Homeಮುಖಪುಟಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಇನ್ನೂ ಬಾರದ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎನ್ನುತ್ತಿರುವ ಬಿಜೆಪಿ ಸರ್ಕಾರ ಕೊರೊನಾವನ್ನು ತನ್ನ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹಲವರು ಖಂಡಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಭರವಸೆ ನೀಡಿದ ಕೆಲವು ದಿನಗಳ ನಂತರ, ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ನಡೆಯಲಿರುವ 28 ವಿಧಾನಸಭಾ ಉಪಚುನಾವಣೆಗಾಗಿ ಅಲ್ಲಿನ ಆಡಳಿತಾರೂಢ ಬಿಜೆಪಿ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನ ಲಸಿಕೆ ನೀಡುವುದಾಗಿ ಘೋಷಿಸಿದೆ.

ಪ್ರತಿಪಕ್ಷ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇಡೀ ರಾಜ್ಯಕ್ಕೆ 52 ಅಂಶಗಳ ಅಭಿವೃದ್ಧಿ ಯೋಜನೆಯ ಭರವಸೆ ನೀಡಿದೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಆಡಳಿತಾರೂಢ ಬಿಜೆಪಿಯೂ ಸಹ ಉಪ-ಚುನಾವಣಾ ಪ್ರಣಾಳಿಕೆಯ ಭಾಗವಾಗಿ, ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ಸೇರಿದಂತೆ ಇಡೀ ರಾಜ್ಯಕ್ಕೆ ಕೆಲವು ಸಾಮಾನ್ಯ ಭರವಸೆಗಳನ್ನು ನೀಡಿದೆ.

ಕಾಂಗ್ರೆಸ್ ಪಕ್ಷವು ಸಾಲಮನ್ನಾ ಭರವಸೆಗೆ ಕೌಂಟರ್‌ ಆಗಿ ಬಿಜೆಪಿಯು ಉಚಿತ ಲಸಿಕೆಯ ಪ್ರಸ್ತಾವವನ್ನು ಮುಂದಿಟ್ಟಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದು ಗರಂ

ಬಿಜೆಪಿಯ ಭರವಸೆಯನ್ನು ಪ್ರಶ್ನಿಸಿದ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಭೂಪೇಂದ್ರ ಗುಪ್ತಾ, “ಇಡೀ ಜಗತ್ತು ಇನ್ನೂ ಕೊರೊನಾ ವೈರಸ್ ವಿರುದ್ಧ ಪ್ರಬಲವಾದ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕೆಲಸ ಮಾಡುತ್ತಿರುವಾಗ, ಬಿಜೆಪಿಯು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ನೀಡುವ ಭರವಸೆ ಹೇಗೆ ನೀಡುತ್ತಿದೆ? ಸಿಎಂ ಚೌಹಾನ್ ತಮ್ಮ ಜೂ಼ತ್‌ಕಿ ಸರ್ಕಾರ್ (ಸುಳ್ಳಿನ ಸರ್ಕಾರ) ನಡೆಸುವುದನ್ನು ನಿಲ್ಲಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಪ್ರಣಾಳಿಕೆಯನ್ನು ಅನುಪ್ಪೂರು ಜಿಲ್ಲೆಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮತ್ತು ಮಾಜಿ ಸಿಎಂ ಉಮಾ ಭಾರತಿ ರೈಸನ್ ಜಿಲ್ಲೆಯ ಸಾಂಚಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ಆ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳನ್ನು ಪರಿಹರಿಸಲು ನರ್ಮದಾ, ಬೆಟ್ವಾ, ಚಂಬಲ್ ಮತ್ತು ಪಾರ್ವತಿಯಿಂದ ನೀರನ್ನು ಈ ನದಿಗಳಿಗೆ ಹತ್ತಿರವಿರುವ ಪ್ರದೇಶಗಳಿಗೆ ಕೊಂಡೊಯ್ಯುವಂತಹ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಇದರಲ್ಲಿ ಭರವಸೆ ನೀಡಲಾಗಿದೆ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟವು ಉಚಿತ ಲಸಿಕೆಯ ಭರವಸೆ ನೀಡಿದ ನಂತರ ತಮಿಳುನಾಡು ಸರ್ಕಾರವೂ ಕೂಡ ಇದೇ ಭರವಸೆಯನ್ನು ನೀಡಿದೆ. ಬಿಜೆಪಿಯ ಈ ಧೋರಣೆಯನ್ನು ಖಂಡಿಸಿ ವಿರೋಧ ಪಕ್ಷಗಳೂ ಸೇರಿದಂತೆ ಅನೇಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೂ ಒಳಗಾಗಿತ್ತು. ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ ಎಂದು ಶಿವಸೇನೆ ಪ್ರಶ್ನೆ ಮಾಡಿತ್ತು. ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್? ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದರು. ಇನ್ನೂ ಕೆಲವರು ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇದು ಬಿಜೆಪಿಯ ಕೊಳಕು ರಾಜಕೀಯ ಎಂದು ಖಂಡಿಸಿದ್ದಾರೆ.

ಇನ್ನೂ ಬಾರದ ಲಸಿಕೆಯನ್ನು ಉಚಿತವಾಗಿ ಕೊಡುತ್ತೇವೆ ಎಂದಿರುವ ಬಿಜೆಪಿ ಸರ್ಕಾರ ಕೊರೊನಾ ಸಾಂಕ್ರಾಮಿಕ ರೋಗವನ್ನು ತನ್ನ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ಬಿಜೆಪಿಯ ಸ್ಪಷ್ಟ ಧೋರಣೆ ವ್ಯಕ್ತವಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳಲ್ಲಿ ಲಸಿಕೆ ಮರೀಚಿಕೆಯಾಗಬಹುದು. ಬೇಜವಾಬ್ದಾರಿಯುತ ಸರ್ಕಾರದ ಈ ನಿಲುವು ಭಾರತದ ಎಷ್ಟು ಸಾಮಾನ್ಯ ಜನರನ್ನು ಬಲಿತೆಗೆದುಕೊಳ್ಳಲಿದೆಯೋ ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೊನಾ ನೆಪ: 10ಸಾವಿರ ಕೋಟಿ ಹಗರಣ- ಎಎಪಿಯ ಪೃಥ್ವಿ ರೆಡ್ಡಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...