಗಳಿಗೆ ಅಘಾತ ಉಂಟುಮಾಡಿದೆ. ಕೋವಿಡ್-19 ಸೋಂಕು ಅಪಾಯವನ್ನು ಲೆಕ್ಕಿಸದೇ ಅಂತಿಮ ದರ್ಶನದ ಅವಕಾಶ ಇಲ್ಲದಿದ್ದರೂ ಅಂತಿಮ ನಮನಕ್ಕೆ ಸೇರಿದ್ದ ಅಪಾರ ಜನಸ್ತೋಮ ಹಾಗೂ ರಾಜ್ಯದೆಲ್ಲೆಡೆ ವ್ಯಕ್ತವಾದ ಸಂತಾಪ ಮಾನ್ಪಡೆಯವರು ಹೊಂದಿದ್ದ ಜನಪರ ಕಾಳಜಿಯ ಅಭಿವ್ಯಕ್ತಿಯಾಗಿತ್ತು.

ಕಾಮ್ರೆಡ್ ಮಾರುತಿರಾವ್ ಮಾನ್ಪಡೆಯವರು ಇಡೀ ರಾಜ್ಯ ಕಂಡ ಅಪರೂಪದ ದಿಟ್ಟ ರೈತ ನಾಯಕ. ರಾಜ್ಯದ ನೀರಾವರಿ ಯೋಜನೆಗಳು ಮತ್ತು ನೀರಾವರಿ ಹೋರಾಟಗಳ ಕುರಿತು ಅಪಾರ ಜ್ಞಾನ ಹೊಂದಿದ್ದರು. ತೊಗರಿ ಬೆಲೆಗಾಗಿ, ಬಗರ್‌ಹುಕುಂ ಸಾಗುವಳಿ ಸಕ್ರಮಕ್ಕಾಗಿ, ಕೃಷ್ಣ ನದಿ ನೀರು ಬಳಕೆಯ ನೀರಾವರಿಗಾಗಿ, ವಿದ್ಯುತ್ ಖಾಸಗೀಕರಣ, ಕೃಷಿ ಉತ್ಪನ್ನಗಳ ಅಮದು ಮುಂತಾದ ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು ಸೇರಿದಂತೆ ಹಲವಾರು ರೈತ ಹೋರಾಟ ಪ್ರಶ್ನೆಗಳನ್ನು ಕೈಗೆತ್ತಿಕೊಂಡು ರೈತ ಸಮುದಾಯಕ್ಕೆ ನ್ಯಾಯ-ಪರಿಹಾರ ಒದಗಿಸುವುದರಲ್ಲಿ ನಿರತರಾಗಿದ್ದ ರಾಜಿರಹಿತ ಹೋರಾಟಗಾರ ಅವರಾಗಿದ್ದರು. ತೊಗರಿ ಬೆಳೆಗೆ ಸಿಗಬೇಕಾದ ವೈಜ್ಞಾನಿಕ ಬೆಲೆ ವಿಷಯದ ಹೋರಾಟದ ಚಾಂಪಿಯನ್ ಆಗಿ ಮನೆ ಮಾತಾಗಿದ್ದ ಮಾನ್ಪಡೆಯವರು ಕೃಷ್ಣ ಜಲ ಭಾಗ್ಯ ನಿಗಮ ರಚನೆಗೆ ಒತ್ತಡ ಹೇರಿದ ಪ್ರಮುಖ ಶಕ್ತಿಯಾಗಿದ್ದರು. ವಿಶ್ವ ಬ್ಯಾಂಕ್‌ನ ಸಾಲದ ಷರುತ್ತಗಳಿಗೆ ಕೃಷ್ಣ ಜಲ ಭಾಗ್ಯ ನಿಗಮ ಈಡಾಗದಂತೆ ರೈತರ ಬೃಹತ್ ಸಮಾವೇಶವನ್ನು ಸಂಘಟಿಸಿದ್ದರು.

