Homeಅಂಕಣಗಳುಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕುಲ್ಲಾ ಖಾನ್ ಎಂಬ ಅಪ್ಪಟ ದೇಶಪ್ರೇಮಿಯ ನೆನೆಯುತ್ತಾ: ಡಿ.ಉಮಾಪತಿ

ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. ಆತ ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು.

- Advertisement -
- Advertisement -

ಅಶ್ಫಾಕುಲ್ಲಾ ಖಾನ್ ಬದುಕಿದ್ದಿದ್ದರೆ ಇದೇ ಅಕ್ಟೋಬರ್ 22ರಂದು ಅವರಿಗೆ 120 ವರ್ಷ ತುಂಬುತ್ತಿತ್ತು. ಉತ್ತರಪ್ರದೇಶದ ಶಹಜಹಾನಪುರ ಆತನ ಹುಟ್ಟೂರು. ಖಾನ್ ಬೆಳೆದದ್ದು ಗಾಂಧೀಜಿ ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ನೀಡದಂತೆ ಕರೆ ನೀಡಿ ಅಸಹಕಾರ ಚಳವಳಿ ಹೂಡಿದ್ದ ದಿನಗಳಲ್ಲಿ.

ಹಿಂದುಸ್ತಾನಿ ರಿಪಬ್ಲಿಕನ್ ಅಸೋಸಿಯೇಷನ್‍ನ (ಎಚ್.ಆರ್.ಎ) ಕ್ರಾಂತಿಕಾರಿ ತಲೆಯಾಳು ರಾಮಪ್ರಸಾದ್ ಬಿಸ್ಮಿಲ್ ಸಂಗಡ 1924ರಲ್ಲಿ ಕಾಕೋರಿ ರೈಲು ದರೋಡೆಯಲ್ಲಿ ಭಾಗವಹಿಸಿದ್ದ ಖಾನ್ ಕೇವಲ 27ನೆಯ ವಯಸ್ಸಿನಲ್ಲಿ ಬ್ರಿಟಿಷರ ನೇಣುಗಂಬಕ್ಕೆ ಕೊರಳೊಡ್ಡಿದ ಹುತಾತ್ಮ. ಬ್ರಿಟಿಷ್ ವಿರೋಧಿ ಬೆಂಕಿಯುಂಡೆ.
ಕಾಕೋರಿಯಿಂದ ಲಖ್ನೋಗೆ ರೈಲುಗಾಡಿಯಲ್ಲಿ ಸಾಗಿಸಲಾಗುತ್ತಿದ್ದ ಬ್ರಿಟಿಷ್ ಸರ್ಕಾರಿ ಖಜಾನೆಯನ್ನು ಲೂಟಿ ಮಾಡಿ, ಆ ಹಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಬೇಕಾಗಿದ್ದ ಹತಾರುಗಳನ್ನು ಖರೀದಿಸುವುದು ಕಾಕೋರಿ ದರೋಡೆ ಹಿಂದಿನ ಕಾರ್ಯಸೂಚಿಯಾಗಿತ್ತು.

