Homeಅಂಕಣಗಳುಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. ಆತ ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು.

- Advertisement -
- Advertisement -

ಅಶ್ಫಾಕುಲ್ಲಾ ಖಾನ್ ಬದುಕಿದ್ದಿದ್ದರೆ ಇದೇ ಅಕ್ಟೋಬರ್ 22ರಂದು ಅವರಿಗೆ 120 ವರ್ಷ ತುಂಬುತ್ತಿತ್ತು. ಉತ್ತರಪ್ರದೇಶದ ಶಹಜಹಾನಪುರ ಆತನ ಹುಟ್ಟೂರು. ಖಾನ್ ಬೆಳೆದದ್ದು ಗಾಂಧೀಜಿ ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ನೀಡದಂತೆ ಕರೆ ನೀಡಿ ಅಸಹಕಾರ ಚಳವಳಿ ಹೂಡಿದ್ದ ದಿನಗಳಲ್ಲಿ.

ಹಿಂದುಸ್ತಾನಿ ರಿಪಬ್ಲಿಕನ್ ಅಸೋಸಿಯೇಷನ್‍ನ (ಎಚ್.ಆರ್.ಎ) ಕ್ರಾಂತಿಕಾರಿ ತಲೆಯಾಳು ರಾಮಪ್ರಸಾದ್ ಬಿಸ್ಮಿಲ್ ಸಂಗಡ 1924ರಲ್ಲಿ ಕಾಕೋರಿ ರೈಲು ದರೋಡೆಯಲ್ಲಿ ಭಾಗವಹಿಸಿದ್ದ ಖಾನ್ ಕೇವಲ 27ನೆಯ ವಯಸ್ಸಿನಲ್ಲಿ ಬ್ರಿಟಿಷರ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಬ್ರಿಟಿಷ್ ವಿರೋಧಿ ಬೆಂಕಿಯುಂಡೆ.
ಕಾಕೋರಿಯಿಂದ ಲಖ್ನೋಗೆ ರೈಲುಗಾಡಿಯಲ್ಲಿ ಸಾಗಿಸಲಾಗುತ್ತಿದ್ದ ಬ್ರಿಟಿಷ್ ಸರ್ಕಾರಿ ಖಜಾನೆಯನ್ನು ಲೂಟಿ ಮಾಡಿ, ಆ ಹಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಬೇಕಾಗಿದ್ದ ಹತಾರುಗಳನ್ನು ಖರೀದಿಸುವುದು ಕಾಕೋರಿ ದರೋಡೆ ಹಿಂದಿನ ಕಾರ್ಯಸೂಚಿಯಾಗಿತ್ತು.

