HomeUncategorizedಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ- ತೇಜಸ್ವಿ ಯಾದವ್

- Advertisement -
- Advertisement -

ಬಿಹಾರ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಪ್ರತ್ಯೇಕ ಜಾಹೀರಾತುಗಳು ಪ್ರತಿಪಕ್ಷಗಳ ವ್ಯಂಗ್ಯಕ್ಕೆ ಕಾರಣವಾಗಿದ್ದವು. ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಹೊರಡಿಸಿದ ಪ್ರತ್ಯೇಕ ಪೋಸ್ಟರ್ ಮತ್ತು ಜಾಹೀರಾತುಗಳ ಬಗ್ಗೆ ಲೇವಡಿ ಮಾಡಿದ್ದರು.

ಹೊಸ ಸರ್ಕಾರಕ್ಕೆ ಇಂದು ಮತದಾನ ಆರಂಭವಾಗಿರುವ ಬಿಹಾರದಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇತ್ತೀಚಿನ ಪ್ರಚಾರ ಭಿತ್ತಿಪತ್ರಗಳು ಮತ್ತು ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಣಿಸಿಕೊಂಡು ಬಿಹಾರದಲ್ಲಿ ಜೆಡಿಯು, ಬಿಜೆಪಿ ನಡುವಿನ ಮುನಿಸಿಗೆ ತೇಪೆ ಹಚ್ಚುವ ಕಾರ್ಯ ಮಾಡುತ್ತಿದೆ.

ನಿತೀತ್‌ ಕುಮಾರ್‌ ಅವರ ರಾಜಕೀಯ ಪ್ರತಿಸ್ಪರ್ಧಿಗಳಾದ ಚಿರಾಗ್ ಪಾಸ್ವಾನ್ ಮತ್ತು ತೇಜಸ್ವಿ ಯಾದವ್ ಅವರು ’ಬಿಹಾರದಲ್ಲಿ ನಿತೀಶ್‌ ಕುಮಾರ್‌ ಜನಪ್ರಿಯತೆ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಉತ್ತಮ ಸಾಕ್ಷಿ. ಆಡಳಿತಾರೂಢ ಪಕ್ಷವು ಅವರನ್ನು ಜಾಹೀರಾತುಗಳಿಂದ ಕೈಬಿಟ್ಟಿದೆ’ ಎಂದು ವ್ಯಂಗ್ಯವಾಡಿದ್ದರು.

ಈ ವ್ಯಂಗ್ಯಗಳಿಗೆ ಉತ್ತರ ಕೊಡುವ ಪ್ರಯತ್ನದಲ್ಲಿ ಎನ್‌ಡಿಎ ಹೊಸ ಜಾಹೀರಾತುಗಳನ್ನ ಬಿಡುಗಡೆ ಮಾಡಿದೆ. ಈ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿ ಹಾಲಿ ಸಿಎಂ ನಿತೀಶ್ ಕುಮಾರ್ ಜೊತೆಗಿರುವ ಜಾಹೀರಾತುಗಳು, ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ub575seg

ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಕಾಣಿಸಿಕೊಂಡಿರುವ ಹೊಸ ಜಾಹೀರಾತುಗಳಲ್ಲಿ, ಪಿಎಂ ಮೋದಿ ಮತ್ತು ನಿತೀಶ್ ಕುಮಾರ್ ಇಬ್ಬರು ಇದ್ದಾರೆ. ಆದರೆ, ಒಂದು ಜಾಹೀರಾತಿನಲ್ಲಿ, ನಿತೀಶ್ ಕುಮಾರ್ ಅವರನ್ನು ಏಕೈಕ ಎನ್‌ಡಿಎ ಮುಖವಾಗಿ ಗುರುತಿಸಲಾಗಿದ್ದು, ಉಳಿದವರೆಲ್ಲಾ ಬಿಜೆಪಿ ನಾಯಕರಿದ್ದಾರೆ.

0t3e8r3g

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

“ಬಿಜೆಪಿ ಹೈ ತೋ ಭರೋಸಾ ಹೈ (ಬಿಜೆಪಿ ಇರುವಲ್ಲಿ, ನಂಬಿಕೆ ಇದೆ)” ಎಂಬ ಸಂದೇಶವನ್ನು ಹೊಂದಿರುವ ಜಾಹೀರಾತು ಕೇಂದ್ರ ಸರ್ಕಾರದ ಯೋಜನೆಗಳನ್ನು ಪಟ್ಟಿ ಮಾಡಿ, ಬಿಹಾರಕ್ಕೂ ಅದೇ ಭರವಸೆ ನೀಡುತ್ತದೆ ಎಂದಿದೆ.

ಈ ಹಿಂದಿನ ಜಾಹೀರಾತುಗಳಲ್ಲಿ ‘ಬಿಜೆಪಿ ಹೈ ತೊ ಭರೋಸಾ ಹೈ’ (ಬಿಜೆಪಿ ಇದ್ದೆಡೆ ನಂಬಿಕೆ ಇರುತ್ತೆ) ಎಂಬ ಸಾಲಿನ ಜೊತೆಗೆ, ನರೇಂದ್ರ ಮೋದಿ ಅವರ ಚಿತ್ರ ಎದ್ದು ಕಾಣುವಂತಿತ್ತು. ಬಿಹಾರದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ಮತ್ತು 19 ಲಕ್ಷ ಉದ್ಯೋಗಾವಕಾಶಗಳು ಎಂಬ ಚುನಾವಣಾ ಭರವಸೆಗಳು ಕಾಣಿಸಿಕೊಂಡಿದ್ದವು, ಆದರೆ ಜಾಹೀರಾತಿನಲ್ಲಿ ಎಲ್ಲಿಯೂ ನಿತೀಶ್ ಕುಮಾರ್‌ ಬಗ್ಗೆ ಪ್ರಸ್ತಾಪವಿರಲಿಲ್ಲ.

0pf1eo3o

ಇತ್ತ ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತುಗಳಲ್ಲಿ ಎಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಉಲ್ಲೇಖವಿರಲಿಲ್ಲ. ಈ ಚಿತ್ರವನ್ನು ಆರ್‌ಜೆಡಿ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡು ವ್ಯಂಗ್ಯವಾಡಿತ್ತು.

0p55fkrg

ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಚುನಾವಣಾ ಕಾರ್ಯಕ್ರಮದ ದಿನದಂದು ಮುಖ್ಯಮಂತ್ರಿ ನಿತೀಶ್‌ಕುಮಾರ್ ಬಿಡುಗಡೆ ಮಾಡಿದ್ದ ಜಾಹೀರಾತಿನಲ್ಲಿ ಕೂಡ ನಿತೀಶ್ ತಮ್ಮ ಚಿತ್ರವನ್ನಷ್ಟೇ ಹಾಕಿಸಿಕೊಂಡಿದ್ದರು.


ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...