Homeಕರ್ನಾಟಕಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಮಂಗಳೂರು: ’ಸರ್ಕಾರಿ ಆಸ್ಪತ್ರೆ ಉಳಿಸಿ’ ಸಮಿತಿಯಿಂದ ಸಾಮೂಹಿಕ ಧರಣಿ!

ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ, ಅಥವಾ ದುರ್ಬಲಗೊಳಿಸಲಾಗುತ್ತಿದೆ.

- Advertisement -
- Advertisement -

ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣಕ್ಕೆ ಒಳಪಡಿಸುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರೀ ವೈದ್ಯಕೀಯ ಕಾಲೇಜುಗಳೂ ಸಹ ಖಾಸಗೀಕರಣದ ಬಿರುಗಾಳಿಗೆ ಸಿಲುಕಿ ನಿರ್ಣಾಮವಾಗುತ್ತಿವೆ. ಇದನ್ನು ಆಳುವ ಸರ್ಕಾರಗಳು ಉದ್ದೇಶಪೂರ್ವಕವಾಗಿಯೇ ಮಾಡುತ್ತಿವೆ. ಪ್ರಭುತ್ವಕ್ಕೆ ಎಂದಿಗೂ ಜನಸಾಮಾನ್ಯರ ಚಿಂತೆಯಿಲ್ಲ ಎಂಬುದನ್ನು ಇಂತಹ ಪ್ರಕ್ರಿಯೆಗಳ ಮೂಲಕ ಆಗಾಗ ಸಾಬೀತುಪಡಿಸುತ್ತಲೇ ಇರುತ್ತವೆ.

ಇದರ ವಿರುದ್ಧ ಇಂದಿನ ನಾಗರೀಕ ಸಮಾಜ ಪ್ರತಿಭಟಿಸದಿದ್ದರೆ ಮಧ್ಯಮ ಮತ್ತು ಕೆಳವರ್ಗಗಳು ಸಹಜ ಬದುಕು ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಎದುರು ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯಿಂದ ಸಾಮೂಹಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಕಚೇರಿಯ ಮುಂಭಾಗ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ (ತೊಕ್ಕೊಟ್ಟು ಬಸ್‌ನಿಲ್ದಾಣ) ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ಜನಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿರುವ ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದಕ್ಷಿಣ ಕನ್ನಡ ಇದರ ವತಿಯಿಂದ ಆಯೋಜಿಸಲಾಗಿದೆ.

“ಆರೋಗ್ಯ ಇಲ್ಲದಿದ್ದರೆ ಬದುಕಿಲ್ಲ. ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಆರೋಗ್ಯದ ಚಿಕಿತ್ಸೆಯ ಕುರಿತು ಚಿಂತಿತನಾಗಿದ್ದಾನೆ. ಅನಾರೋಗ್ಯ ಕಾಡಿದರೆ ಚಿಕಿತ್ಸೆ ಪಡೆಯುವುದು ಹೇಗೆ? ಎಂದು ಪ್ರತಿಯೊಬ್ಬರೂ ಆತಂಕಗೊಳ್ಳುವಂತಾಗಿದೆ. ಈ ರೀತಿಯ ಆತಂಕಕ್ಕೆ ಕಾರಣ ನಮ್ಮ ಸರಕಾರಗಳು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣಕ್ಕೆ ಒಡ್ಡಿರುವುದು” ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಬಯೋಪಿಕ್: 800 ಚಿತ್ರದ ನಿರ್ದೇಶಕರಿಗೆ ಜೀವ ಬೆದರಿಕೆ!

“ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು” ಎಂಬ ಸಂವಿಧಾನದ ಆಶಯಗಳು ಈಗ ಕಾಗದದಲ್ಲಷ್ಟೇ ಉಳಿದಿದೆ. ಸರಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಅಥವಾ ದುರ್ಬಲಗೊಳಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಪರ ಆರೋಗ್ಯ ನೀತಿಗಳನ್ನು ರೂಪಿಸಲಾಗುತ್ತಿದೆ. ಆಯುಷ್ಮಾನ್ ಸಹಿತ ಸರಕಾರಿ ಆರೋಗ್ಯ ವಿಮೆಗಳು ಖಾಸಗಿ ಆರೋಗ್ಯ ವ್ಯಾಪಾರಿಗಳ ಖಜಾನೆ ತುಂಬುತ್ತಿವೆ.