ರೈತ – ಕೃಷಿ ಕೂಲಿಕಾರರ ಪ್ರಶ್ನೆಗಳಿಗೆ ಮಾತ್ರವೇ ಅಲ್ಲದೇ ರಾಜ್ಯದ ಪಂಚಾಯತಿ, ಅಂಗನವಾಡಿ ಕಾರ್ಮಿಕರನ್ನು ಹಾಗೂ ಸಾಮಾಜಿಕವಾಗಿ ದಮನಕ್ಕೀಡಾಗಿದ್ದ ಶೋಷಿತ ದಲಿತ, ಮಹಿಳೆಯರನ್ನು ಕೂಡ ಸಂಘಟಿಸುವಲ್ಲಿ ಮುಂಚೂಣಿ ಪಾತ್ರವನ್ನು ಮಾರುತಿ ಮಾನ್ಪಡೆ ವಹಿಸಿದ್ದರು.

1995 ರಿಂದ 2017ರವರೆಗೆ ಸುಧೀರ್ಘ ಕಾಲಾವಧಿಗೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ೧೯೮೯ರಿಂದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಕ್ಕೆ ಕೂಡ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಸುಮಾರು 40 ವರ್ಷಗಳ ಕಾಲದ ಅವರ ಹೋರಾಟದಿಂದ ರಾಜ್ಯದ ಮತ್ತು ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಹಾಗೂ ಇಡೀ ಉತ್ತರ ಕರ್ನಾಟಕದ ಒಬ್ಬ ಪ್ರಮುಖ ಕಮ್ಯುನಿಸ್ಟ್ ಮುಖಂಡರಾಗಿ ಗುರುತಿಸಲ್ಪಟ್ಟಿದ್ದರು.

ಕರಿ ಲಿಂಗೇಶ್ವರ ಯುವ ರೈತ ಸಂಘದ ಮೂಲಕ ಸಾರ್ವಜನಿಕ ಜೀವನ ಪ್ರಾರಂಬಿಸಿದ ಮಾರುತಿ ಮಾನ್ಪಡೆಯವರು ಯಶವಂತ ಹಲಸೂರು, ವಿ.ಎನ್ ಹಳಕಟ್ಟಿ, ಗಂಗಾಧರ ನಮೋಶಿ, ಚಂದ್ರಶೇಖಕರ ಬಾಳೆ, ಪಿ ರಾಮಚಂದ್ರರಾವ್‌ರವರ ಒಡನಾಟವೂ ಸೇರಿದಂತೆ ರೈತ ಹಾಗೂ ಕಮ್ಯುನಿಸ್ಟ್ ಚಳುವಳಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ನೌಕರಿಗೆ ರಾಜೀನಾಮೆ ನೀಡಿ ರೈತ ಚಳವಳಿಯ ಪೂರ್ಣ ಕಾಲದ ಕಾರ್ಯಕರ್ತರಾಗಿ ಗುಲ್ಬರ್ಗ ಜಿ¯ಯಿಂದ ಕೆಲಸ ಆರಂಭಿಸಿದರು. ಶೋಷಿತರ ಪರವಾದ ದಣಿವರಿಯದ ಕೆಲಸದ ಪರಿಣಾಮವಾಗಿ 1986 ರಲ್ಲಿ ಗುಲ್ಬರ್ಗ ಜಿ.ಪಂ ಸದಸ್ಯರಾಗಿ ಸಿಪಿಐಎಂನ್ನು ಪ್ರತಿನಿಧಿಸಿದ್ದರು. ಜಿ.ಪಂ ಸದಸ್ಯರಾಗಿ ಅವರು ಮಾಡಿದ ಕೆಲಸಗಳು ಇಡೀ ರಾಜ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಮಾದರಿಯಾಗಿತ್ತು.
ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು. ಪಂಪ್‌ಸೆಟ್ ಬಳಕೆದಾರರಿಗೆ ಮೀಟರ್ ಅಳವಡಿಸಿ ವಿದ್ಯುತ್ ಖಾಸಗೀಕರಣದ ಪ್ರಯತ್ನ ಮಾಡುವ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಒಂದರಲ್ಲೇ ೩ ತಿಂಗಳು ಜೈಲಿನಲ್ಲಿದ್ದರು. ಒಟ್ಟಾರೆ ಅವರ ಹೋರಾಟದ ಜೀವನದಲ್ಲಿ ಸುಮಾರು 150 ದಿನಗಳಿಗೂ ಹೆಚ್ಚು ಜೈಲು ವಾಸ ಅನುಭವಿಸಿದ್ದರು. ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ 2020.ಸೆಪ್ಟೆಂಬರ್ 25 ರಂದು ನಡೆದ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನ ರಸ್ತೆ ತಡೆ ಪ್ರತಿಭಟನೆಯಲ್ಲೂ ಬಂಧನಕ್ಕೆ ಒಳಗಾಗಿದ್ದರು.

