Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...