Homeಮುಖಪುಟಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಸೀನು ರಾಮಸಾಮಿ ಟ್ವೀಟ್ ಮಾಡಿ, "ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚಿರಿತ್ರೆ ಆಧಾರಿತ “800” ತಮಿಳು ಚಲನಚಿತ್ರದ ನಿರ್ದೇಶಕ ಆರ್.ಸೀನು ರಾಮಸಾಮಿಗೆ ಜೀವ ಬೆದರಿಕೆ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಸೀನು ರಾಮಸಾಮಿ ಟ್ವೀಟ್ ಮಾಡಿ, “ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಶ್ರೀಲಂಕಾದ ಖ್ಯಾತ  ಕ್ರಿಕೆಟ್ ಬೌಲರ್ ಮುತ್ತಯ್ಯ ಮುರುಳೀಧರನ್ ಬಯೋಪಿಕ್ ತಮಿಳಿನಲ್ಲಿ ನಿರ್ಮಾಣವಾಗುತ್ತಿತ್ತು. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುತ್ತಯ್ಯ ಮುರುಳೀಧರನ್ ಪತ್ರ ಬರೆದು ಈ ಚಿತ್ರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು.

ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದರು.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿತ್ತು.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...