Homeಮುಖಪುಟಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರ ಆರಂಭವಾಗಿದ್ದು, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಬಿಹಾರದ ವಾಲ್ಮೀಕಿ ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಯೋಜನೆಯಿಲ್ಲದ ಲಾಕ್‌ಡೌನ್ ಸಣ್ಣ ವ್ಯಾಪಾರಿಗಳು, ಕಾರ್ಮಿಕರು ಮತ್ತು ರೈತರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಪ್ರಧಾನಿ ಮೋದಿ ಈಗ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭಾಷಣಗಳಲ್ಲಿ ಹೇಳುತ್ತಿಲ್ಲ. ಅವರು ಸುಳ್ಳು ಹೇಳಿದ್ದಾರೆಂದು ಜನರಿಗೆ ತಿಳಿದಿದೆ. ಈಗ ಪ್ರಧಾನಿ ಇಲ್ಲಿಗೆ ಬಂದು ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಹೇಳಿದರೆ, ಜನರೇ ಅವರನ್ನು ಓಡಿಸುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

‘ಕಾಂಗ್ರೆಸ್ ಪಕ್ಷವು ಈವರೆಗೂ ದೇಶಕ್ಕೆ ನಿರ್ದೇಶನ ನೀಡುತ್ತ ಬಂದಿದೆ. ನಾವು ನರೇಗಾ ಯೋಜನೆ ತಂದಿದ್ದೇವೆ. ಸಾಲ ಮನ್ನಾ ಮಾಡಿದ್ದೇವೆ. ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ಒಂದು ವಿಷಯ ನಮಗೆ ತಿಳಿದಿಲ್ಲ. ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ’ ಎಂದು ರಾಹುಲ್ ಗಾಂಧಿ‌ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರವು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಪರವಾಗಿದೆ. ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ಗಳ ಉದ್ದೇಶ ಎರಡು ಒಂದೇ ಆಗಿತ್ತು. ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರನ್ನು ನಾಶಪಡಿಸುವ ಗುರಿಯನ್ನು ಹೊಂದಿದ್ದವು’ ಎಂದು ಆರೋಪಿಸಿದ್ದಾರೆ.

“ಅವರಿಗೆ ಬಿಹಾರದಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲ. ಇದು ವಾಸ್ತವ. ರಾಜ್ಯದ ರೈತರು ಮತ್ತು ಯುವಕರೊಂದಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮಸ್ಯೆ ಇರುವುದು ನಿಮ್ಮ ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ಅವರೊಂದಿಗೆ. ಅವರುಗಳು ನಿಮಗೆ ಸತ್ಯವನ್ನು ಹೇಳುವುದಿಲ್ಲ. ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದರು” ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಲಕ್ಷಾಂತರ ಬಿಹಾರ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದನ್ನು ನೀವು ನೋಡಿದ್ದೀರಿ. ಇದು ಚುನಾವಣಾ ಸಮಯ, ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ ನೀವು ಅದನ್ನು ಮರೆಯಬಾರದು. ದಸರಾದಲ್ಲಿ ರೈತರು ಮತ್ತು ಕಾರ್ಮಿಕರು ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸಿ ಕೋಪ ಹೊರಹಾಕಿದ್ದಾರೆ. ದೇಶದ ರೈತರು ಮತ್ತು ಯುವಕರು ಪ್ರಧಾನಿಯವರ ವಿರುದ್ಧ ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ “ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ. ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.


ಇದನ್ನೂ ಓದಿ: ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...