ಉರ್ದು ಕಾವ್ಯವೆಂದರೆ ಖಾನ್‍ಗೆ ಅಚ್ಚುಮೆಚ್ಚು. ವಾರಸಿ ಇಲ್ಲವೇ ಹಜರತ್ ಕಾವ್ಯನಾಮದೊಂದಿಗೆ ಬರೆಯುತ್ತಿದ್ದರು. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ರಾಮಪ್ರಸಾದ್ ಬಿಸ್ಮಿಲ್ ಕೂಡ ಸ್ವಾತಂತ್ರ್ಯ ಹೋರಾಟದ ಕೆಚ್ಚಿಗೆ ಮತ್ತು ಉರ್ದು ಕವಿತೆಗೆ ಹೆಸರಾಗಿದ್ದವರು. ಅವರ ಉರ್ದು ಕಾವ್ಯಪ್ರತಿಭೆ ಮತ್ತು ಕಲಿತನದ ಕತೆಗಳನ್ನು ಎಳೆಯ ಖಾನ್ ತನ್ನ ಅಣ್ಣನಿಂದ ಕೇಳಿ ಅರಿತಿದ್ದ. ಅವಕ್ಕೆ ಮಾರುಹೋಗಿ ಅಭಿಮಾನಿಯೇ ಆಗಿಬಿಟ್ಟಿದ್ದ. ಚೌರಿಚೌರಾ ಹಿಂಸಾತ್ಮಕ ಘಟನೆಯ ನಂತರ ಗಾಂಧೀಜಿ ತಮ್ಮ ಅಸಹಕಾರ ಚಳವಳಿಯನ್ನು ವಾಪಸು ತೆಗೆದುಕೊಂಡಿದ್ದರು. ಅವರ ಈ ಹೆಜ್ಜೆ ಸಾವಿರಾರು ಯುವ ಕ್ರಾಂತಿಕಾರಿಗಳಿಗೆ ತೀವ್ರ ನಿರಾಶೆ ಉಂಟು ಮಾಡಿತ್ತು. ಅಹಿಂಸಾತ್ಮಕ ಹಾದಿ ಕುರಿತು ಅವರಲ್ಲಿ ಭ್ರಮನಿರಸನ ಮೂಡಿಸಿತ್ತು. ಈ ಪೈಕಿ ಅಶ್ಫಾಕುಲ್ಲಾ ಖಾನ್ ಕೂಡ ಒಬ್ಬನಾಗಿದ್ದ. ರಾಮಪ್ರಸಾದ್ ಬಿಸ್ಮಿಲ್ ಸಂಘಟನೆಯನ್ನು (ಎಚ್.ಆರ್.ಎ) ಸೇರಲು ತವಕಿಸಿದ. ಆದರೆ ಸೇರಿಸಿಕೊಳ್ಳಲು ಆರಂಭದಲ್ಲಿ ಬಿಸ್ಮಿಲ್ ಉತ್ಸುಕತೆ ತೋರಲಿಲ್ಲ. ಶಹಜಹಾನಪುರದ ಇತರೆ ಪಠಾಣ ಕುಟುಂಬಗಳಂತೆ ಖಾನ್ ಕುಟುಂಬ ಕೂಡ ಸಿರಿವಂತಿಕೆ ಸೂಸಿತ್ತು. ತಂದೆ ಕೊತ್ವಾಲ ಹುದ್ದೆಯಲ್ಲಿದ್ದರು. ಅಂತಿಮವಾಗಿ ಇಬ್ಬರನ್ನೂ ಹತ್ತಿರ ತಂದದ್ದು ಉರ್ದು ಕವಿತೆಯೆಡೆಗಿನ ಕಡುಪ್ರೇಮ ಮತ್ತು ತಾಯ್ನೆಲವನ್ನು ದಾಸ್ಯದಿಂದ ಬಿಡಿಸುವ ಪಣ ತೊಟ್ಟ ನಿಗಿನಿಗಿ ದೇಶಭಕ್ತಿ. ಬ್ರಾಹ್ಮಣ ಮತ್ತು ಮುಸ್ಲಿಮ್ ತರುಣರಿಬ್ಬರು ಪ್ರಸಿದ್ಧ ಪ್ರಾಣಸ್ನೇಹಿತರಾಗಿ ಇತಿಹಾಸ ಸೇರಿದರು.

PC : Facebook

ಬಂದೂಕು, ಬಾಂಬುಗಳಂತಹ ಹತಾರುಗಳ ಖರೀದಿಗೆ ಹಣ ಹೊಂದಿಸಲು ಇಬ್ಬರೂ ಹೂಡಿದ ಹಂಚಿಕೆ ಕಾಕೋರಿ ರೈಲು ದರೋಡೆ. 1925ರ ಆಗಸ್ಟ್ ಒಂಬತ್ತರ ದರೋಡೆಯ ನಂತರ ಇವರಿಗೆ ಭಯೋತ್ಪಾದಕರು ಎಂಬ ಹಣೆಪಟ್ಟಿ ಹಚ್ಚುತ್ತದೆ ಬ್ರಿಟಿಷ್ ಸರ್ಕಾರ. ಬೇಟೆಯಾಡಿ ಸೆರೆಹಿಡಿದು ಗಲ್ಲಿಗೇರಿಸಿದ ನಾಲ್ವರು ಕ್ರಾಂತಿಕಾರಿಗಳ ಪೈಕಿ ಬಿಸ್ಮಿಲ್ ಮತ್ತು ಖಾನ್ ಪ್ರಮುಖರು. ಉಳಿದಿಬ್ಬರು ರಾಜೇಂದ್ರನಾಥ ಲಾಹಿರಿ ಮತ್ತು ರೋಶನ್ ಸಿಂಗ್.

