Homeಚಳವಳಿಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ - ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಶ್ರಧ್ಧಾಂಜಲಿ: ಜನಪರ ಚಳವಳಿಯ ಮಾರ್ಗದರ್ಶಕ – ಧೀರ ಹೋರಾಟಗಾರ ಮಾರುತಿ ಮಾನ್ಪಡೆ

ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು.

- Advertisement -
- Advertisement -

ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಉಪಾಧ್ಯಕ್ಷರು, ಸಿಪಿಐಎಂ ಪಕ್ಷದ ರಾಜ್ಯ ನೇತಾರರು ಆಗಿದ್ದ ಹಿರಿಯ ರೈತ ನಾಯಕ ಕಾಮ್ರೆಡ್ ಮಾರುತಿರಾವ್ ಮಾನ್ಪಡೆ ರವರು ದಿನಾಂಕ 20.10.2020ರ ಬೆಳಗ್ಗೆ 9:30ಕ್ಕೆ ನಿಧನರಾದರು. ಇದು ರಾಜ್ಯದ ರೈತ ಚಳವಳಿ ಹಾಗೂ ಶೋಷಿತರ ಪರ ಹೋರಾಟದ ಹಿತೈಷಿಗಳಿಗೆ ಒಟ್ಟಾರೆಯಾಗಿ ಇಡೀ ಪ್ರಜಾಸತ್ತಾತ್ಮಕ ಹೋರಾಟದ ಒಡನಾಡಿಗಳಿಗೆ ಅಘಾತ ಉಂಟುಮಾಡಿದೆ. ಕೋವಿಡ್-19 ಸೋಂಕು ಅಪಾಯವನ್ನು ಲೆಕ್ಕಿಸದೇ ಅಂತಿಮ ದರ್ಶನದ ಅವಕಾಶ ಇಲ್ಲದಿದ್ದರೂ ಅಂತಿಮ ನಮನಕ್ಕೆ ಸೇರಿದ್ದ ಅಪಾರ ಜನಸ್ತೋಮ ಹಾಗೂ ರಾಜ್ಯದೆಲ್ಲೆಡೆ ವ್ಯಕ್ತವಾದ ಸಂತಾಪ ಮಾನ್ಪಡೆಯವರು ಹೊಂದಿದ್ದ ಜನಪರ ಕಾಳಜಿಯ ಅಭಿವ್ಯಕ್ತಿಯಾಗಿತ್ತು.

ಕಾಮ್ರೆಡ್ ಮಾರುತಿರಾವ್ ಮಾನ್ಪಡೆಯವರು ಇಡೀ ರಾಜ್ಯ ಕಂಡ ಅಪರೂಪದ ದಿಟ್ಟ ರೈತ ನಾಯಕ. ರಾಜ್ಯದ ನೀರಾವರಿ ಯೋಜನೆಗಳು ಮತ್ತು ನೀರಾವರಿ ಹೋರಾಟಗಳ ಕುರಿತು ಅಪಾರ ಜ್ಞಾನ ಹೊಂದಿದ್ದರು. ತೊಗರಿ ಬೆಲೆಗಾಗಿ, ಬಗರ್‌ಹುಕುಂ ಸಾಗುವಳಿ ಸಕ್ರಮಕ್ಕಾಗಿ, ಕೃಷ್ಣ ನದಿ ನೀರು ಬಳಕೆಯ ನೀರಾವರಿಗಾಗಿ, ವಿದ್ಯುತ್ ಖಾಸಗೀಕರಣ, ಕೃಷಿ ಉತ್ಪನ್ನಗಳ ಅಮದು ಮುಂತಾದ ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು ಸೇರಿದಂತೆ ಹಲವಾರು ರೈತ ಹೋರಾಟ ಪ್ರಶ್ನೆಗಳನ್ನು ಕೈಗೆತ್ತಿಕೊಂಡು ರೈತ ಸಮುದಾಯಕ್ಕೆ ನ್ಯಾಯ-ಪರಿಹಾರ ಒದಗಿಸುವುದರಲ್ಲಿ ನಿರತರಾಗಿದ್ದ ರಾಜಿರಹಿತ ಹೋರಾಟಗಾರ ಅವರಾಗಿದ್ದರು. ತೊಗರಿ ಬೆಳೆಗೆ ಸಿಗಬೇಕಾದ ವೈಜ್ಞಾನಿಕ ಬೆಲೆ ವಿಷಯದ ಹೋರಾಟದ ಚಾಂಪಿಯನ್ ಆಗಿ ಮನೆ ಮಾತಾಗಿದ್ದ ಮಾನ್ಪಡೆಯವರು ಕೃಷ್ಣ ಜಲ ಭಾಗ್ಯ ನಿಗಮ ರಚನೆಗೆ ಒತ್ತಡ ಹೇರಿದ ಪ್ರಮುಖ ಶಕ್ತಿಯಾಗಿದ್ದರು. ವಿಶ್ವ ಬ್ಯಾಂಕ್‌ನ ಸಾಲದ ಷರುತ್ತಗಳಿಗೆ ಕೃಷ್ಣ ಜಲ ಭಾಗ್ಯ ನಿಗಮ ಈಡಾಗದಂತೆ ರೈತರ ಬೃಹತ್ ಸಮಾವೇಶವನ್ನು ಸಂಘಟಿಸಿದ್ದರು.