ಉರ್ದು ಕಾವ್ಯವೆಂದರೆ ಖಾನ್‍ಗೆ ಅಚ್ಚುಮೆಚ್ಚು. ವಾರಸಿ ಇಲ್ಲವೇ ಹಜರತ್ ಕಾವ್ಯನಾಮದೊಂದಿಗೆ ಬರೆಯುತ್ತಿದ್ದರು. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ರಾಮಪ್ರಸಾದ್ ಬಿಸ್ಮಿಲ್ ಕೂಡ ಸ್ವಾತಂತ್ರ್ಯ ಹೋರಾಟದ ಕೆಚ್ಚಿಗೆ ಮತ್ತು ಉರ್ದು ಕವಿತೆಗೆ ಹೆಸರಾಗಿದ್ದವರು. ಅವರ ಉರ್ದು ಕಾವ್ಯಪ್ರತಿಭೆ ಮತ್ತು ಕಲಿತನದ ಕತೆಗಳನ್ನು ಎಳೆಯ ಖಾನ್ ತನ್ನ ಅಣ್ಣನಿಂದ ಕೇಳಿ ಅರಿತಿದ್ದ. ಅವಕ್ಕೆ ಮಾರುಹೋಗಿ ಅಭಿಮಾನಿಯೇ ಆಗಿಬಿಟ್ಟಿದ್ದ. ಚೌರಿಚೌರಾ ಹಿಂಸಾತ್ಮಕ ಘಟನೆಯ ನಂತರ ಗಾಂಧೀಜಿ ತಮ್ಮ ಅಸಹಕಾರ ಚಳವಳಿಯನ್ನು ವಾಪಸು ತೆಗೆದುಕೊಂಡಿದ್ದರು. ಅವರ ಈ ಹೆಜ್ಜೆ ಸಾವಿರಾರು ಯುವ ಕ್ರಾಂತಿಕಾರಿಗಳಿಗೆ ತೀವ್ರ ನಿರಾಶೆ ಉಂಟು ಮಾಡಿತ್ತು. ಅಹಿಂಸಾತ್ಮಕ ಹಾದಿ ಕುರಿತು ಅವರಲ್ಲಿ ಭ್ರಮನಿರಸನ ಮೂಡಿಸಿತ್ತು. ಈ ಪೈಕಿ ಅಶ್ಫಾಕುಲ್ಲಾ ಖಾನ್ ಕೂಡ ಒಬ್ಬನಾಗಿದ್ದ. ರಾಮಪ್ರಸಾದ್ ಬಿಸ್ಮಿಲ್ ಸಂಘಟನೆಯನ್ನು (ಎಚ್.ಆರ್.ಎ) ಸೇರಲು ತವಕಿಸಿದ. ಆದರೆ ಸೇರಿಸಿಕೊಳ್ಳಲು ಆರಂಭದಲ್ಲಿ ಬಿಸ್ಮಿಲ್ ಉತ್ಸುಕತೆ ತೋರಲಿಲ್ಲ. ಶಹಜಹಾನಪುರದ ಇತರೆ ಪಠಾಣ ಕುಟುಂಬಗಳಂತೆ ಖಾನ್ ಕುಟುಂಬ ಕೂಡ ಸಿರಿವಂತಿಕೆ ಸೂಸಿತ್ತು. ತಂದೆ ಕೊತ್ವಾಲ ಹುದ್ದೆಯಲ್ಲಿದ್ದರು. ಅಂತಿಮವಾಗಿ ಇಬ್ಬರನ್ನೂ ಹತ್ತಿರ ತಂದದ್ದು ಉರ್ದು ಕವಿತೆಯೆಡೆಗಿನ ಕಡುಪ್ರೇಮ ಮತ್ತು ತಾಯ್ನೆಲವನ್ನು ದಾಸ್ಯದಿಂದ ಬಿಡಿಸುವ ಪಣ ತೊಟ್ಟ ನಿಗಿನಿಗಿ ದೇಶಭಕ್ತಿ. ಬ್ರಾಹ್ಮಣ ಮತ್ತು ಮುಸ್ಲಿಮ್ ತರುಣರಿಬ್ಬರು ಪ್ರಸಿದ್ಧ ಪ್ರಾಣಸ್ನೇಹಿತರಾಗಿ ಇತಿಹಾಸ ಸೇರಿದರು.

PC : Facebook

ಬಂದೂಕು, ಬಾಂಬುಗಳಂತಹ ಹತಾರುಗಳ ಖರೀದಿಗೆ ಹಣ ಹೊಂದಿಸಲು ಇಬ್ಬರೂ ಹೂಡಿದ ಹಂಚಿಕೆ ಕಾಕೋರಿ ರೈಲು ದರೋಡೆ. 1925ರ ಆಗಸ್ಟ್ ಒಂಬತ್ತರ ದರೋಡೆಯ ನಂತರ ಇವರಿಗೆ ಭಯೋತ್ಪಾದಕರು ಎಂಬ ಹಣೆಪಟ್ಟಿ ಹಚ್ಚುತ್ತದೆ ಬ್ರಿಟಿಷ್ ಸರ್ಕಾರ. ಬೇಟೆಯಾಡಿ ಸೆರೆಹಿಡಿದು ಗಲ್ಲಿಗೇರಿಸಿದ ನಾಲ್ವರು ಕ್ರಾಂತಿಕಾರಿಗಳ ಪೈಕಿ ಬಿಸ್ಮಿಲ್ ಮತ್ತು ಖಾನ್ ಪ್ರಮುಖರು. ಉಳಿದಿಬ್ಬರು ರಾಜೇಂದ್ರನಾಥ ಲಾಹಿರಿ ಮತ್ತು ರೋಶನ್ ಸಿಂಗ್.

ಯುವಕ ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. 1927ರ ಡಿಸೆಂಬರ್ 19ರಂದು ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು. ಸ್ವಾತಂತ್ರ್ಯದ ಜೊತೆಗೆ ಸಮಾನತೆ ಸಾಧಿಸುವುದೂ ಅಶ್ಫಾಕ್ ಆಸೆಯಾಗಿತ್ತು.