ಜನಸಂಖ್ಯಾವಾರು ರಾಜ್ಯ ಸರಕಾರದ ನಿಯಮಗಳ ಪ್ರಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 120 ಪ್ರಾಥಮಿಕ ಆರೋಗ್ಯ ಕೇಂದ್ರ, 40 ಹಾಸಿಗೆಗಳ 32 ಸಮುದಾಯ ಆಸ್ಪತ್ರೆ, 100 ಹಾಸಿಗೆಗಳ 8 ತಾಲೂಕು ಆಸ್ಪತ್ರೆ ಇರಬೇಕು. ಆದರೆ ಈಗ 80 ಪ್ರಾಥಮಿಕ ಆರೋಗ್ಯ ಕೇಂದ್ರ 7 ಸಮುದಾಯ ಆಸ್ಪತ್ರೆ, 4 ತಾಲೂಕು ಆಸ್ಪತ್ರೆಗಳು ಮಾತ್ರ ಇದೆ. ಇರುವ ಆಸ್ಪತ್ರೆಗಳಲ್ಲೂ ಅರ್ಧದಷ್ಟು ವೈದ್ಯರ, ಸಿಬ್ಬಂದಿಗಳು ಸ್ಥಾನ ಖಾಲಿ ಬಿದ್ದಿದೆ. ತಜ್ಞ ವೈದ್ಯರಂತೂ ಇಲ್ಲವೇ ಇಲ್ಲ ಅನ್ನುವಷ್ಟು ವಿರಳ. ಜಿಲ್ಲಾಸ್ಪತ್ರೆ ವೆನ್ಲಾಕ್ ಶತಮಾನ ಕಳೆದರೂ ಅದೇ ಹಳೆಯ ಸ್ಥಿತಿಯಲ್ಲಿದೆ. ಇದು ಜನಸಾಮಾನ್ಯರ ಆರೋಗ್ಯದ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರತ್ಯೇಕ ಜಾಹೀರಾತು: ಬಿಹಾರದಲ್ಲಿ ಜೆಡಿಯು-ಬಿಜೆಪಿ ನಡುವಿನ ಮುನಿಸಿಗೆ ತೇಪೆ?

“ಖಾಸಗಿ ಆಸ್ಪತ್ರೆಗಳ, ಮೆಡಿಕಲ್ ಕಾಲೇಜುಗಳ ಲಂಗುಲಗಾಮಿಲ್ಲದ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ. 8 ಖಾಸಗಿ ಮೆಡಿಕಲ್ ಕಾಲೇಜುಗಳಿರುವ ನಮ್ಮ ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ನಮ್ಮ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು.

ಖಾಸಗಿ ಮೆಡಿಕಲ್ ಕಾಲೇಜುಗಳ ಆಡುಂಬೊಲವಾಗಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯ. ನಿಯಮಗಳ ಪ್ರಕಾರ 15 ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕಾದಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಇದೆ. 40 ಹಾಸಿಗೆಗಳ 4 ಸಮುದಾಯ ಇರಬೇಕಾದ ಆಸ್ಪತ್ರೆಯಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆಯೂ ಕ್ಷೇತ್ರದಲ್ಲಿ ಇಲ್ಲ. ಉಳ್ಳಾಲದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದ್ದರೂ ಸಮುದಾಯ ಆಸ್ಪತ್ರೆಯಾಗಿ ಇನ್ನೂ ಮೇಲ್ದರ್ಜೆಗೆ ಏರಿಸಲಾಗಿಲ್ಲ. ಉಳ್ಳಾಲ ತಾಲೂಕಾಗಿ ಘೋಷಿಸಲ್ಪಟ್ಟಿದ್ದರೂ 100 ಹಾಸಿಗೆಗಳ ತಾಲೂಕು ಆಸ್ಪತ್ರ ಸ್ಥಾಪನೆ ಕುರಿತು ಸಣ್ಣ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ.

ಇದರಿಂದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಆಡಿದ್ದೇ ಆಟ ಎಂಬಂತಾಗಿದೆ. ಬಡರೋಗಿಗಳು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಲಿಕೆಯ ಸಾಧನದಂತಾಗಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ, ಸರಕಾರದ ವೈದ್ಯಕೀಯ ಅಧಿನಿಯಮದಂತೆ ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳು ಸ್ಥಾಪನೆಗೊಳ್ಳಬೇಕು. ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು. ವೆನ್‌ಲಾಕನ್ನು ಪೂರ್ಣ ಪ್ರಮಾಣದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಜನಾಂದೋಲನ ರೂಪಿಸಲು ನಿರ್ಧರಿಸಲಾಗಿದೆ ಎಂದು ಹೋರಾಟಗಾರರು ಹೇಳಿದರು.


ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...