ಯುವಕ ಅಶ್ಫಾಕ್ ಒಂದೊಮ್ಮೆ ರಷ್ಯಾದ ಕ್ರಾಂತಿಕಾರಿ ನಾಯಕ ವ್ಲಾದಿಮಿರ್ ಲೆನಿನ್‍ಗೆ ಪತ್ರ ಬರೆಯಬಯಸಿದ್ದ. 1927ರ ಡಿಸೆಂಬರ್ 19ರಂದು ಗಲ್ಲಿಗೇರುವ ಮುನ್ನ ಆತನ ಸಂದೇಶವನ್ನು ಸೆರೆಮನೆಯಿಂದ ಕದ್ದು ಹೊರ ಸಾಗಿಸಲಾಗಿತ್ತು. ಸ್ವಾತಂತ್ರ್ಯದ ಜೊತೆಗೆ ಸಮಾನತೆ ಸಾಧಿಸುವುದೂ ಅಶ್ಫಾಕ್ ಆಸೆಯಾಗಿತ್ತು.

“ಬಡವರು ಸಂತಸದಿಂದ ಸಲೀಸಾಗಿ ಬಾಳುವೆ ಮಾಡಲು ಸಾಧ್ಯವಿರುವಂತಹ ಸ್ವಾತಂತ್ರ್ಯ ಹಿಂದೂಸ್ತಾನಕ್ಕೆ ಬೇಕಿದೆ. ವರ್ಕ್‍ಶಾಪಿನಲ್ಲಿ ಕೆಲಸ ಮಾಡುವ ಮೆಕ್ಯಾನಿಕ್ ಅಬ್ದುಲ್ಲಾ, ಚಪ್ಪಲಿ ಹೊಲೆಯುವ ಧನಿಯಾ ಹಾಗೂ ಸಾಧಾರಣ ರೈತರು ಲಖ್ನೋದ ನವಾಬರ ಅರಮನೆಯಲ್ಲಿ ಗಣ್ಯರ ಮುಂದಿನ ಸಾಲುಗಳ ಕುರ್ಚಿಗಳಲ್ಲಿ ಇದಿರುಬದಿರಾಗಿ ಕುಳಿತುಕೊಳ್ಳುವ ದಿನಗಳು ಬರಬೇಕೆಂದು ದೇವರಲ್ಲಿ ಪ್ರಾರ್ಥಿಸುವೆ. ಕಮ್ಯುನಿಸ್ಟರೊಂದಿಗೆ ನನ್ನ ಸಮಹಮತವಿದೆ. ಬಡರೈತರು ಮತ್ತು ಅಸಹಾಯಕ ಕಾರ್ಮಿಕರಿಗಾಗಿ ನನ್ನ ಹೃದಯ ಸದಾ ಅಳುತ್ತಿರುತ್ತದೆ. ಕಾಕೋರಿ ದರೋಡೆ ಪ್ರಕರಣದ ನಂತರ ತಲೆ ಮರೆಸಿಕೊಂಡು ತಿರುಗುತ್ತಿದ್ದಾಗ ಇಂತಹ ಕುಟುಂಬಗಳೊಂದಿಗೆ ವಾಸವಿದ್ದೆ. ಅವರ ಬವಣೆ ನನ್ನ ಕಣ್ಣುಗಳ ತೇವವಾಗಿಸಿತ್ತು. ನಮ್ಮ ಪೇಟೆ ಪಟ್ಟಣ ನಗರಗಳು ಥಳಗುಟ್ಟುವುದು ಇವರಿಂದಾಗಿಯೇ. ನಮ್ಮ ಗಿರಣಿಗಳು, ಕಾರ್ಖಾನೆಗಳು ನಡೆಯುವ ಹಿಂದಿನ ಶ್ರಮ ಇವರದೇ. ಪ್ರಪಂಚದ ಪ್ರತಿ ಕಾಮಗಾರಿಯ ಹಿಂದೆ ಇರುವುದು ಇವರದೇ ಬೆವರು. ಬೆಳೆಯುವ-ಉತ್ಪಾದಿಸುವ ಈ ಶ್ರಮಿಕರನ್ನು ದುಃಖ-ದುಸ್ಥಿತಿಗಳು ಬಿಡದೆ ಬೆಂಬತ್ತಿವೆ. ಅವರ ಈ ಕಷ್ಟ ಕಣ್ಣೀರಿನ ಮೂಲಕಾರಣ ಬಿಳಿತೊಗಲಿನ ಒಡೆಯರು ಮತ್ತು ಅವರ ಏಜೆಂಟರು. ಹಳ್ಳಿ ಹಳ್ಳಿಗೆ ಹೋಗಿ, ಗಿರಣಿ ಕಾರ್ಖಾನೆಗಳಿಗೆ ತೆರಳಿ ಅವರ ದುಸ್ಥಿತಿಯನ್ನು ಅಧ್ಯಯನ ಮಾಡಬೇಕು ಮತ್ತು ಅವರಲ್ಲಿ ರಾಜಕೀಯ ಎಚ್ಚರವನ್ನು ಮೂಡಿಸಬೇಕು” ಎಂಬುದು ಖಾನ್‍ನ ಅಂತಿಮ ಸಂದೇಶವಾಗಿತ್ತು. ಆರ್ಥಿಕ ಸ್ವಾತಂತ್ರ್ಯದ ಜೊತೆ ಜೊತೆಗೆ ಸಾಮಾಜಿಕ-ಸಾಂಸ್ಕೃತಿಕ ಸಮಾನತೆಯೂ ಈ ಸಂದೇಶದಲ್ಲಿ ಸೇರಿತ್ತು ಎಂಬುದನ್ನು ಗಮನಿಸಬೇಕಿದೆ.