“ಬಡವರು ಸಂತಸದಿಂದ ಸಲೀಸಾಗಿ ಬಾಳುವೆ ಮಾಡಲು ಸಾಧ್ಯವಿರುವಂತಹ ಸ್ವಾತಂತ್ರ್ಯ ಹಿಂದೂಸ್ತಾನಕ್ಕೆ ಬೇಕಿದೆ. ವರ್ಕ್‍ಶಾಪಿನಲ್ಲಿ ಕೆಲಸ ಮಾಡುವ ಮೆಕ್ಯಾನಿಕ್ ಅಬ್ದುಲ್ಲಾ, ಚಪ್ಪಲಿ ಹೊಲೆಯುವ ಧನಿಯಾ ಹಾಗೂ ಸಾಧಾರಣ ರೈತರು ಲಖ್ನೋದ ನವಾಬರ ಅರಮನೆಯಲ್ಲಿ ಗಣ್ಯರ ಮುಂದಿನ ಸಾಲುಗಳ ಕುರ್ಚಿಗಳಲ್ಲಿ ಇದಿರುಬದಿರಾಗಿ ಕುಳಿತುಕೊಳ್ಳುವ ದಿನಗಳು ಬರಬೇಕೆಂದು ದೇವರಲ್ಲಿ ಪ್ರಾರ್ಥಿಸುವೆ. ಕಮ್ಯುನಿಸ್ಟರೊಂದಿಗೆ ನನ್ನ ಸಮಹಮತವಿದೆ. ಬಡರೈತರು ಮತ್ತು ಅಸಹಾಯಕ ಕಾರ್ಮಿಕರಿಗಾಗಿ ನನ್ನ ಹೃದಯ ಸದಾ ಅಳುತ್ತಿರುತ್ತದೆ. ಕಾಕೋರಿ ದರೋಡೆ ಪ್ರಕರಣದ ನಂತರ ತಲೆ ಮರೆಸಿಕೊಂಡು ತಿರುಗುತ್ತಿದ್ದಾಗ ಇಂತಹ ಕುಟುಂಬಗಳೊಂದಿಗೆ ವಾಸವಿದ್ದೆ. ಅವರ ಬವಣೆ ನನ್ನ ಕಣ್ಣುಗಳ ತೇವವಾಗಿಸಿತ್ತು. ನಮ್ಮ ಪೇಟೆ ಪಟ್ಟಣ ನಗರಗಳು ಥಳಗುಟ್ಟುವುದು ಇವರಿಂದಾಗಿಯೇ. ನಮ್ಮ ಗಿರಣಿಗಳು, ಕಾರ್ಖಾನೆಗಳು ನಡೆಯುವ ಹಿಂದಿನ ಶ್ರಮ ಇವರದೇ. ಪ್ರಪಂಚದ ಪ್ರತಿ ಕಾಮಗಾರಿಯ ಹಿಂದೆ ಇರುವುದು ಇವರದೇ ಬೆವರು. ಬೆಳೆಯುವ-ಉತ್ಪಾದಿಸುವ ಈ ಶ್ರಮಿಕರನ್ನು ದುಃಖ-ದುಸ್ಥಿತಿಗಳು ಬಿಡದೆ ಬೆಂಬತ್ತಿವೆ. ಅವರ ಈ ಕಷ್ಟ ಕಣ್ಣೀರಿನ ಮೂಲಕಾರಣ ಬಿಳಿತೊಗಲಿನ ಒಡೆಯರು ಮತ್ತು ಅವರ ಏಜೆಂಟರು. ಹಳ್ಳಿ ಹಳ್ಳಿಗೆ ಹೋಗಿ, ಗಿರಣಿ ಕಾರ್ಖಾನೆಗಳಿಗೆ ತೆರಳಿ ಅವರ ದುಸ್ಥಿತಿಯನ್ನು ಅಧ್ಯಯನ ಮಾಡಬೇಕು ಮತ್ತು ಅವರಲ್ಲಿ ರಾಜಕೀಯ ಎಚ್ಚರವನ್ನು ಮೂಡಿಸಬೇಕು” ಎಂಬುದು ಖಾನ್‍ನ ಅಂತಿಮ ಸಂದೇಶವಾಗಿತ್ತು. ಆರ್ಥಿಕ ಸ್ವಾತಂತ್ರ್ಯದ ಜೊತೆ ಜೊತೆಗೆ ಸಾಮಾಜಿಕ-ಸಾಂಸ್ಕೃತಿಕ ಸಮಾನತೆಯೂ ಈ ಸಂದೇಶದಲ್ಲಿ ಸೇರಿತ್ತು ಎಂಬುದನ್ನು ಗಮನಿಸಬೇಕಿದೆ.

