Homeಮುಖಪುಟವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ವಿದ್ಯಾರ್ಥಿಗಳ ಕನಸು ನನಸಾಗಿಸುವ ಶಾಹೀನ್: ವಿದ್ಯಾರ್ಥಿಗಳ ಮನದಾಳದ ಮಾತು

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ- ವಿದ್ಯಾರ್ಥಿಗಳು

- Advertisement -
- Advertisement -

ಬೀದರ್ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಮತ್ತೊಮ್ಮೆ ಮುನ್ನೆಲೆಯ ಚರ್ಚೆಯಲ್ಲಿದೆ. ಶಾಹೀನ್ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ ನೀಟ್‌ನಲ್ಲಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್‍ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದರು.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಟಾಪರ್‌ಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಸಂಸ್ಥೆಯಲ್ಲಿ ಜಾತ್ಯತೀತ, ಧರ್ಮಾತೀತ ವಾತಾವರಣ ಇದೆ ಎಂದು ನೀಟ್ ಟಾಪರ್‌ ಕಾರ್ತಿಕ್ ರೆಡ್ಡಿ ಅಭಿಪ್ರಾಯಪಟ್ಟರು.

ಶಾಹೀನ್ ವಿದ್ಯಾಲಯದೊಳಗೆ ಯಾವುದೇ ರೀತಿಯ ಅಸಮಾನತೆ ಇಲ್ಲ. ಅಲ್ಲಿ ದ್ವೇಷದ ಪಾಠವೂ ಕಲಿಸುವುದಿಲ್ಲ. ಬದಲಾಗಿ, ಜಾತ್ಯತೀತ ಮೌಲ್ಯಗಳ ಮೇಲೆ ನಿಂತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ಸಾಧನೆ ಕುರಿತು ಪ್ರತಿಕ್ರಿಯಿಸಿದ ಅವರು, ಲಾಕ್‍ಡೌನ್ ಅವಧಿ ನನಗೆ ಅವಕಾಶವಾಗಿ ಪರಿಣಮಿಸಿತು. ಈ ಅವಧಿಯಲ್ಲಿ ನಿತ್ಯ 10-12 ಗಂಟೆಗಳು ಅಭ್ಯಾಸ ಮಾಡುತ್ತಿದೆ ಎಂದಿದ್ದಾರೆ. ನನ್ನ ಓದಿಗೆ ಶಾಹೀನ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನ ತುಂಬಾ ಸಹಾಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಇನ್ನು ಶಾಹೀನ್ ಶಿಕ್ಷಣ ಸಂಸ್ಥೆಯ ನೆರವಿನಿಂದ ವೈದ್ಯಕೀಯ ಸೀಟು ಪಡೆದ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಕುತೆಸ್ರಾ ಗ್ರಾಮದ ಮಹಮ್ಮದ್ ಅನಸ್ ಆರನೇ ಪ್ರಯತ್ನದಲ್ಲಿ ಪ್ರಸಕ್ತ ಸಾಲಿನ ನೀಟ್‍ನಲ್ಲಿ 663 ಅಂಕ (1,876ನೇ ರ್‍ಯಾಂಕ್) ಗಳಿಸಿ ಗಮನ ಸೆಳೆದಿದ್ದಾರೆ.

ರೈತರಾಗಿರುವ ಮಹಮ್ಮದ್ ಕಾಮಿಲ್ ಅವರ ನಾಲ್ಕನೆಯ ಪುತ್ರ ಮಹಮ್ಮದ್ ಅನಸ್, ಕುಟುಂಬದಲ್ಲೇ ವೈದ್ಯಕೀಯ ಕೋರ್ಸ್‍ಗೆ ಪ್ರವೇಶ ಪಡೆಯಲಿರುವವರಲ್ಲಿ ಮೊದಲಿಗರಾಗಿದ್ದಾರೆ. ಉತ್ತರಪ್ರದೇಶದ ವಿದ್ಯಾರ್ಥಿಯೊಬ್ಬರಿಂದ ಮಾಹಿತಿ ಪಡೆದು ನೀಟ್ ತರಬೇತಿಗಾಗಿ ಬೀದರ್‌ನ ಶಾಹೀನ್ ಕಾಲೇಜಿಗೆ ಬಂದೆ. ಇದೆಲ್ಲಾ ಸಾಧ್ಯವಾಗಿದ್ದು ಶಾಹೀನ್‌ನಿಂದ ಎಂದು ಹೆಮ್ಮೆಯಿಂದ ತಿಳಿಸುತ್ತಾರೆ.

ಶಾಹೀನ್‌ ಶಿಕ್ಷಣ ಸಂಸ್ಥೆಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸಲು ಸರ್ವ ಪ್ರಯತ್ನ ನಡೆಸುತ್ತಿದೆ. ಪ್ರಸಕ್ತ ಸಾಲಿನ ನೀಟ್‌ ದೀರ್ಘ ಕಾಲದ ರಿಪೀಟರ್‌ ತರಬೇತಿ ಹಾಗೂ ಇತರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರೂಪಾಯಿ ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ದೇಶದ ಸಂಸ್ಥೆಯ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಶಾಹೀನ್‌ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...