Homeಮುಖಪುಟಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಸೀನು ರಾಮಸಾಮಿ ಟ್ವೀಟ್ ಮಾಡಿ, "ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚಿರಿತ್ರೆ ಆಧಾರಿತ “800” ತಮಿಳು ಚಲನಚಿತ್ರದ ನಿರ್ದೇಶಕ ಆರ್.ಸೀನು ರಾಮಸಾಮಿಗೆ ಜೀವ ಬೆದರಿಕೆ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಸೀನು ರಾಮಸಾಮಿ ಟ್ವೀಟ್ ಮಾಡಿ, “ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಶ್ರೀಲಂಕಾದ ಖ್ಯಾತ  ಕ್ರಿಕೆಟ್ ಬೌಲರ್ ಮುತ್ತಯ್ಯ ಮುರುಳೀಧರನ್ ಬಯೋಪಿಕ್ ತಮಿಳಿನಲ್ಲಿ ನಿರ್ಮಾಣವಾಗುತ್ತಿತ್ತು. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುತ್ತಯ್ಯ ಮುರುಳೀಧರನ್ ಪತ್ರ ಬರೆದು ಈ ಚಿತ್ರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು.

ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದರು.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿತ್ತು.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...