ಎಲ್ಲ ಬಗೆಯ ಪರಕೀಯ ಆಳ್ವಿಕೆ ನ್ಯಾಯಬಾಹಿರ. ಅಂಚಿನಲ್ಲಿ ಜೋತುಬಿದ್ದು ಜೀವ ಹಿಡಿದ ದೀನ ದರಿದ್ರರ ಹಕ್ಕುಗಳನ್ನು ಮಾನ್ಯ ಮಾಡದಿರುವ, ಬಂಡವಾಳಶಾಹಿಗಳು ಮತ್ತು ಜಮೀನುದಾರರ ಹಿತವನ್ನು ಕಾಪಾಡುವ, ಕಾರ್ಮಿಕರು ಮತ್ತು ರೈತರ ಸಮಾನ ಭಾಗವಹಿಸುವಿಕೆ ಇಲ್ಲದಿರುವ ಹಾಗೂ ಯಥಾಸ್ಥಿತಿವಾದಿ ತಾರತಮ್ಯಗಳು ಮತ್ತು ವಿಶೇಷಾಧಿಕಾರಗಳನ್ನು ಕಾಪಾಡಲು ಕಾಯಿದೆ ಕಾನೂನು ಮಾಡುವ ಯಾವುದೇ ಸರ್ಕಾರ ಕೂಡ ನ್ಯಾಯಬಾಹಿರ. ಭಾರತ ಸ್ವತಂತ್ರ ದೇಶವಾಗಿ ನಮ್ಮದೇ ಜನರ ಸರ್ಕಾರ ಬಂದ ನಂತರವೂ ಬಡವರು-ಬಲ್ಲಿದರು, ಉಳುವವರು-ಜಮೀನುದಾರರ ನಡುವಣ ತಾರತಮ್ಯ ಎಂದಿನಂತೆ ಕೊನೆಸಾಗಿದರೆ ಅದಕ್ಕಿಂತ ಹೀನಾಯ ಮತ್ತೊಂದೇನಿದೆ. ಸಮಾನತೆ ಎಂಬುದು ನೆಲೆಸುವ ತನಕ ಸ್ವಾತಂತ್ರ್ಯವನ್ನು ನೀಡಬೇಡ ಎಂದು ದೇವರಲ್ಲಿ ಪ್ರಾರ್ಥಿಸುವೆ. ಇಂತಹ ನಂಬಿಕೆಗಾಗಿ ನನಗೆ ಕಮ್ಯುನಿಸ್ಟ್ ಎಂಬ ಹಣೆಪಟ್ಟಿ ಹಚ್ಚಿದರೂ ಪರವಾಗಿಲ್ಲ. ನಾನು ದೇವರಲ್ಲಿ ನಂಬಿಕೆ ಉಳ್ಳವನು. ದೇವರು ಎಲ್ಲರನ್ನೂ ಸಮಾನರನ್ನಾಗಿಯೇ ಸೃಷ್ಟಿಸುತ್ತಾನೆ ಎಂಬ ಅಶ್ಫಾಕ್ ಮಾತುಗಳಲ್ಲಿ ಆವರ ಮಾನವೀಯ ಚಿಂತನೆ ಹರಳುಗಟ್ಟಿದೆ. ಹಿಂದೂ-ಮುಸ್ಲಿಮರನ್ನು ಒಡೆವ ಪಿತೂರಿಯ ಕುರಿತೂ ಆತ ಮಾತಾಡಿದ್ದರು. ಅಂತಹವರೇ ದೇಶದ ನಿಜ ಶತ್ರುಗಳು ಎಂದು ಬಣ್ಣಿಸಿದ್ದರು.

ಅಶ್ಫಾಕ್ ಶಂಕೆ- ಸಂದೇಹಗಳು ಇಂದಿನ ಭಾರತದಲ್ಲಿ ನಿಜರೂಪ ಧರಿಸಿ ಅಬ್ಬರಿಸಿವೆ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...