ಎಲ್ಲ ಬಗೆಯ ಪರಕೀಯ ಆಳ್ವಿಕೆ ನ್ಯಾಯಬಾಹಿರ. ಅಂಚಿನಲ್ಲಿ ಜೋತುಬಿದ್ದು ಜೀವ ಹಿಡಿದ ದೀನ ದರಿದ್ರರ ಹಕ್ಕುಗಳನ್ನು ಮಾನ್ಯ ಮಾಡದಿರುವ, ಬಂಡವಾಳಶಾಹಿಗಳು ಮತ್ತು ಜಮೀನುದಾರರ ಹಿತವನ್ನು ಕಾಪಾಡುವ, ಕಾರ್ಮಿಕರು ಮತ್ತು ರೈತರ ಸಮಾನ ಭಾಗವಹಿಸುವಿಕೆ ಇಲ್ಲದಿರುವ ಹಾಗೂ ಯಥಾಸ್ಥಿತಿವಾದಿ ತಾರತಮ್ಯಗಳು ಮತ್ತು ವಿಶೇಷಾಧಿಕಾರಗಳನ್ನು ಕಾಪಾಡಲು ಕಾಯಿದೆ ಕಾನೂನು ಮಾಡುವ ಯಾವುದೇ ಸರ್ಕಾರ ಕೂಡ ನ್ಯಾಯಬಾಹಿರ. ಭಾರತ ಸ್ವತಂತ್ರ ದೇಶವಾಗಿ ನಮ್ಮದೇ ಜನರ ಸರ್ಕಾರ ಬಂದ ನಂತರವೂ ಬಡವರು-ಬಲ್ಲಿದರು, ಉಳುವವರು-ಜಮೀನುದಾರರ ನಡುವಣ ತಾರತಮ್ಯ ಎಂದಿನಂತೆ ಕೊನೆಸಾಗಿದರೆ ಅದಕ್ಕಿಂತ ಹೀನಾಯ ಮತ್ತೊಂದೇನಿದೆ. ಸಮಾನತೆ ಎಂಬುದು ನೆಲೆಸುವ ತನಕ ಸ್ವಾತಂತ್ರ್ಯವನ್ನು ನೀಡಬೇಡ ಎಂದು ದೇವರಲ್ಲಿ ಪ್ರಾರ್ಥಿಸುವೆ. ಇಂತಹ ನಂಬಿಕೆಗಾಗಿ ನನಗೆ ಕಮ್ಯುನಿಸ್ಟ್ ಎಂಬ ಹಣೆಪಟ್ಟಿ ಹಚ್ಚಿದರೂ ಪರವಾಗಿಲ್ಲ. ನಾನು ದೇವರಲ್ಲಿ ನಂಬಿಕೆ ಉಳ್ಳವನು. ದೇವರು ಎಲ್ಲರನ್ನೂ ಸಮಾನರನ್ನಾಗಿಯೇ ಸೃಷ್ಟಿಸುತ್ತಾನೆ ಎಂಬ ಅಶ್ಫಾಕ್ ಮಾತುಗಳಲ್ಲಿ ಆವರ ಮಾನವೀಯ ಚಿಂತನೆ ಹರಳುಗಟ್ಟಿದೆ. ಹಿಂದೂ-ಮುಸ್ಲಿಮರನ್ನು ಒಡೆವ ಪಿತೂರಿಯ ಕುರಿತೂ ಆತ ಮಾತಾಡಿದ್ದರು. ಅಂತಹವರೇ ದೇಶದ ನಿಜ ಶತ್ರುಗಳು ಎಂದು ಬಣ್ಣಿಸಿದ್ದರು.

ಅಶ್ಫಾಕ್ ಶಂಕೆ- ಸಂದೇಹಗಳು ಇಂದಿನ ಭಾರತದಲ್ಲಿ ನಿಜರೂಪ ಧರಿಸಿ ಅಬ್ಬರಿಸಿವೆ.


ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...