Homeಮುಖಪುಟಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

ಸೀನು ರಾಮಸಾಮಿ ಟ್ವೀಟ್ ಮಾಡಿ, "ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಜೀವನ ಚಿರಿತ್ರೆ ಆಧಾರಿತ “800” ತಮಿಳು ಚಲನಚಿತ್ರದ ನಿರ್ದೇಶಕ ಆರ್.ಸೀನು ರಾಮಸಾಮಿಗೆ ಜೀವ ಬೆದರಿಕೆ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಸೀನು ರಾಮಸಾಮಿ ಟ್ವೀಟ್ ಮಾಡಿ, “ನನ್ನ ಜೀವಕ್ಕೆ ಅಪಾಯವಿದೆ. ಹಾಗಾಗಿ ಮುಖ್ಯಮಂತ್ರಿಗಳು ದಯಮಾಡಿ ನನಗೆ ಸಹಾಯ ಮಾಡಿ. ಇದು ತುಂಬಾ ತುರ್ತು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಶ್ರೀಲಂಕಾದ ಖ್ಯಾತ  ಕ್ರಿಕೆಟ್ ಬೌಲರ್ ಮುತ್ತಯ್ಯ ಮುರುಳೀಧರನ್ ಬಯೋಪಿಕ್ ತಮಿಳಿನಲ್ಲಿ ನಿರ್ಮಾಣವಾಗುತ್ತಿತ್ತು. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಇದರ ನಡುವೆಯೇ ಕೆಲವರು ಇದನ್ನು ವಿರೋಧಿಸಿ, ವಿಜಯ್ ಸೇತುಪತಿ ಈ ಸಿನಿಮಾವನ್ನು ಒಪ್ಪಿಕೊಂಡಿರುವುದಕ್ಕೆ, ಅವರನ್ನು ಮತ್ತು ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನವನ್ನು ಕೈಗೊಂಡಿದ್ದರು. ಹಾಗಾಗಿ ಈ ಚಿತ್ರಕ್ಕೆ ತಮಿಳುನಾಡಿನ ಹಲವೆಡೆ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಮುತ್ತಯ್ಯ ಮುರುಳೀಧರನ್ ಪತ್ರ ಬರೆದು ಈ ಚಿತ್ರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು.

ಸ್ವತಃ ಪತ್ರಬರೆದಿರುವ ಮಾಜಿ ಕ್ರಿಕೆಟಿಗ, “ನನ್ನ ಜೀವನ ಚರಿತ್ರೆಯಾಧಾರಿತ ಚಿತ್ರ ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಇದಕ್ಕೆ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಈ ಸಿನಿಮಾವನ್ನು ಕೈಬಿಡುವಂತೆ ವಿಜಯ್ ಸೇತುಪತಿಗೆ ತೀವ್ರ ಒತ್ತಡ ಬರುತ್ತಿರುವುದನ್ನು ಗಮನಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜೊತೆಗೆ ತಮಿಳು ಚಲನಚಿತ್ರದಲ್ಲಿ ಒಬ್ಬ ಉತ್ತಮ ಕಲಾವಿದನ ಭವಿಷ್ಯ ಇದರಿಂದ ಹಾಳಾಗುವುದು ಬೇಡ ಎಂಬ ಕಾರಣಕ್ಕೆ ಅವರನ್ನು ಈ ಚಿತ್ರದಿಂದ ಹೊರಗುಳಿಯುವಂತೆ ಕೇಳಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದರು.

“ಪ್ರತಿ ಬಾರಿಯೂ ಇಂತಹ ತಡೆಗಳನ್ನು ಎದುರಿಸಿಯೇ ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ಭವಿಷ್ಯದ ಪೀಳಿಗೆಗೆ ಮತ್ತು ಕ್ರಿಕೆಟ್ ಆಡಬಯಸುವ ಯುವಕರಿಗೆ ಸ್ಪೂರ್ತಿಯಾಗಲೆಂದೇ ನನ್ನ ಜೀವನ ಚರಿತ್ರೆಯನ್ನು ಚಿತ್ರವಾಗಿಸಲು ಸಮ್ಮತಿಸಿದ್ದೆ. ಆದರೆ ಈಗ ಅದಕ್ಕೂ ತೊಡಕು ಉಂಟಾಗುತ್ತಿದೆ. ಆದರೆ ಈ ಸಿನಿಮಾವನ್ನು ಮುಂದಿನ ಜನಾಂಗಕ್ಕೆ ಸ್ಪೂರ್ತಿಯಾಗುವಂತೆ ತಲುಪಿಸುವುದಾಗಿ ನಿರ್ಮಾಪಕರು ದೃಢವಾದ ಆಶ್ವಾಸನೆಯನ್ನು ನೀಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ವಿವಾದ ಏರ್ಪಟ್ಟಾಗಿನಿಂದ ನನಗೆ ಬೆಂಬಲ ನೀಡಿದ ಪತ್ರಿಕೋದ್ಯಮಕ್ಕೂ, ಗಣ್ಯರಿಗೂ, ಅಭಿಮಾನಿಗಳಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಬರೆದಿದ್ದಾರೆ.

ಮುತ್ತಯ್ಯ ಮುರುಳೀಧರನ್ ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇವರ ಬಯೋಪಿಕ್‌ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

“ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ನಿನ್ನೆ ಹೇಳಿದ್ದರು.

ಹಿರಿಯ ನಿರ್ದೇಶಕ ಭಾರತಿರಾಜ, “ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದರು.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದರು.

ಈ ಎಲ್ಲಾ ಕಾರಣಗಳಿಂದ ಈ ಚಿತ್ರದಿಂದ ಹಿಂದೆ ಸರಿಯುವಂತೆ ಮುತ್ತಯ್ಯ ಪತ್ರ ಬರೆದಿರುವುದು, ವಿಜಯ್ ಸೇತುಪತಿ ಮತ್ತು ಮುತ್ತಯ್ಯ ಮುರುಳೀಧರನ್ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟುಮಾಡಿತ್ತು.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...