ರೈತ – ಕೃಷಿ ಕೂಲಿಕಾರರ ಪ್ರಶ್ನೆಗಳಿಗೆ ಮಾತ್ರವೇ ಅಲ್ಲದೇ ರಾಜ್ಯದ ಪಂಚಾಯತಿ, ಅಂಗನವಾಡಿ ಕಾರ್ಮಿಕರನ್ನು ಹಾಗೂ ಸಾಮಾಜಿಕವಾಗಿ ದಮನಕ್ಕೀಡಾಗಿದ್ದ ಶೋಷಿತ ದಲಿತ, ಮಹಿಳೆಯರನ್ನು ಕೂಡ ಸಂಘಟಿಸುವಲ್ಲಿ ಮುಂಚೂಣಿ ಪಾತ್ರವನ್ನು ಮಾರುತಿ ಮಾನ್ಪಡೆ ವಹಿಸಿದ್ದರು.

1995 ರಿಂದ 2017ರವರೆಗೆ ಸುಧೀರ್ಘ ಕಾಲಾವಧಿಗೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ೧೯೮೯ರಿಂದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಕ್ಕೆ ಕೂಡ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಸುಮಾರು 40 ವರ್ಷಗಳ ಕಾಲದ ಅವರ ಹೋರಾಟದಿಂದ ರಾಜ್ಯದ ಮತ್ತು ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಹಾಗೂ ಇಡೀ ಉತ್ತರ ಕರ್ನಾಟಕದ ಒಬ್ಬ ಪ್ರಮುಖ ಕಮ್ಯುನಿಸ್ಟ್ ಮುಖಂಡರಾಗಿ ಗುರುತಿಸಲ್ಪಟ್ಟಿದ್ದರು.

ಕರಿ ಲಿಂಗೇಶ್ವರ ಯುವ ರೈತ ಸಂಘದ ಮೂಲಕ ಸಾರ್ವಜನಿಕ ಜೀವನ ಪ್ರಾರಂಬಿಸಿದ ಮಾರುತಿ ಮಾನ್ಪಡೆಯವರು ಯಶವಂತ ಹಲಸೂರು, ವಿ.ಎನ್ ಹಳಕಟ್ಟಿ, ಗಂಗಾಧರ ನಮೋಶಿ, ಚಂದ್ರಶೇಖಕರ ಬಾಳೆ, ಪಿ ರಾಮಚಂದ್ರರಾವ್‌ರವರ ಒಡನಾಟವೂ ಸೇರಿದಂತೆ ರೈತ ಹಾಗೂ ಕಮ್ಯುನಿಸ್ಟ್ ಚಳುವಳಿಯ ಪ್ರಭಾವಕ್ಕೆ ಒಳಗಾಗಿ ತಮ್ಮ ನೌಕರಿಗೆ ರಾಜೀನಾಮೆ ನೀಡಿ ರೈತ ಚಳವಳಿಯ ಪೂರ್ಣ ಕಾಲದ ಕಾರ್ಯಕರ್ತರಾಗಿ ಗುಲ್ಬರ್ಗ ಜಿ¯ಯಿಂದ ಕೆಲಸ ಆರಂಭಿಸಿದರು. ಶೋಷಿತರ ಪರವಾದ ದಣಿವರಿಯದ ಕೆಲಸದ ಪರಿಣಾಮವಾಗಿ 1986 ರಲ್ಲಿ ಗುಲ್ಬರ್ಗ ಜಿ.ಪಂ ಸದಸ್ಯರಾಗಿ ಸಿಪಿಐಎಂನ್ನು ಪ್ರತಿನಿಧಿಸಿದ್ದರು. ಜಿ.ಪಂ ಸದಸ್ಯರಾಗಿ ಅವರು ಮಾಡಿದ ಕೆಲಸಗಳು ಇಡೀ ರಾಜ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಮಾದರಿಯಾಗಿತ್ತು.
ಕೆಲಸ ಕಾರ್ಯಗಳಲ್ಲಿ ಸಮರಶೀಲತೆ ಮತ್ತು ಬದ್ದತೆಯ ಹೋರಾಟಕ್ಕೆ ಮತ್ತೊಂದು ಹೆಸರಾಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು 8 ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡವರು. ಪಂಪ್‌ಸೆಟ್ ಬಳಕೆದಾರರಿಗೆ ಮೀಟರ್ ಅಳವಡಿಸಿ ವಿದ್ಯುತ್ ಖಾಸಗೀಕರಣದ ಪ್ರಯತ್ನ ಮಾಡುವ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಒಂದರಲ್ಲೇ ೩ ತಿಂಗಳು ಜೈಲಿನಲ್ಲಿದ್ದರು. ಒಟ್ಟಾರೆ ಅವರ ಹೋರಾಟದ ಜೀವನದಲ್ಲಿ ಸುಮಾರು 150 ದಿನಗಳಿಗೂ ಹೆಚ್ಚು ಜೈಲು ವಾಸ ಅನುಭವಿಸಿದ್ದರು. ರೈತ ವಿರೋಧಿ ಸುಗ್ರೀವಾಜ್ಞೆಗಳ ವಿರುದ್ಧ 2020.ಸೆಪ್ಟೆಂಬರ್ 25 ರಂದು ನಡೆದ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನ ರಸ್ತೆ ತಡೆ ಪ್ರತಿಭಟನೆಯಲ್ಲೂ ಬಂಧನಕ್ಕೆ ಒಳಗಾಗಿದ್ದರು.

