Homeಮುಖಪುಟಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರ ಆರಂಭವಾಗಿದ್ದು, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಬಿಹಾರದ ವಾಲ್ಮೀಕಿ ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಯೋಜನೆಯಿಲ್ಲದ ಲಾಕ್‌ಡೌನ್ ಸಣ್ಣ ವ್ಯಾಪಾರಿಗಳು, ಕಾರ್ಮಿಕರು ಮತ್ತು ರೈತರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಪ್ರಧಾನಿ ಮೋದಿ ಈಗ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭಾಷಣಗಳಲ್ಲಿ ಹೇಳುತ್ತಿಲ್ಲ. ಅವರು ಸುಳ್ಳು ಹೇಳಿದ್ದಾರೆಂದು ಜನರಿಗೆ ತಿಳಿದಿದೆ. ಈಗ ಪ್ರಧಾನಿ ಇಲ್ಲಿಗೆ ಬಂದು ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಹೇಳಿದರೆ, ಜನರೇ ಅವರನ್ನು ಓಡಿಸುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

‘ಕಾಂಗ್ರೆಸ್ ಪಕ್ಷವು ಈವರೆಗೂ ದೇಶಕ್ಕೆ ನಿರ್ದೇಶನ ನೀಡುತ್ತ ಬಂದಿದೆ. ನಾವು ನರೇಗಾ ಯೋಜನೆ ತಂದಿದ್ದೇವೆ. ಸಾಲ ಮನ್ನಾ ಮಾಡಿದ್ದೇವೆ. ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ಒಂದು ವಿಷಯ ನಮಗೆ ತಿಳಿದಿಲ್ಲ. ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ’ ಎಂದು ರಾಹುಲ್ ಗಾಂಧಿ‌ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರವು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಪರವಾಗಿದೆ. ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ಗಳ ಉದ್ದೇಶ ಎರಡು ಒಂದೇ ಆಗಿತ್ತು. ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರನ್ನು ನಾಶಪಡಿಸುವ ಗುರಿಯನ್ನು ಹೊಂದಿದ್ದವು’ ಎಂದು ಆರೋಪಿಸಿದ್ದಾರೆ.

“ಅವರಿಗೆ ಬಿಹಾರದಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲ. ಇದು ವಾಸ್ತವ. ರಾಜ್ಯದ ರೈತರು ಮತ್ತು ಯುವಕರೊಂದಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮಸ್ಯೆ ಇರುವುದು ನಿಮ್ಮ ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ಅವರೊಂದಿಗೆ. ಅವರುಗಳು ನಿಮಗೆ ಸತ್ಯವನ್ನು ಹೇಳುವುದಿಲ್ಲ. ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದರು” ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಲಕ್ಷಾಂತರ ಬಿಹಾರ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದನ್ನು ನೀವು ನೋಡಿದ್ದೀರಿ. ಇದು ಚುನಾವಣಾ ಸಮಯ, ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ ನೀವು ಅದನ್ನು ಮರೆಯಬಾರದು. ದಸರಾದಲ್ಲಿ ರೈತರು ಮತ್ತು ಕಾರ್ಮಿಕರು ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸಿ ಕೋಪ ಹೊರಹಾಕಿದ್ದಾರೆ. ದೇಶದ ರೈತರು ಮತ್ತು ಯುವಕರು ಪ್ರಧಾನಿಯವರ ವಿರುದ್ಧ ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ “ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ. ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.


ಇದನ್ನೂ ಓದಿ: ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...