ಚುನಾವಣಾ ಹೋರಾಟದಲ್ಲೂ ಅಭ್ಯರ್ಥಿಯಾಗಿ ಭಾಗವಹಿಸಿದ್ದ ಮಾರುತಿ ಮಾನ್ಪಡೆ ರವರು ಬೀದರ್ ಲೋಕಸಭಾ ಹಾಗೂ ಗುಲ್ಬರ್ಗ ಗ್ರಾಮೀಣ ಮೀಸಲು ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು.

1955ರಲ್ಲಿ ಸಾಮಾಜಿಕವಾಗಿ ಅಸ್ಪೃಶ್ಯತೆ ಅನುಭವಿಸುತ್ತಿದ್ದ ಬಡತನದ ಕುಟುಂಬದಲ್ಲಿ ಜನಿಸಿದ ಮಾರುತಿ ಮಾನ್ಪಡೆಯವರು ಸ್ವತಃ ಬರಗಾಲದ ಬವಣೆಗಳನ್ನು ಅನುಭವಿಸಿ ರೈತರ ಕಷ್ಟ -ನಷ್ಟಗಳನ್ನು ನೇರವಾಗಿ ಕಂಡವರು. 65 ವಯಸ್ಸಿನ ಹಿರಿಯರಾಗಿದ್ದರೂ ದೈಹಿಕ ಆರೋಗ್ಯ ಸ್ಥಿತಿಯನ್ನು ಲೆಕ್ಕಿಸದೇ ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸುಗ್ರಿವಾಜ್ಞೆಗಳನ್ನು ವಿರೋಧಿಸಿ ಸೆಪ್ಟೆಂಬರ್ 21 ರಿಂದ 26ರವರಿಗೆ ಬೆಂಗಳೂರಿನಲ್ಲಿ ನಡೆದ ಆಹೋರಾತ್ರಿ ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾಗಿ ತೊಡಗಿಸಿಕೊಂಡಿದ್ದರು. ಸೆಪ್ಟೆಂಬರ್ 28 ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಗುಲ್ಬರ್ಗಕ್ಕೆ ತೆರಳಿ ಹೈದರಾಬಾದ್ ಕರ್ನಾಟಕ ಬಂದ್ ಯಶಸ್ವಿ ಆಗಲು ಶ್ರಮಿಸಿದ್ದರು. ಈ ಕಾಲಾವಧಿಯಲ್ಲಿ ಆದ ಕೋವಿಡ್-19 ಸೋಂಕಿಗೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಉತ್ತಮ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಶೋಷಿತರ ಬಲವಾದ ಧ್ವನಿಯೊಂದು ನಿಂತು ಹೋಗಿದೆ.

ಸಂಗಾತಿ ಮಾನ್ಪಡೆರವರು ಜನರ ಸಮಸ್ಯೆಗಳನ್ನು ನಿಖರವಾಗಿ ಗುರುತಿಸಿ, ಹೋರಾಟದ ಸ್ಪರೂಪ ನೀಡುವುದರಲ್ಲಿ ಬಹಳ ಪರಿಣತಿ ಹೊಂದಿದ್ದ ಮತ್ತು ರಾಜ್ಯದ ಎಲ್ಲ ಜನಪರ ಚಳವಳಿಗಳಗೆ ಮಾರ್ಗದರ್ಶನ ನೀಡಬಲ್ಲ ಒಡನಾಡಿಯಾಗಿದ್ದರು. ಇವರ ನಿಧನ ರೈತ ಚಳುವಳಿಗೆ ಮಾತ್ರವೇ ಅಲ್ಲದೇ ಒಟ್ಟಾರೆ ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಅಪಾರ ನಷ್ಟ.

  • ಟಿ.ಯಶವಂತ
    ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಸದಸ್ಯರು.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...