ಚುನಾವಣಾ ಹೋರಾಟದಲ್ಲೂ ಅಭ್ಯರ್ಥಿಯಾಗಿ ಭಾಗವಹಿಸಿದ್ದ ಮಾರುತಿ ಮಾನ್ಪಡೆ ರವರು ಬೀದರ್ ಲೋಕಸಭಾ ಹಾಗೂ ಗುಲ್ಬರ್ಗ ಗ್ರಾಮೀಣ ಮೀಸಲು ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು.

1955ರಲ್ಲಿ ಸಾಮಾಜಿಕವಾಗಿ ಅಸ್ಪೃಶ್ಯತೆ ಅನುಭವಿಸುತ್ತಿದ್ದ ಬಡತನದ ಕುಟುಂಬದಲ್ಲಿ ಜನಿಸಿದ ಮಾರುತಿ ಮಾನ್ಪಡೆಯವರು ಸ್ವತಃ ಬರಗಾಲದ ಬವಣೆಗಳನ್ನು ಅನುಭವಿಸಿ ರೈತರ ಕಷ್ಟ -ನಷ್ಟಗಳನ್ನು ನೇರವಾಗಿ ಕಂಡವರು. 65 ವಯಸ್ಸಿನ ಹಿರಿಯರಾಗಿದ್ದರೂ ದೈಹಿಕ ಆರೋಗ್ಯ ಸ್ಥಿತಿಯನ್ನು ಲೆಕ್ಕಿಸದೇ ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸುಗ್ರಿವಾಜ್ಞೆಗಳನ್ನು ವಿರೋಧಿಸಿ ಸೆಪ್ಟೆಂಬರ್ 21 ರಿಂದ 26ರವರಿಗೆ ಬೆಂಗಳೂರಿನಲ್ಲಿ ನಡೆದ ಆಹೋರಾತ್ರಿ ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾಗಿ ತೊಡಗಿಸಿಕೊಂಡಿದ್ದರು. ಸೆಪ್ಟೆಂಬರ್ 28 ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಗುಲ್ಬರ್ಗಕ್ಕೆ ತೆರಳಿ ಹೈದರಾಬಾದ್ ಕರ್ನಾಟಕ ಬಂದ್ ಯಶಸ್ವಿ ಆಗಲು ಶ್ರಮಿಸಿದ್ದರು. ಈ ಕಾಲಾವಧಿಯಲ್ಲಿ ಆದ ಕೋವಿಡ್-19 ಸೋಂಕಿಗೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಉತ್ತಮ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಶೋಷಿತರ ಬಲವಾದ ಧ್ವನಿಯೊಂದು ನಿಂತು ಹೋಗಿದೆ.

ಸಂಗಾತಿ ಮಾನ್ಪಡೆರವರು ಜನರ ಸಮಸ್ಯೆಗಳನ್ನು ನಿಖರವಾಗಿ ಗುರುತಿಸಿ, ಹೋರಾಟದ ಸ್ಪರೂಪ ನೀಡುವುದರಲ್ಲಿ ಬಹಳ ಪರಿಣತಿ ಹೊಂದಿದ್ದ ಮತ್ತು ರಾಜ್ಯದ ಎಲ್ಲ ಜನಪರ ಚಳವಳಿಗಳಗೆ ಮಾರ್ಗದರ್ಶನ ನೀಡಬಲ್ಲ ಒಡನಾಡಿಯಾಗಿದ್ದರು. ಇವರ ನಿಧನ ರೈತ ಚಳುವಳಿಗೆ ಮಾತ್ರವೇ ಅಲ್ಲದೇ ಒಟ್ಟಾರೆ ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಅಪಾರ ನಷ್ಟ.

  • ಟಿ.ಯಶವಂತ
    ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಸದಸ್ಯರು.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...